BTS-2020: ವರ್ಚುಯಲ್ ಮೇಳಕ್ಕೆ ನಿರೀಕ್ಷೆ ಮೀರಿ ಸ್ಪಂದನೆ!
ಬೆಂಗಳೂರು, ನ. 20: ಇದೇ ಮೊದಲ ಬಾರಿ ವರ್ಚುಯಲ್ ಆಗಿ ನಡೆಯುತ್ತಿರುವ 'ಬೆಂಗಳೂರು ತಂತ್ರಜ್ಞಾನ ಮೇಳ-2020'ಕ್ಕೆ ಮೊದಲ ದಿನ ಗುರುವಾರ (ನ. 19) ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ ಎಂದು ರಾಜ್ಯ ಐಟಿ-ಬಿಟಿ ಇಲಾಖೆ ಮಾಹಿತಿ ನೀಡಿದೆ.
ಬಿಟಿಎಸ್-2020 ಆನ್ ಲೈನ್ ವೇದಿಕೆಯೊಂದರಲ್ಲೇ 7000 ವ್ಯಾಪಾರೋದ್ಯಮಿಗಳು ನೋಂದಣಿ ಮಾಡಿ ಪಾಲ್ಗೊಂಡಿದ್ದಾರೆ. ಇದಲ್ಲದೇ ಇತರ 10,000 ಜನರು ಇದೇ ವೇದಿಕೆ ಮೂಲಕ ಆಸಕ್ತಿಯಿಂದ ಭಾಗವಹಿಸಿದರು. ಒಟ್ಟಾರೆ ಈ ವೇದಿಕೆ ಮೂಲಕ ಪಾಲ್ಗೊಂಡವರ ಸಂಖ್ಯೆ 17,000 ದಾಟಿದೆ. ಕಳೆದ ವರ್ಷ ಮೂರು ದಿನಗಳೂ ಸೇರಿ ಪಾಲ್ಗೊಂಡ ವ್ಯಾಪಾರೋದ್ಯಮಿಗಳ ಸಂಖ್ಯೆ 3,000 ಇತ್ತು ಎಂದು ರಾಜ್ಯ ಐಟಿ-ಬಿಟಿ ಇಲಾಖೆ ಮಾಹಿತಿ ನೀಡಿದೆ.

ಇದಲ್ಲದೇ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕೂಡ 2 ಕೋಟಿಗೂ ಹೆಚ್ಚು ಜನರನ್ನು ಇದು ತಲುಪಿದೆ, ಹೀಗಾಗಿ ಒಟ್ಟಾರೆ ದೇಶ-ವಿದೇಶಗಳ ಕೋಟ್ಯಂತರ ಜನರು ಅತ್ಯಧಿಕ ಸಂಖ್ಯೆಯಲ್ಲಿ ಇದರಲ್ಲಿ ಭಾಗಿಯಾಗಿದ್ದಾರೆ.

ಇದೇ ಮೊತ್ತಮೊದಲ ಬಾರಿಗೆ ವರ್ಚುಯಲ್ ಆಗಿ ನಡೆಯುತ್ತಿರುವ ಮೂರು ದಿನಗಳ 'ಬೆಂಗಳೂರು ತಂತ್ರಜ್ಞಾನ ಮೇಳ' (BTS-2020)ವನ್ನು ಗುರುವಾರ (ನ.19)ದಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಎರಡನೇ ದಿನವಾದ ಇಂದು ಮತ್ತು ನಾಳೆ (ನ.20 ಹಾಗೂ 21) ವಿವಿಧ ಗೋಷ್ಠಿಗಳು ನಡೆಯಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications