77th Independence Day in Bengaluru: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಧ್ವಜಾರೋಹಣ

ಬೆಂಗಳೂರು, ಆಗಸ್ಟ್ 15:ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಿದರು. ಬಳಿಕ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳ ಭಾಷಣದ ಪ್ರಮುಖಾಂಶವನ್ನು ಈ ಪೇಜಿನಲ್ಲಿ ನೀಡಲಾಗುತ್ತದೆ.

Independence-Day-2023-Karnataka

Aug 15, 2023, 11:07 am IST

77 ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ‌ ಸಂಭ್ರಮ
Aug 15, 2023, 10:33 am IST

ಘನತೆಯ ಬದುಕಿನ ಸ್ವಾತಂತ್ರ್ಯ ಖಾತ್ರಿ - ಸಿದ್ದರಾಮಯ್ಯ
Aug 15, 2023, 9:50 am IST

ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಗೌರವ ವಂದನೆ ಸ್ವೀಕಾರ
Aug 15, 2023, 9:47 am IST

ಪಂಪನ ಮಾತುಗಳೊಂದಿಗೆ ಸಿಎಂ ಸಿದ್ದರಾಮಯ್ಯ ಭಾಷಣ ಮುಕ್ತಾಯ

ಇದು ಎಲ್ಲರ ಭಾರತ. ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರ. ಇದನ್ನು ಪ್ರತಿ ಕ್ಷಣವೂ ನೆನಪಿಸಿಕೊಳ್ಳೋಣ. ಅಂತಿಮವಾಗಿ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಪಂಪನ ಮಾತುಗಳು ಸಮಸ್ತ ಜನಕೋಟಿಯ ಘೋಷ ವಾಕ್ಯವಾಗಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ. ಜೈ ಹಿಂದ್ ಜೈ ಕರ್ನಾಟಕ.. ರಾಷ್ಟ್ರಗೀತೆಯೊಂದಿಗೆ ಮುಖ್ಯಮಂತ್ರಿಗಳ ಭಾಷಣ ಮುಕ್ತಾಯ.
Aug 15, 2023, 9:45 am IST

ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆ

ಕರ್ನಾಟಕದ ಜನರು ಒಡೆದಾಳುವವರ ವಿರುದ್ಧ ನಿಂತಿದ್ದಾರೆ. ಇವನಾರವನೆನ್ನದೆ ಒಳಗೊಂಡು ಆಡಳಿತ ಮಾಡುವ ನಮ್ಮನ್ನು ಆರಿಸಿದ್ದಾರೆ. ಈ ಸ್ವಾತಂತ್ರ್ಯ ದಿನದಂದು ನಾನು ನೀಡುವ ಭರವಸೆಯಲ್ಲಿ ಬಹಳ ಮುಖ್ಯವಾದುದು ಈ ಒಳಗೊಂಡು ಬಾಳುವ, ಎಲ್ಲರ ಅಭಿವೃದ್ಧಿಯನ್ನು ಬಯಸುವ ಕರ್ನಾಟಕದ ಹೊಸ ಮಾದರಿಗಳನ್ನು ಪ್ರಬಲಗೊಳಿಸುವ ಭರವಸೆಯೇ ಆಗಿದೆ.
Aug 15, 2023, 9:44 am IST

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ. ಸುಮಾರು 4 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ, ಸುಂಕ, ಮೇಲ್ತೆರಿಗೆಗಳನ್ನು ಕೇಂದ್ರಕ್ಕೆ ಪಾವತಿಸುತ್ತಿದೆ. ಅದರೆ ನಮಗೆ ವಾಪಸ್ಸು ಬರುತ್ತಿರುವುದು 50 ಸಾವಿರ ಕೋಟಿ ರೂ. ಮಾತ್ರ. ನಮಗೆ ನ್ಯಾಯಯುತವಾಗಿ ಬರಬೇಕಾದಷ್ಟು ಸಂಪನ್ಮೂಲಗಳು ಕೇಂದ್ರದಿಂದ ಮರಳಿ ಬಂದರೆ ರಾಜ್ಯವು ಅತ್ಯಂತ ಶ್ರೀಮಂತ ರಾಜ್ಯವಾಗುವುದು.
Aug 15, 2023, 9:44 am IST

ದೇಶವನ್ನು ಪಾತಾಳದಿಂದ ಮೇಲೆತ್ತಿದ ಮಹನೀಯರನ್ನು ನೆನೆದ ಸಿಎಂ

'ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Aug 15, 2023, 9:43 am IST

'ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯ' ಸಿಎಂ

ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು. ಸ್ವಾತಂತ್ರ್ಯವೇನೊ ಲಭಿಸಿತು. ಆದರೆ ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ ಯಜಮಾನಿಕೆ ಹೊಂದಿದ್ದಾರೆ. ಬ್ರಿಟಿಷ್ ಭಾರತದಲ್ಲಿ ನಮ್ಮ ದೇಶದ ಸಂಪತ್ತನ್ನು ಬ್ರಿಟಿಷರು ಹೊತ್ತೊಯ್ದರು. ಆದರೆ ಇಂದು ನಮ್ಮಲ್ಲಿ ಕೆಲವೇ ದೊಡ್ಡ ಬಂಡವಾಳಿಗರ ಬಳಿ ಶೇಖರಣೆಗೊಳ್ಳುತ್ತಿದೆ. ಈ ರೀತಿಯಾದರೆ ಅಭಿವೃದ್ಧಿ ಸಾಧ್ಯವೆ? ಕುವೆಂಪು ಅವರು ತಮ್ಮದೊಂದು ಪದ್ಯದಲ್ಲಿದೆ' ಎಂದು ಹೇಳಿದರು.
Aug 15, 2023, 9:36 am IST

'ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು'

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು.
Aug 15, 2023, 9:31 am IST

ನಮ್ಮ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ರೂಪಿಸಿದೆ
Aug 15, 2023, 9:27 am IST

ಇದು ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲ- ಸಿಎಂ

ಇದು ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲ- ಸಿಎಂ
ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Aug 15, 2023, 9:20 am IST

ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಿಎಂ ಪ್ರಸ್ತಾಪ

ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದರು. ಗ್ಯಾರಂಟಿಗಳಿಂದ ಬಡವರಿಗೆ ನೇರ ಸವಲತ್ತುಗಳು ದೊರಕಲಿವೆ ಎಂದು ಅವರು ಹೇಳಿದರು. ಹಿಂದಿನ ಸರ್ಕಾರಗಳಿಗಿಂತಲೂ ನಮ್ಮ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದರು. ಡಾ. ಬಿಆರ್ ಅಂಬೇಡ್ಕರ್ ಅವರ ಆಶೆಯದಂತೆ ನಮ್ಮ ಸರ್ಕಾರ ಸರ್ವರಿಗೂ ಸಮಪಾಲು ನೀಡಲು ಬದ್ಧವಾಗಿದೆ ಎಂದರು.
Aug 15, 2023, 9:13 am IST

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿದ್ದರಾಮಯ್ಯ

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿದ್ದರಾಮಯ್ಯ
ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡಿದರು. ಪ್ರಾಣದ ಹಂಗು ತೊರೆದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನಿಯರನ್ನು ಸ್ಮರಿಸಿದರು. ದೃಷ್ಟರ ಆಟ ಬಹಳ ಕಾಲ ನಡೆಯುದಿಲ್ಲ ಎನ್ನುವುದನ್ನು ಜನರೇ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.
Aug 15, 2023, 9:05 am IST

ಸಿಎಂ ಸಿದ್ದರಾಮಯ್ಯ ಅವರಿಂದ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಿದರು. ಬಳಿಕ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
Aug 15, 2023, 8:26 am IST

ಸ್ವಾತಂತ್ರ್ಯೋತ್ಸವ-ಕಾಂಗ್ರೆಸ್ ಟ್ವೀಟ್

'ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Aug 15, 2023, 6:47 am IST

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ ಬಿಜೆಪಿ

ನಾಡಿನ ಸಮಸ್ತ ಜನರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಟ್ವೀಟ್ ಮೂಲಕ ಬಿಜೆಪಿ ತಿಳಿಸಿದೆ. 'ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಬ್ರಿಟೀಷರ ವಿರುದ್ಧ ಸಮರ ಸಾರಿದ ಕರುನಾಡಿನ ಧೀರ ಯೋಧ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದಂದು ಶತ ಶತ ನಮನಗಳು' ಎಂದು ಬಿಜೆಪಿ ಟ್ವೀಟ್ ಮಾಡಿದೆ.
Aug 15, 2023, 6:32 am IST

ಬಿಜೆಪಿಯ ಜಗನ್ನಾಥ ಭವನದಲ್ಲಿ ಸ್ವಾತಂತ್ರ್ಯೋತ್ಸವ

ಸ್ವಾತಂತ್ರ್ಯೋತ್ಸವದ ಅಂಗವಾಗಿ ತ್ರಿವರ್ಣದಿಂದ ಕಂಗೊಳಿಸುತ್ತಿರುವ ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ.
Aug 15, 2023, 6:04 am IST

ಕೆಎಸ್ಆರ್‌ಪಿ, ಸಿಎಆರ್, ಅಗ್ನಿಶಾಮಕ ದಳ

ಕೆಎಸ್ಆರ್‌ಪಿ, ಸಿಎಆರ್, ಅಗ್ನಿಶಾಮಕ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೇರಿದಂತೆ ಎಲ್ಲಾ ವಿಶೇಷ ತಂಡಗಳು ಮೈದಾನದಲ್ಲಿ ಇರಲಿವೆ.ಕಾರ್ಯಕ್ರಮದ ಕವಾಯತಿನಲ್ಲಿ ಈ ಬಾರಿ ಗೋವಾ ಪೊಲೀಸರು ಭಾಗಿಯಾಗಲಿದ್ದಾರೆ. ನಾಡಗೀತೆ, ರೈತಗೀತೆ, ವೀರ ನಮನ, ರೋಪ್ ಸ್ಕಿಪ್ಪಿಂಗ್, ಕಲಾರಿಪಯಟ್ಟು, ಟೆಂಟ್ ಪೆಗ್ಗಿಂಗ್, ಮೋಟರ್ ಸೈಕಲ್ ಪ್ರದರ್ಶನ ಸೇರಿದಂತೆ ಹಲವು ಸಾಂಸ್ಕೃತಿಕ ಪ್ರದರ್ಶನ ಧ್ವಜಾರೋಹಣದ ನಂತರ ನಡೆಯಲಿದೆ.
Aug 15, 2023, 6:02 am IST

ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್

ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ 100 ಸಿಸಿಟಿವಿ ಅಳವಡಿಸಲಾಗಿದೆ. 2 ಬ್ಯಾರೇಜ್ ಸ್ಕ್ಯಾನರ್ ಅಳವಡಿಕೆ, ಮುಂಜಾಗ್ರತಾ ಕ್ರಮವಾಗಿ ಆಂಬ್ಯುಲೆನ್ಸ್, ಅಗ್ನಿಶಾಮಕ ದಳ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆ ನಿಯೋಜನೆ ಮಾಡಲಾಗಿದೆ. ಪೆರೇಡ್ ಸುತ್ತಮುತ್ತ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಧ್ವಜಾರೋಹಣ, ಕವಾಯತು ಸಂದರ್ಭದಲ್ಲಿ ಬಂದೋಬಸ್ತ್‌ಗೆ ಬೆಂಗಳೂರಿನ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
Aug 15, 2023, 6:00 am IST

ಧ್ವಜಾರೋಹಣ ನಂತರ ಪರೇಡ್ ವೀಕ್ಷಣೆ

ಬೆಳಗ್ಗೆ ಒಂಬತ್ತು ಗಂಟೆಗೆ ಧ್ವಜಾರೋಹಣ ನಡೆಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಭಾರತೀಯ‌ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಸಿಎಂಗೆ ಪರಿಚಯಿಸಲಾಗುತ್ತದೆ. ಇದಾದ ನಂತರ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+