7th pay commission: 7ನೇ ವೇತನ ಆಯೋಗ ಸೇರಿ ಹಲವು ಆದೇಶಗಳ ಜಾರಿಗೆ ಸಿದ್ದರಾಮಯ್ಯ ಸರ್ಕಾರದ ಸಿದ್ಧತೆ
ಬೆಂಗಳೂರು, ಮೇ. 09 : ಸರ್ಕಾರಿ ನೌಕರರು ಜಾತಕ ಪಕ್ಷಿಯಂತೆ ಕಾಯುತ್ತಿರೋದು 7ನೇ ವೇತನ ಆಯೋಗದ ವರದಿ ಜಾರಿಗಾಗಿ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು ವರದಿ ಸರ್ಕಾರ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ 2024-25ನೇ ಸಾಲಿನ ಬಜೆಟ್ ಘೋಷಣೆಗಳಿಗೆ ಜಾರಿಯಾಗುವಂತೆ ಸರ್ಕಾರಿ ಆದೇಶಗಳ ಸುರಿಮಳೆಗೆ ಸಿದ್ದರಾಮಯ್ಯ ಆಡಳಿತ ಸಿದ್ಧತೆ ನಡೆಸಿದೆ.
ಈ ಹಿಂದೆಯೇ ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಸರ್ಕಾರ ನೌಕರರನ್ನು ಕಟ್ಟಿ ಹಾಕಿದೆ. ಆದರೆ, ನೀತಿ ಸಂಹಿತೆ ಸಡಿಲಗೊಳ್ಳುತ್ತಿದ್ದಂತೆ ಸರ್ಕಾರಿ ನೌಕರರು ಒತ್ತಡ ಹಾಕಲಿದ್ದಾರೆ. ಹೀಗಾಗಿಯೇ ಸರ್ಕಾರ ಕೂಡ ಸಕಲ ಸಿದ್ಧತೆ ನಡೆಸಿದೆ. ಕೆಲವೇ ದಿನಗಳಲ್ಲಿ ಅದೂ ಕೂಡ ನಡೆಯಲಿದೆ.

ಲೋಕಸಭೆಯ ನೀತಿ ಸಂಹಿತೆ ಮಾರ್ಚ್ 16 ರಿಂದ ಪ್ರಾರಂಭವಾಗಿದೆ. ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನ ಪರಿಷತ್ ಚುನಾವಣಾ ಫಲಿತಾಂಶಗಳು ಜೂನ್ 6 ರಂದು ಹೊರಬೀಳುತ್ತವೆ.
ಜೂನ್ 15 ಕ್ಕೆ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!
"ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ" ಎಂದು ಹೇಳಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್ಕೆ ಅತೀಕ್ ಅವರನ್ನು ಡೆಕ್ಕನ್ ಹೆರಾಲ್ಡ್ ಉಲ್ಲೇಖಿಸಿದೆ. ಎಲ್ಕೆ ಅತೀಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಹೌದು.
ಸಿದ್ದರಾಮಯ್ಯ ಅವರು 2024-25ರ ಬಜೆಟ್ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. "ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆಯನ್ನು ಮಾಡುತ್ತದೆ. ಇದು ಕೇಸ್ ಟು ಕೇಸ್ ಆಧಾರದ ಮೇಲೆ ಇರುತ್ತದೆ" ಎಂದು ಎಲ್ಕೆ ಅತೀಕ್ ಹೇಳಿದ್ದಾರೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿ ಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ" ಎಂದು ಹೇಳಿದ್ದಾರೆ.
ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂತಿರುಗುತ್ತಾರೆ. ಇದು ಆಡಳಿತ ಯಂತ್ರವನ್ನು ಮತ್ತೆ ಟ್ರಾಕ್ಗೆ ತರಲು ಸಹಾಯ ಮಾಡುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ.
ಆದರೆ, ರಾಜ್ಯ ಕ ಕೇಡರ್ನ ಸುಮಾರು 50-60 ಐಎಎಸ್ ಅಧಿಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮೆ ಕೆಲಸಗಳಿಗೆ ಹಿಂತಿರುಗಿನ ನಂತರ, ಮಾದರಿ ನೀತಿ ಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications