7th Pay Commission; ಸರ್ಕಾರಿ ನೌಕರರ ಪ್ರತಿಭಟನೆ, ಗುಪ್ತಚರ ಮಾಹಿತಿ
ಬೆಂಗಳೂರು, ಫೆಬ್ರವರಿ 29: ಕರ್ನಾಟಕ ಸರ್ಕಾರದ ಮುಂದೆ ರಾಜ್ಯ ಸರ್ಕಾರಿ ನೌಕರರು ಪ್ರಮುಖವಾಗಿ ಇಟ್ಟಿರುವ ಬೇಡಿಕೆ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸ್ಪಷ್ಟವಾದ ಭರವಸೆ ನೀಡುವುದು. ಆದರೆ, ಇದು ಆಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ನಲ್ಲಿ, ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿಯೂ ಈ ಕುರಿತು ಸ್ಪಷ್ಟವಾದ ಭರವಸೆ ಕೊಟ್ಟಿಲ್ಲ. ಇದರಿಂದಾಗಿ ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದಾರೆ. ಇದೇ ಕಾರಣಕ್ಕೆ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧೀನದಲ್ಲಿರುವ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಗುಪ್ತಚರ ಇಲಾಖೆ ವರದಿಯಲ್ಲಿ ಏನಿದೆ?
ಫೆಬ್ರವರಿ 28 ರಂದು ನಿರ್ದೇಶಕರು ರಾಜ್ಯ ಗುಪ್ತವಾರ್ತೆ, ಬೆಂಗಳೂರು ಇವರ ಸಹಿ ಇರುವ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಪೊಲೀಸ್ ಆಯುಕ್ತರು, ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ - ಧಾರವಾಡ ನಗರಗಳು. ಎಲ್ಲಾ ಜಿಲ್ಲೆಯ ಪೊಲೀಸ್ ಅಧೀಕ್ಷಕರುಗಳಿಗೆ ಈ ವರದಿ ನೀಡಿದ್ದು, ಮುನ್ಸೂಚನಾ ಪತ್ರ ಎಂಬ ಶೀರ್ಷಿಕೆಯಲ್ಲಿ ಈ ಮಾಹಿತಿಯನ್ನು ಸಲ್ಲಿಕೆ ಮಾಡಲಾಗಿದೆ.
ಪೊಲೀಸ್ ಆಯುಕ್ತರು, ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು, ಎಲ್ಲಾ ಜಿಲ್ಲೆಯ ಪೊಲೀಸ್ ಅಧೀಕ್ಷಕರುಗಳಿಗೆ ಮತ್ತು ಎಲ್ಲಾ ವಲಯಗಳ ಐ.ಜಿ.ಪಿ ರವರುಗಳಿಗೆ, ಎಲ್ಲಾ ರಾಗುವಾ ವಿಭಾಗದ/ಘಟಕದ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು & ಮುಖ್ಯ ಗುಪ್ತಚರ ಅಧಿಕಾರಿಗಳಿಗೆ ಈ ಮುನ್ಸೂಚನಾ ಪತ್ರವನ್ನು ರಾಜ್ಯ ಗುಪ್ತವಾರ್ತೆ ನಿರ್ದೇಶಕರು ಸಲ್ಲಿಸಿದ್ದಾರೆ.
"ದಿನಾಂಕ: 01.03.2024 ರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗವನ್ನು ಶೀಘ್ರವಾಗಿ ಜಾರಿಗೆ ತರಬೇಕು ಮತ್ತು ಓ.ಪಿ.ಎಸ್. ಅನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ, ಅನಿರ್ಧಿಷ್ಟಾವಧಿ ಮುಷ್ಕರ (ಪೆನ್ ಡೌನ್ ಚಳವಳಿ) ನಡೆಸುವುದಾಗಿ ತಿಳಿದು ಬಂದಿರುತ್ತದೆ. ಈ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ" ಎಂದು ಮುನ್ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.

ಪೆನ್ ಡೌನ್ ಚಳವಳಿಗೆ ಸಿದ್ದರಾದ ನೌಕರರು!
ರಾಜ್ಯ ಸರ್ಕಾರಿ ನೌಕರರು ಸಮ್ಮೇಳನ ನಡೆಸಿ ಸರ್ಕಾರದ ಮುಂದೆ ಏಳನೇ ವೇತನ ಆಯೋಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗದ ಜಾರಿ ಕುರಿತು ಬರೀ ಭರವಸೆ ನೀಡಿದ್ದಾರೆ. ಹೀಗಾಗಿಯೇ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಿದ್ಧರಾಗಿದ್ದಾರೆ.
ಮುಷ್ಕರ ನಡೆಸುವ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕೂಡ ಬಹಿರಂಗವಾಗಿಯೇ ಹೇಳಿದ್ದಾರೆ. ಸಮ್ಮೇಳನದಲ್ಲಿಯೇ ವೇತನ ಆಯೋಗದ ಜಾರಿ ಬಗ್ಗೆ ಘೋಷಣೆಯಾಗದ ಬಗ್ಗೆ ಹಲವು ನೌಕರರನು ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು, ಸರ್ಕಾರ ನೀಡಿರುವ ಗಡುವಿನ ತನಕ ನಾವು ಶಾಂತರಾಗಿ ಕಾಯೋಣ ಗಡುವು ಮುಗಿದ ಮೇಲೆ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಮಾಹಿತಿ ನೀಡಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications