7th Pay Commission: ಸರ್ಕಾರಿ ನೌಕರರ ಸಾಮೂಹಿಕ ವಿಮಾ ಯೋಜನೆ ಎಷ್ಟು ಏರಿಕೆ
ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿರುವ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ನೌಕರರಿಗೆ ಸಾಮೂಹಿಕ ವಿಮಾ ಯೋಜನೆ (ಜಿಐಎಸ್) ಜಾರಿ ಕುರಿತು ಹಲವು ಶಿಫಾರಸುಗಳನ್ನು ಮಾಡಿದೆ. 558 ಪುಟಗಳ ಸಂಪುಟ-1ರ ವರದಿಯಲ್ಲಿ ಸಾಮೂಹಿಕ ವಿಮಾ ಯೋಜನೆಯ ಮಾಸಿಕ ವಂತಿಗೆಯಲ್ಲಿ ಪರಿಷ್ಕರಣೆಗೆ ಶಿಫಾರಸು ಮಾಡಲಾಗಿದೆ. ಆಗಸ್ಟ್ನಿಂದಲೇ ವೇತನ ಆಯೋಗ ನೀಡಿರುವ ವರದಿ ಶಿಫಾರಸು ಜಾರಿಗೊಳಿಸುವ ಸರ್ಕಾರ ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕಿದೆ.
ಆಯೋಗ ತನ್ನ ವರದಿಯಲ್ಲಿ ನೌಕರರಿಗೆ ಸಾಮೂಹಿಕ ವಿಮಾ ಯೋಜನೆ (ಜಿಐಎಸ್) ಎಂದು ಉಲ್ಲೇಖಿಸಿ ವಿವರಣೆ ನೀಡಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ (ಕೆಜಿಐಡಿ) ಮೂಲಕ ಕರ್ನಾಟಕ ಸರ್ಕಾರವು, ತನ್ನ ನೌಕರರಿಗೆ ಸಾಮೂಹಿಕ ವಿಮಾ ಯೋಜನೆಯನ್ನು ನಿರ್ವಹಿಸುತ್ತಿದೆ. ಈ ಯೋಜನೆಯು ಉಳಿತಾಯಗಳು ಮತ್ತು ವಿಮಾ ಸೌಲಭ್ಯಗಳೆರಡನ್ನೂ ಹೊಂದಿದ್ದು, ಗ್ರೂಪ್-ಡಿ, ಗ್ರೂಪ್-ಸಿ ಮತ್ತು ಗ್ರೂಪ್-ಬಿ ಮತ್ತು ಗ್ರೂಪ್-ಎ ನೌಕರರು ಪ್ರತಿ ತಿಂಗಳು ಕ್ರಮವಾಗಿ ರೂ.120, ರೂ. 240, ರೂ. 360 ಮತ್ತು ರೂ. 480ಗಳ ವಂತಿಗೆ ನೀಡುವ ಅಗತ್ಯವಿದೆ ಎಂದು ಹೇಳಿದೆ.

ವಿಮಾ ರಕ್ಷಣೆಯ ಅಡಿಯಲ್ಲಿ ವಂತಿಗೆಯ ಒಂದು ಭಾಗವನ್ನು (ಪ್ರಸ್ತುತ ಶೇ.25ರಷ್ಟು) ವಿಮಾ ನಿಧಿಯಾಗಿ ತೆಗೆದುಕೊಳ್ಳಲಾಗುತ್ತದೆ. ಸೇವೆ ಸಲ್ಲಿಸುತ್ತಿರುವ ನೌಕರನು ನಿಧನ ಹೊಂದಿದ ಪಕ್ಷದಲ್ಲಿ ರೂ. 1,20,000, ರೂ. 2,40,000, ರೂ. 3,60,000 ಮತ್ತು ರೂ. 4,80,000 ಗಳ ಮೊತ್ತವನ್ನು ಕ್ರಮವಾಗಿ ಗ್ರೂಪ್-ಡಿ, ಗ್ರೂಪ್-ಸಿ ಗ್ರೂಪ್-ಬಿ ಮತ್ತು ಗ್ರೂಪ್-ಎ ನೌಕರರ ನಾಮ ನಿರ್ದೇಶಿತರಿಗೆ ಸಂದಾಯ ಮಾಡಲಾಗುತ್ತದೆ. ಉಳಿದ ವಂತಿಗೆಯನ್ನು (ಶೇ.75 ರಷ್ಟು) ಕಾಲ ಕಾಲಕ್ಕೆ ವಿಧಿಸಲಾಗುವ ಬಡ್ಡಿಯನ್ನು ಗಳಿಸುವ ಉಳಿತಾಯ ನಿಧಿ ಯಾಗಿ ಪರಿಗಣಿಸಲಾಗುತ್ತದೆ.
ಸಂಗ್ರಹವಾದ ಈ ಉಳಿತಾಯ ನಿಧಿಯ ಜೊತೆಗೆ ಬಡ್ಡಿಯನ್ನು ಸೇರಿಸಿ ನೌಕರನು ಸೇವೆಯಲ್ಲಿದ್ದಾಗ ನಿಧನ ಹೊಂದಿದಲ್ಲಿ ಅಥವಾ ನಿವೃತ್ತಿ ಸಂದರ್ಭದಲ್ಲಿ ಇದನ್ನು ಆತ ಅಥವಾ ಆಕೆಗೆ ಸಂದಾಯ ಮಾಡಲಾಗುತ್ತದೆ. ಕೆಎಸ್ಜಿಇಎ, ನೌಕರರ ವಂತಿಗೆಯಲ್ಲಿ ಹತ್ತು ಪಟ್ಟು ಪರಿಷ್ಕರಣೆಯನ್ನು (ಪ್ರಸ್ತುತ ವಂತಿಗೆಯ 10 ರಷ್ಟು) ಕೋರಿದ್ದು, ಇದರ ಪರಿಣಾಮವಾಗಿ ಸೇವೆಯಲ್ಲಿರುವಾಗ ನಿಧನ ಹೊಂದಿದ ಸಂದರ್ಭದಲ್ಲಿ ಪಾವತಿಸಬಹುದಾದ ವಿಮೆ ಹಣವು ಹತ್ತು ಪಟ್ಟು ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ.
ನೌಕರರ ಉಳಿತಾಯ ನಿಧಿಗಳ ಮೇಲೆ ಪ್ರಸ್ತುತ ವಾರ್ಷಿಕ ಶೇ.7.10 ರಷ್ಟು ಬಡ್ಡಿಯನ್ನು ಗಳಿಸಲಾಗುತ್ತಿದೆ ಎಂದು ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಈ ಯೋಜನೆಯು ಸರ್ಕಾರಿ ನೌಕರರಲ್ಲಿ ಉಳಿತಾಯವನ್ನು ಪ್ರೋತ್ಸಾಹಿಸುವುದಲ್ಲದೆ, ಸೇವೆಯನ್ನು ಸಲ್ಲಿಸುವ ನೌಕರರ ಜೀವಕ್ಕೆ ಪರಿಣಾಮಕಾರಿ ರಕ್ಷಣೆಯನ್ನು ಒದಗಿಸುತ್ತದೆ ಎಂದು ಆಯೋಗವು ಅಭಿಪ್ರಾಯ ಪಡುತ್ತದೆ. ಹಾಗೆಯೇ, ಇದು ವಂತಿಗೆ ಆಧಾರಿತ ಯೋಜನೆಯಾಗಿರುವುದರಿಂದ, ರಾಜ್ಯ ಸರ್ಕಾರವು ಅದರ ಬಡ್ಡಿ ಬಾಧ್ಯತೆಯನ್ನು ನೀಗಿಸಲು ಗಮನಾರ್ಹ ಆಯವ್ಯಯ ಅವಕಾಶ ಕಲ್ಪಿಸುವ ಅವಶ್ಯಕತೆ ಇರುವುದಿಲ್ಲ.
ಆಯೋಗ ಮಾಡಿರುವ ಶಿಫಾರಸುಗಳು: ಅದರಂತೆ, ಆಯೋಗವು, ಪ್ರತಿ ತಿಂಗಳ ವಂತಿಗೆಯಲ್ಲಿ ಪರಿಷ್ಕರಣೆಯನ್ನು ಶಿಫಾರಸು ಮಾಡುತ್ತದೆ ಎಂದು ಹೇಳಿದೆ. ಸಾಮೂಹಿಕ ವಿಮಾ ಯೋಜನೆಯ ಮಾಸಿಕ ವಂತಿಗೆಯಲ್ಲಿ ಪರಿಷ್ಕರಣೆಯನ್ನು ಹೇಗೆ ಮಾಡಬೇಕು ಎಂದು ಶಿಫಾರಸು ಮಾಡಿದೆ.
* ಗ್ರೂಪ್-ಎ ಜಾರಿಯಲ್ಲಿರುವ ಮಾಸಿಕ ವಂತಿಗೆ ರೂ. 480, ಪಾವತಿಸಬೇಕಾದ ವಿಮಾ ಹಣ 4.80 ಲಕ್ಷ. ಹೊಸದಾಗಿ ಶಿಫಾರಸು ಮಾಡಲಾದ ಮಾಸಿಕ ವಂತಿಗೆ ರೂ. 720. ಪಾವತಿಸಬೇಕಾದ ವಿಮಾ ಹಣ 7.20 ಲಕ್ಷ. ಶೇಕಡಾವಾರು ಏರಿಕೆ 50.
* ಗ್ರೂಪ್-ಬಿ ಜಾರಿಯಲ್ಲಿರುವ ಮಾಸಿಕ ವಂತಿಗೆ ರೂ. 360, ಪಾವತಿಸಬೇಕಾದ ವಿಮಾ ಹಣ 3.60 ಲಕ್ಷ. ಹೊಸದಾಗಿ ಶಿಫಾರಸು ಮಾಡಲಾದ ಮಾಸಿಕ ವಂತಿಗೆ ರೂ. 540. ಪಾವತಿಸಬೇಕಾದ ವಿಮಾ ಹಣ 5.40 ಲಕ್ಷ. ಶೇಕಡಾವಾರು ಏರಿಕೆ 50.
* ಗ್ರೂಪ್-ಸಿ ಜಾರಿಯಲ್ಲಿರುವ ಮಾಸಿಕ ವಂತಿಗೆ ರೂ. 240, ಪಾವತಿಸಬೇಕಾದ ವಿಮಾ ಹಣ 2.40 ಲಕ್ಷ. ಹೊಸದಾಗಿ ಶಿಫಾರಸು ಮಾಡಲಾದ ಮಾಸಿಕ ವಂತಿಗೆ ರೂ. 480. ಪಾವತಿಸಬೇಕಾದ ವಿಮಾ ಹಣ 4.80 ಲಕ್ಷ. ಶೇಕಡಾವಾರು ಏರಿಕೆ 100.
* ಗ್ರೂಪ್-ಡಿ ಜಾರಿಯಲ್ಲಿರುವ ಮಾಸಿಕ ವಂತಿಗೆ ರೂ. 120, ಪಾವತಿಸಬೇಕಾದ ವಿಮಾ ಹಣ 1.20 ಲಕ್ಷ. ಹೊಸದಾಗಿ ಶಿಫಾರಸು ಮಾಡಲಾದ ಮಾಸಿಕ ವಂತಿಗೆ ರೂ. 240. ಪಾವತಿಸಬೇಕಾದ ವಿಮಾ ಹಣ 2.40 ಲಕ್ಷ. ಶೇಕಡಾವಾರು ಏರಿಕೆ 100.
-
ದುಬಾರಿ ಆ್ಯಂಟಿ ಏಜಿಂಗ್ ಕ್ರೀಮ್ಗಿಂತ ಈ ತರಕಾರಿಯೇ ಪರಿಣಾಮಕಾರಿಯಂತೆ: ಚಿರಯೌವನ ತ್ವಚೆಗೆ ನೈಸರ್ಗಿಕ ಉಪಾಯ -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications