ಬ್ರಿಟಿಷರ ವಿರುದ್ದ ಕಾಂಗ್ರೆಸ್ ಹೋರಾಡಿತು, ಸಂಘ ಪರಿವಾರ ಕೈಜೋಡಿಸಿತು
Recommended Video
ಬೆಂಗಳೂರು, ಆ 9: 'ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ದ ಹೋರಾಡಿತು, ಸಂಘ ಪರಿವಾರ ಬ್ರಿಟಿಷರ ಜೊತೆ ನಿಂತುಕೊಂಡಿತು' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಕ್ವಿಟ್ ಇಂಡಿಯಾ ಚಳುವಳಿಯ 77ನೇ ವರ್ಷದ ಸ್ಮರಣಾರ್ಥ ಕೆಪಿಸಿಸಿ ಕಚೇರಿಯಲ್ಲಿನ ಕಾರ್ಯಕ್ರಮದ ನಂತರ ಟ್ವೀಟ್ ಮಾಡಿರುವ ದಿನೇಶ್, ' ಮೂರು ರಾಜ್ಯಗಳಲ್ಲಿ ಅಂದು ಮುಸ್ಲಿಂ ಲೀಗ್ ಮತ್ತು ಹಿಂದೂ ಮಹಾಸಭಾ ಸಂಘಟನೆಗಳು ಮೈತ್ರಿಯಾಗಿ, ಬ್ರಿಟಿಷ್ ಸರ್ಕಾರದ ಪರವಾಗಿ, ಸರ್ಕಾರ ರಚಿಸಿದವು'.
'ಭಾರತ, ಪಾಕಿಸ್ತಾನ ವಿಭಜನೆ ಆಗಬೇಕು ಎಂದು ಇವರಿಬ್ಬರು ಬಯಸಿದ್ದರು. ಆದರೆ, ಈ ಎರಡೂ ಸಿದ್ಧಾಂತಗಳಿಗೆ ವಿರುದ್ಧವಾಗಿ ಭಾರತ 'ಜಾತ್ಯಾತೀತ ರಾಷ್ಟ್ರ'ವಾಗಿ ನಿರ್ಮಾಣವಾಯಿತು' ಎಂದು ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಕೆಪಿಸಿಸಿ ಟ್ವೀಟ್ ಮಾಡಿದೆ.

' ಕ್ವಿಟ್ ಇಂಡಿಯಾ ಚಳವಳಿ' ಸ್ವಾತಂತ್ರ್ಯದ ಹೋರಾಟವಾಗಬೇಕೆಂದು, ಮಾಡು ಇಲ್ಲವೆ ಮಡಿ ಎಂಬ ಘೋಷಣೆಯನ್ನು ಮಹಾತ್ಮ ಗಾಂಧಿ ಕೊಟ್ಟರು. ಅಂತೆಯೇ ಕಾಂಗ್ರೆಸ್ ನ ನಾಯಕರು ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು'.
'ಈ ಹೋರಾಟಕ್ಕೆ ಮುಸ್ಲಿಂಲೀಗ್, ಸಂಘ ಪರಿವಾರ ಹಾಗೂ ಹಿಂದು ಮಹಾಸಭಾ ಬೆಂಬಲ ನೀಡಲಿಲ್ಲ, ಇವರು ಬ್ರಿಟಿಷರ ಜೊತೆ ನಿಂತುಕೊಂಡರು' ಎಂದು ದಿನೇಶ್ ಗುಂಡೂರಾವ್ ಹೇಳಿದರು.
'ಭಾವನಾತ್ಮಕ ವಿಚಾರಗಳ ಮೂಲಕ, @narendramodi ಅವರು ಬಂದ ಮೇಲೆಯೆ ಎಲ್ಲಾ ಸರಿ ಹೋಗುತ್ತಿದೆ" ಎನ್ನುವಂತೆ @BJP4India ದೇಶದಲ್ಲಿ ತಪ್ಪಾಗಿ ಬಿಂಬಿಸುತ್ತಿದೆ. ಸಂವಿಧಾನದ ಅಧ್ಯಯನ ಮೂಲಕ ಮಾತ್ರವೇ ಇದನ್ನು ಬಹಿರಂಗಪಡಿಸಲು ಸಾಧ್ಯ. ಹಾಗಾಗಿ ಕಾಂಗ್ರೆಸ್ ನಾಯಕರೂ ಸೇರಿದಂತೆ, ಕಾರ್ಯಕರ್ತರು ಸಂವಿಧಾನವನ್ನು ಅಧ್ಯಯನ ಮಾಡಬೇಕು' - ವೀರಪ್ಪ ಮೊಯ್ಲಿ.
'ಸ್ವಾತಂತ್ರ್ಯ ಚಳುವಳಿ, ತ್ಯಾಗ, ಬಲಿದಾನದಂತಹ ಇತಿಹಾಸದ ಅಧ್ಯಯನ ಕಡಿಮೆ ಆಗುತ್ತಿದೆ. ಚುನಾವಣೆಗೆ ಪೂರಕವಾದ ಅಧ್ಯಯನ ಮಾಡುವಂತ ಪದ್ಧತಿ ಹೆಚ್ಚಾಗುತ್ತಿದೆ. ಬಿಜೆಪಿಯರಿಗಂತು ಇತಿಹಾಸ ಬೇಡವಾಗಿದೆ. ಇತಿಹಾಸದ ಅಧ್ಯಯನ ಇಲ್ಲದೇ ಸಮಾಜದಲ್ಲಿ ದೊಡ್ಡಮಟ್ಟದ ಬದಲಾವಣೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ' - ವೀರಪ್ಪ ಮೊಯ್ಲಿ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications