7th pay commission: ವಿಶೇಷ ಚೇತನ ನೌಕರರಿಗಾಗಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳು ಹೀಗಿವೆ
ಬೆಂಗಳೂರು, ಏಪ್ರಿಲ್. 11: ಸರ್ಕಾರಿ ನೌಕರರು ಬಹು ನಿರೀಕ್ಷೆಯಿಂದ ಕಾಯುತ್ತಿರುವ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿಂದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡಿದೆ. ಇದರ ಜೊತೆಗೆ ವಿಶೇಷ ಚೇತನ ನೌಕರರಿಗಾಗಿ ಹಲವು ಶಿಫಾರಸ್ಸುಗಳನ್ನು ಮಾಡಿದೆ.
ವಿಶೇಷ ಚೇತನ ನೌಕರರಿಗಾಗಿ ಆಯೋಗವು ವಿಶೇಷವಾಗಿ ಹಲವು ಶಿಫಾರಸ್ಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಸಲ್ಲಿಸಲಾಗಿರುವ ವೇತನ ಆಯೋಗದ ವರದಿಯಲ್ಲಿದೆ. ಈ ವರದಿಯನ್ನು ಲೋಕಸಭಾ ಚುನಾವಣೆಗೂ ಮುನ್ನವೇ ಜಾರಿಗೆ ತರಲಾಗುತ್ತದೆ ಎನ್ನಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು ವರದಿ ಸಲ್ಲಿಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರ ಕನಸು ಕೊಂಚ ಮುಂದೆ ಹೋಗಿದೆ.

ವಿಶೇಷ ಚೇತನ ನೌಕರರಿಗಾಗಿ ಆಯೋಗದ ಶಿಫಾರಸ್ಸು
* ವಾಹನ ಭತ್ಯೆಯನ್ನು ಕೇವಲ ಅಂಧ ಮತ್ತು ಚಲನವಲನ ವೈಕಲ್ಯತೆಯುಳ್ಳ ವಿಶೇಷ ಚೇತನ ನೌಕರರಿಗೆ ಸೀಮಿತಗೊಳಿಸುವ ಬದಲಾಗಿ ಎಲ್ಲಾ ವಿಶೇಷ ಚೇತನ ನೌಕರರಿಗೆ ಈ ಸೌಲಭ್ಯವನ್ನು ವಿಸ್ತರಿಸಬೇಕು.
* ಸರ್ಕಾರಿ ನೌಕರರ ವಿಕಲಚೇತನ ಮಕ್ಕಳ ಶಿಕ್ಷಣ ಭತ್ಯೆಯನ್ನು ಪ್ರತಿ ಮಗುವಿಗೆ ತಿಂಗಳಿಗೆ ರೂ.1,000 ರಿಂದ ರೂ.2,000 ಕ್ಕೆ ಹೆಚ್ಚಿಸಬೇಕು.
* ಬಡ್ಡಿ ರಹಿತ ರೂ.50,000 ಮುಂಗಡ ಅಥವಾ ಸಲಕರಣೆಗಳ ಬೆಲೆ ಯಾವುದು ಕಡಿಮೆಯೋ ಅದನ್ನು 10 ಮಾಸಿಕ ಕಂತುಗಳಲ್ಲಿ ಮರುಪಡೆಯಬಹುದಾದ ಲ್ಯಾಪ್ಟಾಪ್ಗಳು, ಡಿಜಿಟಲ್ ಒತ್ತಾಸೆಗಳು, Al ಚಾಲಿತ ಸ್ಮಾರ್ಟ್ ಗ್ಲಾಸ್ಗಳು ಮತ್ತು ಇತರ ಸಾಧನಗಳನ್ನು ಖರೀದಿಸಲು ಒದಗಿಸಲಾಗುತ್ತದೆ.
* ವಿಶೇಷ ಚೇತನ ಉದ್ಯೋಗಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಯಾವುದೇ ವಾಹನದ ಖರೀದಿಗೆ ಅಸ್ತಿತ್ವದಲ್ಲಿರುವ ಶೇ.30 ರಿಂದ ಶೇ.40ಕ್ಕೆ ವಾಹನ ದರದ ಗರಿಷ್ಠ ರೂ.60,000 ಕ್ಕೆ ಒಳಪಟ್ಟು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಬೆಂಬಲ ಮತ್ತು ಉತ್ತೇಜನಕ್ಕೆ ಶಿಫಾರಸ್ಸು
* ಬೈಸಿಕಲ್ ಮುಂಗಡವನ್ನು ಗರಿಷ್ಠ ರೂ.10,000 ಕ್ಕೆ ಹೆಚ್ಚಿಸಬೇಕು.
* ವಿದ್ಯುತ್ ಚಾಲಿತ ಬೈಸಿಕಲ್ಗಳಿಗೆ ಮುಂಗಡವನ್ನು ಗರಿಷ್ಠ ರೂ.30,000 ಕ್ಕೆ ಹೆಚ್ಚಿಸಬೇಕು.
* ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.1.25 ಲಕ್ಷಕ್ಕೆ ಏರಿಸಬೇಕು.
* ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.10 ಲಕ್ಷಕ್ಕೆ ಹೆಚ್ಚಿಸುವುದು.
* ಗಣಕಯಂತ್ರ ಮುಂಗಡವನ್ನು ಗರಿಷ್ಠ ರೂ.60,000 ಕ್ಕೆ ಪರಿಷ್ಕರಿಸಬೇಕು.
* ಸೋಲಾರ್ ವಾಟರ್ ಹೀಟರ್, ಸೋಲಾರ್ ಕುಕ್ಕರ್, ಮೊಪೆಡ್ ಮತ್ತು ಮೋಟಾರು ವಾಹನಗಳ ದುರಸ್ಥಿ ಮತ್ತು ಉಪಕರಣಗಳಿಗೆ ಮುಂಗಡಗಳನ್ನು ಸ್ಥಗಿತಗೊಳಿಸಬೇಕು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications