ಐಎಎಸ್-ಐಪಿಎಸ್ ನಂತರ ಈಗ ಎಸ್ಐ ಗಳ ವರ್ಗಾವಣೆ
ಬೆಂಗಳೂರು, ಸೆಪ್ಟೆಂಬರ್ 16: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ ವರ್ಗಾವಣೆ ಮಾಡಿತ್ತು. ಇದೀಗ ಎಸ್ಐಗಳನ್ನು ವರ್ಗಾವಣೆ ಮಾಡಿದೆ.
ಬರೋಬ್ಬರಿ 73 ಪೊಲೀಸ್ ಎಸ್ಐಗಳನ್ನು ವರ್ಗಾವಣೆ ಮಾಡಿ ಸರ್ಕಾರವು ಇಂದು ಆದೇಶ ಹೊರಡಿಸಿದೆ. ಬಹುತೇಕ ಬೆಂಗಳೂರಿನ ಎಸ್ಐಗಳನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕೆಲವರಿಗೆ ಮೊದಲ ಪೋಸ್ಟಿಂಗ್ ಇದಾಗಿದೆ.
ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಕೂಡಲೇ ಹಲವು ಮಂದಿ ಐಎಎಸ್, ಐಪಿಎಸ್ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದರು. ಇದೀಗ ಎಸ್ಐಗಳನ್ನು ವರ್ಗಾವಣೆ ಮಾಡಿದ್ದಾರೆ.

ಇದೇ ದಿನ ಒಬ್ಬ ಐಎಎಸ್ ಅಧಿಕಾರಿಯನ್ನೂ ಸಹ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಕಲ್ಯಾಣ ಯೋಜನೆ ನಿರ್ದೇಶಕಿ ಆಗಿದ್ದ ಎಸ್.ಕವಿತಾ ಅವರನ್ನು ತತಕ್ಷಣದಿಂದ ಜಾರಿಗೆ ಬರುವಂತೆ, ಕೆಎಸ್ಆರ್ಟಿಸಿಯ ಸಿಬ್ಬಂದಿ ಮತ್ತು ಪರಿಸರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.












Click it and Unblock the Notifications