7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿ-7ನೇ ವೇತನ ಆಯೋಗ ವರದಿ ಜಾರಿ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ
7th Pay Commission: ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸು ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದು ಜಾರಿಯಾದರೆ ಯಾರಿಗೆಲ್ಲ ಉಪಯೋಗ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿಯೊಂದನ್ನು ನೀಡಿದ್ದು, 7ನೇ ವೇತನ ಆಯೋಗ ಜಾರಿ ಮಾಡಲು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಾಂತಾಗಿದೆ. ರಾಜ್ಯ ಸರ್ಕಾರ ಶೀಘ್ರವೇ 7ನೇ ವೇತನ ಆಯೋಗದ ಶಿಫಾರಸು ಮಾಡಲು ಮುಂದಾಗಿದೆ. ನೌಕರರು ನಿರೀಕ್ಷಿಸಿದಂತೆ ಶೇಕಡ 27ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇನ್ನು ಈ ವಿಚಾರವಾಗಿ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆದಿದ್ದು, ವೇತನ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪುಟ ಅಧಿಕಾರಿ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆಗೂ ಮುಂಚೆಯೇ 7ನೇ ವೇತನ ಆಯೋಗದ ವರದಿ ಜಾರಿ ಮಾಡಲು ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಜೂನ್ ಅಂತ್ಯದೊಳಗೆ ಜಾರಿ ಮಾಡಲು ಸಂಘ ಗಡುವು ನೀಡಿದ್ದು, ಇದೀಗ ಸರ್ಕಾರ ನೌಕರರಿಗೆ ಶುಭಸುದ್ದಿ ನೀಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರದ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ 7ನೇ ವೇತನ ಆಯೋಗವು ನೌಕರರ ವೇತವನ್ನು ಶೇಕಡ 27.5ರಷ್ಟು ಹೆಚ್ಚಳ ಮಾಡಲು ಸರ್ಕಾರಕ್ಕೆ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನ ಶಿಫಾರಸು ಮಾಡಿತ್ತು.
ವರದಿಯಲ್ಲಿ ಏನಿದೆ?: ಆಯೋಗದ ವರದಿಯಲ್ಲಿ ಆರಂಭಿಕ ನೌಕರರ ಕನಿಷ್ಠ ವೇತನ 17 ಸಾವಿರ ಇದ್ದು, ಅದನ್ನು ಗರಿಷ್ಠ 27,000ಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ವೇತನ ಕನಿಷ್ಠ 1.04,600 ಇದ್ದು, ಅದನ್ನು 1,67,200ಕ್ಕೆ ಪರಿಷ್ಕರಣೆ ಮಾಡುವಂತೆ ಆಯೋಗ ಶಿಪಾರಸು ಮಾಡಿದ್ದು, ಈ ಶಿಫಾರಸು ಅನುದಾನಿಕ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯ ಆಗಲಿದೆ.
ನಿವೃತ್ತ ನೌಕರರ ಪಿಂಚಣಿಯ ಮೂಲ ವೇತವನ್ನು 50ರಷ್ಟು, ಕುಟುಂಬ ಪಿಂಚಣಿಯನ್ನ ಶೇಕಡ 30ರಷ್ಟು ಹೆಚ್ಚಿಸಲು ಶಿಫಾರಸು ಮಾಡಿದೆ. ಇದನ್ನು ಕನಿಷ್ಠ 13,500ರಿಂದ 1,20,600ರೆಗೆ ನಿಗಧಿ ಮಾಡಿತ್ತು.
ಸಮವಸ್ತ್ರ ಭತ್ಯೆ, ಪ್ರಯಾಣ ಭತ್ಯೆ, ದಿನಭತ್ಯೆಗಳು ಶೇಕಡ 25ರಷ್ಟು ಹೆಚ್ಚಳ ಮಾಡುವುದು, ಅಂಗವಿಕಲ ಮಕ್ಕಳ ಶೈಕ್ಷಣಿಕ ಭತ್ಯೆ ₹1,000-2,000 ಹೆಚ್ಚಿಸುವುದು, ಗೃಹ ನಿರ್ಮಾಣಕ್ಕೆ ಮುಂಗಡವಾಗಿ 40 ಲಕ್ಷದಿಂದ 65 ಲಕ್ಷದವರೆಗೆ ಹೆಚ್ಚಳ ಮಾಡುವುದು.
ನೌಕರರ ಅವಲಂಬಿತ ಕುಟುಂಬದ ಸದಸ್ಯರ ಆರೋಗ್ಯ ಸಮಸ್ಯೆಯ ಸಮಯದಲ್ಲಿ ಶೇಕಡ 50ರಷ್ಟು ವೇತನದೊಂದಿಗೆ 180 ದಿನಗಳ ಆರೈಕೆ ರಜೆ. ಸರ್ಕಾರಿ ಸೇವೆಗೆ ಸೇರುವ ಎರಡು ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ್ದ ಮಹಿಳಾ ನೌಕರರಿಗೆ 18 ವಾರಗಳು ಹೆರಿಗೆ ರಜೆ ನೀಡುವುದು ಸೇರಿ ಹಲವು ಶಿಫಾರಸುಗಳನ್ನ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications