ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72ನೇ ಗಣರಾಜ್ಯೋತ್ಸವ ಸಂಭ್ರಮ
ಜನವರಿ 26: ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ದೇಶದಾದ್ಯಂತ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿ 72ನೇ ಗಣರಾಜ್ಯೋತ್ಸವವನ್ನು ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ.

ದಾವಣಗೆರೆಯ ಗಣರಾಜ್ಯೋತ್ಸವ
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂಸದ ಜಿ.ಎಂ.ಸಿದ್ದೇಶ್ವರ್, ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಚಿತ್ರದುರ್ಗ ಗಣರಾಜ್ಯೋತ್ಸವ
ಕೋಟೆನಾಡು ಚಿತ್ರದುರ್ಗದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನೆರವೇರಿಸಿ, ಭಾಷಣ ಮಾಡಿದರು. ಜಿಲ್ಲಾಧಿಕಾರಿ, ಶಾಸಕರು, ಸಂಸದರು, ಪೊಲೀಸ್ ಇಲಾಖೆ ಸೇರಿದಂತೆ ಇತರರು ಭಾಗವಹಿಸಿದ್ದರು.

ಉತ್ತರ ಕನ್ನಡ ಗಣರಾಜ್ಯೋತ್ಸವ
ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ನೆರವೇರಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಭಾಷಣ ಮಾಡಿದರು. ಉತ್ತರ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೈಸೂರು ಗಣರಾಜ್ಯೋತ್ಸವ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರಿಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಬಳಿಕ ಸಂದೇಶ ನೀಡಿದ ಅವರು ಗಣರಾಜ್ಯೋತ್ಸವವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ ಎಂದರು. ಜಿಲ್ಲಾಧಿಕಾರಿ, ಮೈಸೂರು ಮೇಯರ್, ಶಾಸಕರು, ಪೊಲೀಸ್ ಇಲಾಖೆ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಉಡುಪಿ ಗಣರಾಜ್ಯೋತ್ಸವ
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ನೂತನ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗೃಹ ರಕ್ಷಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಪೊಲೀಸ್ ತಂಡಗಳಿಂದ ಧ್ವಜಾರೋಹಣದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲಾಡಳಿತ, ಶಾಸಕರು, ಪೊಲೀಸ್ ಇಲಾಖೆಯವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

ಬೆಳಗಾವಿ ಗಣರಾಜ್ಯೋತ್ಸವ
72ನೇ ಗಣರಾಜ್ಯೋತ್ಸವ ಅಂಗವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪಥಸಂಚಲನ ಪರಿವೀಕ್ಷಣೆ ಮಾಡಿದ ಸಚಿವ ಜಾರಕಿಹೊಳಿ, ಬಳಿಕ ವೇದಿಕೆಯತ್ತ ಆಗಮಿಸಿದರು.
ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಐಜಿಪಿ ರಾಘವೇಂದ್ರ ಸುಹಾನರ, ಕಮೀಷನರ್ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಭಾಗಿಯಾಗಿ ಸಾಥ್ ನೀಡಿದರು.
Recommended Video
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications