ವಿಧಾನ ಸಭಾ ಚುನಾವಣೆ : ರಾಜ್ಯದಲ್ಲಿ 72 ಲಕ್ಷ ಹೊಸ ಮತದಾರರು
ಬೆಂಗಳೂರು, ಮಾರ್ಚ್ 1 : ರಾಜ್ಯದಲ್ಲಿ 72 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ 2018 ರ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಒಟ್ಟು 15,56,141 ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. 9,17,368 ಹೆಸರುಗಳನ್ನು ತೆಗೆದು ಹಾಕಿದ್ದು, 2,73,213 ಹೆಸರನ್ನು ಬದಲಾಯಿಸಲಾಗಿದೆ. ಪರಿಷ್ಕರಣೆಗೆ ಒಟ್ಟು 29,95,538 ಅರ್ಜಿಗಳು ಬಂದಿದ್ದವು. 27,46,722 ಅರ್ಜಿಗಳನ್ನು ಪುರಸ್ಕರಿಸಲಾಯಿತು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮತದಾರರ ಸಂಖ್ಯೆ 2.21 ಲಕ್ಷ ಇದೆ. 2013 ರಲ್ಲಿ 1.83 ಲಕ್ಷ ಇತ್ತು. ಮತದಾರರ ಪಟ್ಟಿಗೆ ಮಹಿಳೆಯರ ದಾಖಲಾತಿ ಪ್ರಮಾಣ 2013 ಕ್ಕೆ ಹೋಲಿಸಿದರೆ ಶೇ 13 ರಷ್ಟು ಹೆಚ್ಚಳವಾಗಿದೆ. ಲಿಂಗಾನುಪಾತ 2013 ಚುನಾವಣೆಯಲ್ಲಿ 1000 ಕ್ಕೆ 958 ಇದ್ದದ್ದು 2018 ಕರಡು ಪಟ್ಟಿಯಲ್ಲಿ 972 ಕ್ಕೆ ಏರಿಕೆ ಆಗಿದೆ ಎಂದರು.

ಶೃಂಗೇರಿ ವಿಧಾನಸಭಾ ಕ್ಷೇತ್ರ ಅತಿ ಕಡಿಮೆ ಮತದಾರರನ್ನು (1,62,108) ಹೊಂದಿದೆ. ಇಲ್ಲಿ ಪುರುಷ ಮತದಾರರ ಸಂಖ್ಯೆ 80,378, ಮಹಿಳೆಯರ ಸಂಖ್ಯೆ 81,725. ಬೆಂಗಳೂರು ದಕ್ಷಿಣ ಅತಿ ಹೆಚ್ಚು ಮಹಿಳಾ ಮತದಾರರನ್ನು ಹೊಂದಿದೆ. ಇಲ್ಲಿ ಪುರುಷರು 3,11,427, ಮಹಿಳಾ ಮತದಾರರು 2,69,878 ಇದ್ದಾರೆ. ಒಟ್ಟು ಮತದಾರರು 5,81,408 ಎಂದರು.
2018ರ ಅಂತಿಮ ಮತದಾರರ ಪಟ್ಟಿ
ಇತರೆ ಜಿಲ್ಲೆಗಳು ಪುರುಷರು ಮಹಿಳೆಯರು ತೃತೀಯ ಲಿಂಗಿಗಳು ಒಟ್ಟು
ಇತರೆ ಜಿಲ್ಲೆಗಳು 2,05,75,029 2,02,79,582 3113 4,08,57,724
ಬೆಂಗಳೂರು 46,04,190 41,92,706 1,439 87,98,335
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications