7th Pay Commission; 7ನೇ ವೇತನ ಆಯೋಗದ ಅವಧಿ 3 ತಿಂಗಳು ವಿಸ್ತರಣೆ
ಬೆಂಗಳೂರು, ಮಾರ್ಚ್. 07: 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸರ್ಕಾರಿ ನೌಕರರರು ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನು ಇಟ್ಟು ತುಂಬಾ ದಿನಗಳೇ ಆಗಿವೆ. ವರದಿ ಜಾರಿ ಕುರಿತು ಸರ್ಕಾರದಿಂದ ಸ್ಪಷ್ಟವಾದ ಭರವಸೆಗೆ ಆಗ್ರಹಿಸಿ ದೊಡ್ಡ ಸಮಾವೇಶ ಮಾಡಿದ್ದು ಆಯಿತು, ಆದರೂ ಇನ್ನೂ ವರದಿ ಜಾರಿ ಬಗ್ಗೆ ಘೋಷಣೆಯಾಗಿಲ್ಲ.
7ನೇ ವೇತನ ಆಯೋಗದ ವರದಿ ಜಾರಿಗೆ ಕೇಳಿ ಬರುತ್ತಿವ ಒತ್ತಡದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಅವಧಿ ಮೂರು ತಿಂಗಳು ವಿಸ್ತರಿಸುವ ಸಾಧ್ಯತೆ. ಈಗಾಗಲೇ ಸರ್ಕಾರ 2023ರ ನವೆಂಬರ್ನಲ್ಲಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 2024ರ ಮಾರ್ಚ್ 15 ತನಕ ವಿಸ್ತರಣೆ ಮಾಡಿದೆ. ಇದು ಇನ್ನೂ ಮೂರು ತಿಂಗಳು ವಿಸ್ತರಣೆಯಾಗುವ ಸಾಧ್ಯತೆಯಿದೆ.

7ನೇ ವೇತನ ಆಯೋಗದ ಅವಧಿ 3 ತಿಂಗಳು ವಿಸ್ತರಣೆ
ಕರ್ನಾಟಕ ಸರ್ಕಾರ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಅವಧಿ ಮೂರು ತಿಂಗಳು ವಿಸ್ತರಣೆ ಆಗುವ ಸಾಧ್ಯತೆ. ರಾಜ್ಯ ಸರ್ಕಾರ 2023 ರ ನವೆಂಬರ್ನಲ್ಲಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿದೆ. ಆದರೆ ಈಗ ಆಯೋಗದ ವರದಿಯನ್ನು ನೀಡುವಾಗ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆ ಇದೆ. ಅಲ್ಲದೇ ಏಪ್ರಿಲ್ 1ರಿಂದ 2024 - 25ನೇ ಸಾಲಿನ ಬಜೆಟ್ ಜಾರಿಗೆ ಬರುವುದರಿಂದ ಆಯೋಗದ ಅವಧಿ 3 ತಿಂಗಳು ವಿಸ್ತರಣೆಯಾಗಲಿದೆ.
ಈಗಾಗಲೇ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, ವೇತನ ಹಾಗೂ ಪಿಂಚಣಿಯಲ್ಲಿ ಶೇ 25ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದರು. 7ನೇ ವೇತನ ಆಯೋಗದ ಶಿಫಾರಸ್ಸಿನಿಂದ ವೇತನ ಶ್ರೇಣಿಯಲ್ಲಿ ಸಂಭವಿಸಬಹುದಾದ ಹೆಚ್ಚಳವನ್ನು ಅಂದಾಜಿಸಿ 2024 - 25ನೇ ಸಾಲಿನಲ್ಲಿ ವೇತನ ಹಾಗೂ ಪಿಂಚಣಿಗೆ 1,12,789 ಕೋಟಿ ಅಂದಾಜಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಇನ್ನು, 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ 13,000 ಕೋಟಿ ರೂಪಾಯಿಯನ್ನು ಆಯವ್ಯಯದಲ್ಲಿ ಒದಗಿಸಲಾಗಿದ್ದು, ಆಯೋಗದ ವರದಿ ಅನುಸರಸಿ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಉಂಟಾದರೆ ಪೂರಕ ಅಂದಾಜಿನಲ್ಲಿ ಒದಗಿಸುವ ಭರವಸೆ ನೀಡಿದ್ದಾರೆ. ಹೀಗಾಗಿಯೇ ಮುಂದಿನ ಬಜೆಟ್ ಅಂದಾಜಿನಲ್ಲಿ ಈ ಲೆಕ್ಕವು ಬರಲಿದ್ದು, ಚುನಾವಣೆ ಮತ್ತು ಬಜೆಟ್ ಕಾರಣಕ್ಕೆ ವೇತನ ಆಯೋಗ ವಿಸ್ತರಣೆಯಾಗಲಿದೆ.
ಮುಂದಿನ ವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು 7ನೇ ವೇತನ ಆಯೋಗದ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ ಎಂಬ ಸುದ್ದಿಯೂ ಇದೆ. ಈ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳು ಸಿಎಂಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರಿ ನೌಕರರ ಸಮಾವೇಶದಲ್ಲಿಯೂ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದರು.
7ನೇ ವೇತನ ಆಯೋಗದ ವರದಿ ಜಾರಿ ಮಾಡದ ಸರ್ಕಾರದ ಮೇಲೆ ನೌಕರರು ಕೆಂಡ ಕಾರುತ್ತಿರುವುದು ಸಮಾವೇಶದ ದಿನವೇ ತಿಳಿದು ಬಂದಿದೆ. ಅನಿರ್ಧಿಷ್ಟಾವಧಿ ಪ್ರತಿಭಟನೆ ಬಗ್ಗೆಯೂ ಗುಸು ಗುಸು ಕೇಳಿ ಬಂದಿತ್ತು. ನೌಕರರು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಬಗ್ಗೆ ರಾಜ್ಯ ಗುಪ್ತಚರ ಇಲಾಖೆ ಸಿಎಂಗೆ ಮಾಹಿತಿ ನೀಡಿತ್ತು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications