7th pay commission: ವಿಶೇಷ ಚೇತನ ನೌಕರರಿಗಾಗಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳು ಹೀಗಿವೆ
ಬೆಂಗಳೂರು, ಏಪ್ರಿಲ್. 11: ಸರ್ಕಾರಿ ನೌಕರರು ಬಹು ನಿರೀಕ್ಷೆಯಿಂದ ಕಾಯುತ್ತಿರುವ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿಂದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡಿದೆ. ಇದರ ಜೊತೆಗೆ ವಿಶೇಷ ಚೇತನ ನೌಕರರಿಗಾಗಿ ಹಲವು ಶಿಫಾರಸ್ಸುಗಳನ್ನು ಮಾಡಿದೆ.
ವಿಶೇಷ ಚೇತನ ನೌಕರರಿಗಾಗಿ ಆಯೋಗವು ವಿಶೇಷವಾಗಿ ಹಲವು ಶಿಫಾರಸ್ಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಸಲ್ಲಿಸಲಾಗಿರುವ ವೇತನ ಆಯೋಗದ ವರದಿಯಲ್ಲಿದೆ. ಈ ವರದಿಯನ್ನು ಲೋಕಸಭಾ ಚುನಾವಣೆಗೂ ಮುನ್ನವೇ ಜಾರಿಗೆ ತರಲಾಗುತ್ತದೆ ಎನ್ನಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು ವರದಿ ಸಲ್ಲಿಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರ ಕನಸು ಕೊಂಚ ಮುಂದೆ ಹೋಗಿದೆ.

ವಿಶೇಷ ಚೇತನ ನೌಕರರಿಗಾಗಿ ಆಯೋಗದ ಶಿಫಾರಸ್ಸು
* ವಾಹನ ಭತ್ಯೆಯನ್ನು ಕೇವಲ ಅಂಧ ಮತ್ತು ಚಲನವಲನ ವೈಕಲ್ಯತೆಯುಳ್ಳ ವಿಶೇಷ ಚೇತನ ನೌಕರರಿಗೆ ಸೀಮಿತಗೊಳಿಸುವ ಬದಲಾಗಿ ಎಲ್ಲಾ ವಿಶೇಷ ಚೇತನ ನೌಕರರಿಗೆ ಈ ಸೌಲಭ್ಯವನ್ನು ವಿಸ್ತರಿಸಬೇಕು.
* ಸರ್ಕಾರಿ ನೌಕರರ ವಿಕಲಚೇತನ ಮಕ್ಕಳ ಶಿಕ್ಷಣ ಭತ್ಯೆಯನ್ನು ಪ್ರತಿ ಮಗುವಿಗೆ ತಿಂಗಳಿಗೆ ರೂ.1,000 ರಿಂದ ರೂ.2,000 ಕ್ಕೆ ಹೆಚ್ಚಿಸಬೇಕು.
* ಬಡ್ಡಿ ರಹಿತ ರೂ.50,000 ಮುಂಗಡ ಅಥವಾ ಸಲಕರಣೆಗಳ ಬೆಲೆ ಯಾವುದು ಕಡಿಮೆಯೋ ಅದನ್ನು 10 ಮಾಸಿಕ ಕಂತುಗಳಲ್ಲಿ ಮರುಪಡೆಯಬಹುದಾದ ಲ್ಯಾಪ್ಟಾಪ್ಗಳು, ಡಿಜಿಟಲ್ ಒತ್ತಾಸೆಗಳು, Al ಚಾಲಿತ ಸ್ಮಾರ್ಟ್ ಗ್ಲಾಸ್ಗಳು ಮತ್ತು ಇತರ ಸಾಧನಗಳನ್ನು ಖರೀದಿಸಲು ಒದಗಿಸಲಾಗುತ್ತದೆ.
* ವಿಶೇಷ ಚೇತನ ಉದ್ಯೋಗಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಯಾವುದೇ ವಾಹನದ ಖರೀದಿಗೆ ಅಸ್ತಿತ್ವದಲ್ಲಿರುವ ಶೇ.30 ರಿಂದ ಶೇ.40ಕ್ಕೆ ವಾಹನ ದರದ ಗರಿಷ್ಠ ರೂ.60,000 ಕ್ಕೆ ಒಳಪಟ್ಟು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಬೆಂಬಲ ಮತ್ತು ಉತ್ತೇಜನಕ್ಕೆ ಶಿಫಾರಸ್ಸು
* ಬೈಸಿಕಲ್ ಮುಂಗಡವನ್ನು ಗರಿಷ್ಠ ರೂ.10,000 ಕ್ಕೆ ಹೆಚ್ಚಿಸಬೇಕು.
* ವಿದ್ಯುತ್ ಚಾಲಿತ ಬೈಸಿಕಲ್ಗಳಿಗೆ ಮುಂಗಡವನ್ನು ಗರಿಷ್ಠ ರೂ.30,000 ಕ್ಕೆ ಹೆಚ್ಚಿಸಬೇಕು.
* ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.1.25 ಲಕ್ಷಕ್ಕೆ ಏರಿಸಬೇಕು.
* ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.10 ಲಕ್ಷಕ್ಕೆ ಹೆಚ್ಚಿಸುವುದು.
* ಗಣಕಯಂತ್ರ ಮುಂಗಡವನ್ನು ಗರಿಷ್ಠ ರೂ.60,000 ಕ್ಕೆ ಪರಿಷ್ಕರಿಸಬೇಕು.
* ಸೋಲಾರ್ ವಾಟರ್ ಹೀಟರ್, ಸೋಲಾರ್ ಕುಕ್ಕರ್, ಮೊಪೆಡ್ ಮತ್ತು ಮೋಟಾರು ವಾಹನಗಳ ದುರಸ್ಥಿ ಮತ್ತು ಉಪಕರಣಗಳಿಗೆ ಮುಂಗಡಗಳನ್ನು ಸ್ಥಗಿತಗೊಳಿಸಬೇಕು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications