7th Pay Commission; ಸಂಕಟಕ್ಕೆ ಸಿಲುಕಿದ ನಿವೃತ್ತ ಸರ್ಕಾರಿ ನೌಕರರು
ಬೆಂಗಳೂರು, ಮೇ 13: ಕರ್ನಾಟಕದ 5 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು ಮತ್ತು ಲಕ್ಷಾಂತರ ನಿವೃತ್ತ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಯಾವಾಗ? ಎಂದು ಕಾದು ಕುಳಿತಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರದ ಮತದಾನ ಮುಕ್ತಾಯಗೊಂಡರೂ ಸಹ ಮಾದರಿ ಚುನಾವಣಾ ನೀತಿ ಸಂಹಿತೆ ಸಡಿಲಗೊಂಡಿಲ್ಲ.
ಜೂನ್ 6ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ, ಜೂನ್ 12ರ ತನಕ ವಿಧಾನ ಪರಿಷತ್ನ 6 ಸ್ಥಾನಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ನೀತಿ ಸಂಹಿತೆ ಸಡಿಲಗೊಳಿಸುವಂತೆ ಕೋರಿ ಪತ್ರವನ್ನು ಬರೆದಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯದ 7ನೇ ವೇತನ ಆಯೋಗವು ಮಾರ್ಚ್ 16ರಂದು ವರದಿ ಸಲ್ಲಿಸಿದೆ. 'ಸರ್ಕಾರಿ ನೌಕರರ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ' ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ.
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವ ತನಕ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ. ವೇತನ ಆಯೋಗ ತನ್ನ ವರದಿಯಲ್ಲಿ 1/7/2022ರಿಂದ ಹೊಸ ವೇತನ ಶ್ರೇಣಿ ಅನುಷ್ಠಾನಗೊಳ್ಳಬೇಕು ಎಂದು ತಿಳಿಸಿದೆ. ಆದರೆ ಯಾವಾಗಿನಿಂದ ವೇತನ ಆಯೋಗದ ವರದಿ ಜಾರಿಯಾಗಬೇಕು ಎಂದು ಸರ್ಕಾರ ತೀರ್ಮಾನವನ್ನು ಕೈಗೊಳ್ಳಬಹುದಾಗಿದೆ.
ನಿವೃತ್ತ ನೌಕರರ ಸಂಕಟ: 2023ರ ನವೆಂಬರ್ನಲ್ಲಿಯೇ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ಸರ್ಕಾರಕ್ಕೆ ವರದಿ ನೀಡಲಿದೆ. ಫೆಬ್ರವರಿಯಲ್ಲಿ ಮಂಡಿಸುವ 2024-25ನೇ ಸಾಲಿನ ಬಜೆಟ್ನಲ್ಲಿ ಘೋಷಣೆಯಾಗಲಿದೆ ಎಂದು ಸರ್ಕಾರಿ ನೌಕರರು ಭರವಸೆಯಲ್ಲಿದ್ದರು. ಆದರೆ ಸರ್ಕಾರ ಮಾರ್ಚ್ 15ರ ತನಕ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಿತು. ವರದಿ ಸ್ವೀಕಾರ ಮಾಡಿದ ದಿನವೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಮಾಹಿತಿಗಳ ಪ್ರಕಾರ ಏಪ್ರಿಲ್ ಅಂತ್ಯಕ್ಕೆ ಸುಮಾರು 3,900 ಸರ್ಕಾರಿ ನೌಕರರು ನಿವೃತ್ತರಾಗಿದ್ದಾರೆ. ಅಲ್ಲದೇ ಕಳೆದ ಎರಡು ತಿಂಗಳಿನಲ್ಲಿ ಸುಮಾರು 5 ಸಾವಿರ ಅಧಿಕಾರಿ/ ಸಿಬ್ಬಂದಿಗಳು ನಿವೃತ್ತರಾಗಿದ್ದಾರೆ. ಇವರೆಲ್ಲರೂ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿಯಾಗಲಿದೆ. ಹೊಸ ವೇತನ ಶ್ರೇಣಿಯಂತೆ ವೇತನ ಪಡೆದು ನಿವೃತ್ತರಾಗಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ಆದರೆ ಅದು ಸಾಧ್ಯವಾಗಿಲ್ಲ.
ವರದಿ ಸ್ವೀಕಾರ, ಅದರ ಅನುಷ್ಠಾನದ ವಿಚಾರದಲ್ಲಿಯೂ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ವರದಿ ಅನುಷ್ಠಾನಕ್ಕೆ ಸುಮಾರು 17 ಸಾವಿರ ಕೋಟಿ ರೂ. ಬೇಕು ಎಂದು ಅಂದಾಜಿಸಲಾಗಿದೆ. ಈಗಾಗಲೇ ಗ್ಯಾರಂಟಿಗಳಿಗೆ ಹಣ ಹೊಂದಿಸುತ್ತಿರುವ ಸರ್ಕಾರ ವರದಿ ಅನುಷ್ಠಾನದ ವಿಚಾರದಲ್ಲಿ ಕೊಂಚ ನಿಧಾನಗತಿಯ ಹೆಜ್ಜೆಯನ್ನು ಇಡುತ್ತಿದೆ ಎಂದು ಸರ್ಕಾರಿ ನೌಕರರೇ ಹೇಳುತ್ತಿದ್ದಾರೆ.
ಈಗಾಗಲೇ ನಿವೃತ್ತರಾಗಲಿರುವ ನೌಕರರಿಗೆ ವರದಿಯ ಶಿಫಾರಸಿನಂತೆ ಸರ್ಕಾರ ಕೈಗೊಳ್ಳುವ ತೀರ್ಮಾನದಂತೆ ಪಿಂಚಣಿ ಸಿಗಲಿದೆ. ಆದರೆ ಹೊಸ ವೇತನ ಶ್ರೇಣಿ ಸಿಗಲಿಲ್ಲ ಎಂಬುದು ನೌಕರರ ಕೊರಗು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ಸರ್ಕಾರ ನೌಕರರ ಪ್ರಮುಖ ಬೇಡಿಕೆಯಾದ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೆ ಮುಂದಾಗಲಿದೆಯೇ? ಎಂದು ಕಾದು ನೋಡಬೇಕಿದೆ.
ವೇತನ ಆಯೋಗ ತನ್ನ ವರದಿಯಲ್ಲಿ ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ 50ರಷ್ಟರಲ್ಲಿಯೇ ಮುಂದುವರೆಯಲಿದೆ ಎಂದು ಹೇಳಿದೆ. ಅಲ್ಲದೇ ಕನಿಷ್ಠ ಪಿಂಚಣಿಯನ್ನು 13,500 (ಕನಿಷ್ಠ ವೇತನ ರೂ. 27,000 ರ ಶೇ 50ರಷ್ಟು) ಮತ್ತು ಗರಿಷ್ಠ ಪಿಂಚಣಿಯನ್ನು ರೂ. 1,20,600 (ಗರಿಷ್ಠ ರೂ. 2,41,200 ವೇತನದ ಶೇ 50ರಷ್ಟು) ಪರಿಷ್ಕರಿಸುವುದು ಎಂದು ಶಿಫಾರಸು ಮಾಡಿದೆ.
70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ 10ರಷ್ಟನ್ನು ಆಯೋಗವು ಶಿಫಾರಸು ಮಾಡುತ್ತದೆ ಎಂದು ವರದಿಯಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ ಯಾವಾಗ ವೇತನ ಆಯೋಗದ ವರದಿ ಅನುಷ್ಠಾನ ಮಾಡಲಿದೆ? ಎಂದು ಕಾದು ನೋಡಬೇಕಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications