ಏಳು ಜಿಲ್ಲೆಗಳಲ್ಲಿ 7 ಹೊಸ ವಿಶ್ವವಿದ್ಯಾಲಯ ಸ್ಥಾಪನೆ: ವಿಧೇಯಕ ಅಂಗೀಕಾರ
ಬೆಂಗಳೂರು, ಸೆಪ್ಟಂಬರ್ 22: ಪ್ರಸಕ್ತ ವಿಧಾನ ಮಂಡಲ ಅಧಿವೇಶನದ ಬುಧವಾರದ ಕಲಾಪದಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆ -2022 ಅನ್ನು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು. ಇದರೊಂದಿಗೆ ರಾಜ್ಯದಲ್ಲಿ ಹೊಸದಾಗಿ ಎಂಟು ವಿಶ್ವವಿದ್ಯಾಲಯಗಳು ಸ್ಥಾಪನೆ ಆಗಲಿವೆ.
ರಾಜ್ಯದಲ್ಲಿ ಸದ್ಯ 25 ಖಾಸಗಿ ಮತ್ತು 11 ಡೀಮ್ಡ್ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು 69 ವಿಶ್ವವಿದ್ಯಾಲಯಗಳಿವೆ. ಈ ಮಸೂದೆ ಅಂಗೀಕಾರದಿಂದ ಮುಂದಿನ ದಿನಗಳಲ್ಲಿ ಹಾವೇರಿ, ಬೀದರ್, ಚಾಮರಾಜನಗರ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾಲಯವನ್ನು ಸರ್ಕಾರ ಸ್ಥಾಪಿಸಲಿದೆ. ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿರುವ ಏಕೀಕೃತ ಪದವಿ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವಥ್ ನಾರಾಯಣ ಹೇಳಿದರು.
ಇದಕ್ಕೂ ಮೊದಲ ವಿಧೇಯಕ ಮಂಡಿಸಿದ ಅವರು, 22 ವರ್ಷಗಳಲ್ಲಿ ಈ ಕಾಯಿದೆ ಮೊದಲ ಬಾರಿಗೆ ತಿದ್ದುಪಡಿಗೆ ಒಳಗಾಗಿದೆ. ಬದಲಾದ ಸನ್ನಿವೇಶ, ವಾಸ್ತವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಜಿಲ್ಲೆಯಲ್ಲು ಸಹ ವಿಶ್ವವಿದ್ಯಾಲಯ ನಿರ್ಮಿಸಲಾಗುವುದು. ಸರ್ಕಾರ ಉನ್ನತ ಶಿಕ್ಷಣದಲ್ಲಿ ಸಬಲೀಕರಣ ಮತ್ತು ಸಮಾನತೆಯನ್ನು ಖಚಿತಪಡಿಸಲಿದೆ ಎಂದು ಅವರು ಭರವಸೆ ನೀಡಿದರು.

ವಿಶ್ವವಿದ್ಯಾಲಯಗಳ ಸ್ಥಾಪನೆಯ ಅಂದಾಜು ವೆಚ್ಚ ಕುರಿತು ಪ್ರಸ್ತಾಪಿಸಿದ ಅಶ್ವಥ್ ನಾರಾಯಣ್, ರಾಜ್ಯ ಸರ್ಕಾರ ವಿವಿ ಸ್ಥಾಪನೆಗೆ ಆರಂಭಿಕವಾಗಿ 14 ಕೋಟಿ ರೂ. ವ್ಯಯಿಸುತ್ತದೆ. ನಂತರ ಪ್ರತಿ ವಿಶ್ವವಿದ್ಯಾಲಯಕ್ಕೆ ವರ್ಷಕ್ಕೆ 2ಕೋಟಿ ರೂ. ಮೀಸಲಿಡಲಿದ್ದು, ಪ್ರತಿ ಜಿಲ್ಲೆಯಲ್ಲೂ ಒಂದು ವಿಶ್ವವಿದ್ಯಾನಿಲಯವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಗೆ ಅನುಗುಣವಾಗಿರಲಿದೆ ಎಂದರು.
ಹೊಸ ವಿವಿ ಸ್ಥಾಪನೆಯಲ್ಲಿ 2 ಜಿಲ್ಲೆ ಹೆಸರಿಲ್ಲ:
ಮಸೂದೆ ಮಂಡನೆ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಸದನದಲ್ಲಿ ಶಾಸಕರಿಂದ ತೀವ್ರವಾದ ಪ್ರತಿಕ್ರಿಯೆಗಳು ಕೇಳಿಬಂದವು. ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಹೊರಗಿಡಲಾಗಿದೆ ಏಕೆ? ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದರು. ಅಲ್ಲದೇ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯಗಳ ಗುಣಮಟ್ಟ ಕುಸಿಯುತ್ತಿದೆ. ಹೊಸ ವಿಶ್ವವಿದ್ಯಾಲಯ ಹುಟ್ಟುಹಾಕಲು ಮೊದಲು ಹಾಲಿ ವಿಶ್ವವಿದ್ಯಾಲಯಗಳಲ್ಲಿನ ಶಿಕ್ಷಣದ ಗುಣಮಟ್ಟ, ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಸಮಗ್ರ ಸುಧಾರಣೆಗೆ ಸರ್ಕಾರ ಗಮನಹರಿಸಬೇಕೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸ್ಪೀಕರ್ ಸೂಚಿಸಿದರು.

ಶಿಕ್ಷಣದ ಗುಣಮಟ್ಟ ಸುಧಾರಿಸಲು ಸಲಹೆ
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ರಾಜಕೀಯ ಲಾಭ ಪಡೆಯಲು ಈ ನಿರ್ಧಾರ ಮಾಡಲಾಗಿದೆ. 14 ಕೋಟಿ ರೂ.ನಲ್ಲಿ ವಿಶ್ವವಿದ್ಯಾಲಯ ಹೇಗೆ ಸ್ಥಾಪಿಸಬಹುದು? ಎಂದರು. ಪೂರ್ಣಪ್ರಮಾಣದ ವಿಶ್ವವಿದ್ಯಾನಿಲಯ ಸ್ಥಾಪಿಸಲು 100 ಕೋಟಿ ರೂ.ಗಿಂತ ಹೆಚ್ಚು ಹಣದ ಅಗತ್ಯವಿದೆ ಎಂದು ಸೂಚಿಸಿದ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಹೇಳಿದರು. ಹೊಸ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿ ಇನ್ನಷ್ಟು ಶೋಚನೀಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಶಾಸಕ ಯು.ಟಿ.ಖಾದರ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಶಾಸಕರು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯಗಳ ಶಿಕ್ಷಣದ ಗುಣಮಟ್ಟ ಸುಧಾರಿಸಿ. ಇರುವ ಸಮಸ್ಯೆಗಳನ್ನು ಪರಿಹರಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications