ಹುಬ್ಬಳ್ಳಿ, ವಿಜಯಪುರದಲ್ಲಿ 7 ಮಂದಿ ಪೊಲೀಸರಿಗೆ ಕ್ವಾರೆಂಟೈನ್
ಹುಬ್ಬಳ್ಳಿ, ಏಪ್ರಿಲ್ 13: ಕೊರೊನಾ ವಿರುದ್ಧ ಹೋರಾಡುತ್ತಿರುವವರ ಪೈಕಿ ಪೊಲೀಸ್ ಇಲಾಖೆಯ ಶ್ರಮವನ್ನು ಮೆಚ್ಚಬೇಕು. ತಮ್ಮ ಆರೋಗ್ಯವನ್ನು ಲೆಕ್ಕಿಸದೇ, ತಮ್ಮ ಕುಟುಂಬದವರಿಂದಲೂ ದೂರವಿದ್ದು, ಸಾರ್ವಜನಿಕರ ರಕ್ಷಣೆಗಾಗಿ ಟೊಂಕ ಕಟ್ಟಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇಂತಹ ಪೊಲೀಸರಿಗೂ ಕೊರೊನಾ ಕಾಟ ತಪ್ಪಿದ್ದಲ್ಲ. ಕೊರೊನಾ ರೋಗಿಗಳ ಜೊತೆ ಹಾಗೂ ರೋಗಿಗಳ ಕುಟುಂಬದ ಜೊತೆ ಸಂಪರ್ಕದಲ್ಲಿದ್ದ ಕಾರಣ ಹುಬ್ಬಳ್ಳಿ ಮತ್ತು ವಿಜಯಪುರದಲ್ಲಿ ಏಳು ಜನ ಪೊಲೀಸರು ಕ್ವಾರೆಂಟೈನ್ ಮೊರೆ ಹೋಗಿದ್ದಾರೆ.
ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಐದು ಜನ ಪೊಲೀಸರನ್ನು ಕ್ವಾರೆಂಟೈನ್ಗೆ ಕಳುಹಿಸಲಾಗಿದೆ. ಮುಲ್ಲಾ ಓಣಿಯಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆತನ ಜೊತೆ ಈ ಪೊಲೀಸರು ಪ್ರಾಥಮಿಕ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ. ರೋಗದ ಲಕ್ಷಣಗಳು ಕೂಡ ಕಾಣಿಸಿವೆ. ಐದು ಜನರ ಪೈಕಿ ಮೂವರು ಪೊಲೀಸರು ಹಿರಿಯರಾಗಿದ್ದು, ಇಬ್ಬರು ಯುವ ಪೊಲೀಸರು.

ಮುಲ್ಲಾ ಓಣಿಯಲ್ಲಿ ಕೊರೊನಾ ಶಂಕಿತನ ಬಳಿ ಮಾಹಿತಿ ಸಂಗ್ರಹಿಸಲು ಪೊಲೀಸರು ಹೋಗಿದ್ದರು. ಈ ವೇಳೆ ಗ್ಲೌಸ್ ತೊಡದೆ ಆತ ನೀಡಿದ ದಾಖಲೆ ಪಡೆದುಕೊಂಡಿದ್ದರು. ಅದಾದ ಸ್ವಲ್ಪ ದಿನದ ಬಳಿಕ ಆತನಿಗೆ ಸೋಂಕು ದೃಢವಾಗಿತ್ತು. ಹೀಗಾಗಿ, ಎಎಸ್ಐ, ಮುಖ್ಯ ಪೇದೆ ಹಾಗೂ ಮೂವರು ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಿಸಿ, ಕೈಗೆ ಸೀಲ್ ಹಾಕಿ ಹೋಮ್ ಕ್ವಾರೆಂಟೈನ್ ಸೂಚಿಸಲಾಗಿದೆ.
ಈ ಕಡೆ ವಿಜಯಪುರದಲ್ಲಿಯೂ ಇಬ್ಬರು ಪೊಲೀಸರಿಗೆ ಕ್ವಾರೆಂಟೈನ್ ಸೂಚಿಸಲಾಗಿದೆ. ವಿಜಯಪುರದ ಚಪ್ಪರ್ಬಂದ್ ಪ್ರದೇಶದಲ್ಲಿ ಸೋಂಕಿತೆ ಮಹಿಳೆ ಮನೆಗೆ ಮಾಹಿತಿ ಸಂಗ್ರಹಿಸಲು ಹೋಗಿದ್ದರು. ಹಾಗಾಗಿ, ಗೋಳಗುಮ್ಮಟ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಒಬ್ಬ ಪೇದೆಯನ್ನು ಕ್ವಾರೆಂಟೈನ್ನಲ್ಲಿ ಇರಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
-
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
Dharavi Slum: ಏಷ್ಯಾದ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಬಡತನವೂ ಬಂಡವಾಳ, ಧಾರಾವಿ ಸಂಪೂರ್ಣ ವಿವರ ಇಲ್ಲಿದೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಇರಾನ್-ಇಸ್ರೇಲ್ ಸಂಘರ್ಷ: ಕತಾರ್ನಲ್ಲಿ LNG ಉತ್ಪಾದನೆ ಸ್ಥಗಿತ: ಗಗನಕ್ಕೇರಿದ ತೈಲ ಮತ್ತು ಅನಿಲ ಬೆಲೆ -
Fuel Price: ತೀವ್ರಗೊಂಡ ಯುದ್ಧದ ಕಿಚ್ಚು, ಕಚ್ಚಾ ತೈಲ ದರ ಏರಿಕೆಯಾದರೂ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ












Click it and Unblock the Notifications