7th Pay Commission: ಸರ್ಕಾರಿ ನೌಕರರಿಗೆ ಲೋಕಸಭೆ ಚುನಾವಣೆ ಬಳಿಕ ಭರ್ಜರಿ ಸಿಹಿಸುದ್ದಿ!
ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಸರ್ಕಾರದ ಎದುರು ಪದೇ, ಪದೇ ಡಿಮ್ಯಾಂಡ್ ಇಡುತ್ತಿದ್ದಾರೆ. ಅದರಲ್ಲೂ ಈ ವಿಚಾರದಲ್ಲಿ ಹಲವು ಹೋರಾಟಗಳು ನಡೆದು ಹೋಗಿವೆ. ಹೀಗಿದ್ದರೂ ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚಿನ ವೇತನ ಸೌಲಭ್ಯ ಸಿಗುತ್ತಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಈ ವಿಚಾರದಲ್ಲಿ ಅನ್ಯಾಯ ಆಗುತ್ತಿದೆ ಎಂಬ ಆರೋಪ ಇದೆ. ಇಷ್ಟೆಲ್ಲದರ ನಡುವೆ ಸರ್ಕಾರಿ ನೌಕರರಿಗೆ ಲೋಕಸಭೆ ಚುನಾವಣೆ ಬಳಿಕ ಭರ್ಜರಿ ಸಿಹಿ ಸುದ್ದಿ ಸಿಗುವುದು ಗ್ಯಾರಂಟಿ ಆಗುತ್ತಿದೆ!
ಜೀವನದಲ್ಲಿ ಒಂದು ಬಾರಿ ಸರ್ಕಾರಿ ನೌಕರಿ ಸಿಕ್ಕರೆ ಲೈಫ್ ಸೆಟಲ್, ಜೀವನ ಸ್ವರ್ಗದ ರೀತಿ ಅಂತಾ ಜನ ಹೇಳುತ್ತಾರೆ. ಆದ್ರೆ ಸರ್ಕಾರಿ ನೌಕರರು ಎದುರಿಸುವ ಸಮಸ್ಯೆಗಳು ಅವರಿಗೆ ಮಾತ್ರ ಗೊತ್ತು. ಹೀಗಿದ್ದಾಗ ವೇತನದ ವಿಚಾರದಲ್ಲಿ ಕೂಡ ಸರ್ಕಾರಿ ನೌಕರರಿಗೆ ಅನ್ಯಾಯ ಆಗ್ತಿದೆ, ಸರ್ಕಾರಿ ನೌಕರರಿಗೆ ಸೂಕ್ತ ವೇತನ ನೀಡಿ ಅನ್ಯಾಯ ಸರಿ ಮಾಡಿ ಎಂಬ ಬೇಡಿಕೆ ಹಲವಾರು ವರ್ಷಗಳಿಂದಲೂ ಇದೆ. ಇದೇ ಸಮಯದಲ್ಲಿ 2024ರ ಲೋಕಸಭೆ ಚುನಾವಣೆಯ ನಂತರ, ಸರ್ಕಾರಿ ನೌಕರರಿಗೆ ಭಾರಿ ಭರ್ಜರಿ ಸುದ್ದಿ ಸಿಗುವುದು ಗ್ಯಾರಂಟಿ ಆಗುತ್ತಿದೆ.

7ನೇ ವೇತನ ಆಯೋಗದ...
ಅಂದಹಾಗೆ ಇದೀಗ 7ನೇ ವೇತನ ಆಯೋಗದ ವಿಚಾರದಲ್ಲಿ ಗುಡ್ ನ್ಯೂಸ್ ಸಿಗುತ್ತಿರುವುದು, ರಾಜ್ಯ ಸರ್ಕಾರಿ ನೌಕರರಿಗೆ ಅಲ್ಲ ಆದರೆ ಕೇಂದ್ರ ಸರ್ಕಾರಿ ನೌಕರರಿಗೆ. ಯಾಕಂದ್ರೆ ಕೇಂದ್ರ ಸರ್ಕಾರಿ ನೌಕರರಿಗೆ 2024ರ ಲೋಕಸಭೆ ಚುನಾವಣೆಯ ನಂತರ ಮತ್ತೊಂದು ಗುಡ್ ನ್ಯೂಸ್ ಕೊಡಲು ಸಜ್ಜಾಗಿದೆ ಸರ್ಕಾರ. ಕೆಲ ದಿನಗಳ ಹಿಂದೆ ಡಿಎ ಹೆಚ್ಚಿಸಿ ಕೇಂದ್ರ ಸರ್ಕಾರಿ ನೌಕರರ ಬೆನ್ನಿಗೆ ನಿಂತಿದ್ದ ಕೇಂದ್ರ ಸರ್ಕಾರ ಈಗ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದೆ.
ಕೇಂದ್ರ ಸರ್ಕಾರ ಇದೇ ವರ್ಷ ಅಂದರೆ 2024ರ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಅಂದ್ರೆ ಡಿಎ ಶೇಕಡಾ 4ರಷ್ಟು ಹೆಚ್ಚಿಸಿತ್ತು. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ಡಿಎ ಶೇಕಡಾ 50ಕ್ಕೆ ಏರಿತ್ತು. ದೇಶಾದ್ಯಂತ ಲಕ್ಷ ಲಕ್ಷ ಕೇಂದ್ರ ಸರ್ಕಾರಿ ನೌಕರರು ಸೇರಿದಂತೆ, ಪಿಂಚಣಿದಾರರಿಗೆ ಇದರಿಂದ ಸಿಹಿಸುದ್ದಿ ಸಿಕ್ಕಿತ್ತು. ಇದೀಗ, ವೇತನದಲ್ಲೂ ಏರಿಕೆ ಮಾಡಲು ಕೇಂದ್ರ ಸರ್ಕಾರದಿಂದ ಸಿದ್ಧತೆ ನಡೆದಿದೆಯಂತೆ!
20 ಲಕ್ಷದಿಂದ 25 ಲಕ್ಷಕ್ಕೆ...
ಹಾಗೇ ಇನ್ನೊಂದು ಕಡೆ ಕೇಂದ್ರ ಸರ್ಕಾರಿ ನೌಕರರ ಡಿಎ ಶೇಕಡಾ 50ಕ್ಕೆ ಏರಿದ ನಂತರ ಭಾರಿ ಬದಲಾವಣೆ ಮಾಡಿತ್ತು ಕೇಂದ್ರ ಸರ್ಕಾರ. ಇದರ ಭಾಗವಾಗಿ ಕೇಂದ್ರ ನೌಕರರ ಮನೆ ಬಾಡಿಗೆ ಭತ್ಯೆ (ಎಚ್ಆರ್ಎ) ಹೆಚ್ಚಿಸಿತ್ತು. ಅಲ್ಲದೆ ಗ್ರಾಚ್ಯುಟಿ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು 20 ಲಕ್ಷದಿಂದ 25 ಲಕ್ಷಕ್ಕೆ ಹೆಚ್ಚಿಸಿತ್ತು. ನಿವೃತ್ತಿ ಅಥವಾ ಉದ್ಯೋಗಿ ಮರಣದ ಸಂದರ್ಭದಲ್ಲಿ, ಅವರ ಕುಟುಂಬ ಹೆಚ್ಚಿನ ಗ್ರಾಚ್ಯುಟಿ ಹಣ ಪಡೆಯುವುದು, ಇದರಿಂದ ಸಾಧ್ಯವಾಗಿತ್ತು. ಇದೀಗ ಲೋಕಸಭೆ ಚುನಾವಣೆ ಮುಗಿದ ನಂತರ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೂ ಸಿದ್ಧತೆಯ ಮಾಡಿಕೊಂಡಿದೆ ಕೇಂದ್ರ ಸರ್ಕಾರ ಎನ್ನಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications