Doddaballapur - Hoskote: ಎಸ್ಟಿಆರ್ಆರ್ ಯೋಜನೆಯ ದೊಡ್ಡಬಳ್ಳಾಪುರ- ಹೊಸಕೋಟೆ ಹೆದ್ದಾರಿ ಪೂರ್ಣ
ಬೆಂಗಳೂರು, ಆಗಸ್ಟ್. 03: ಸ್ಯಾಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಯೋಜನೆಯ ಮೊದಲ ಹಂತವು ಬಹುತೇಕ ಪೂರ್ಣಗೊಂಡಿದೆ. ಈ ಮೊದಲ ಹಂತದಲ್ಲಿ ದೊಡ್ಡಬಳ್ಳಾಪುರದಿಂದ ಹೊಸಕೋಟೆ ನಡುವಿನ 80 ಕಿಮೀ ಅಳತೆಯ ಎರಡು ಪ್ಯಾಕೇಜ್ಗಳ ಕಾಮಗಾರಿ ಮುಗಿದಿದೆ. ಈ ಹೆದ್ದಾರಿಯಿಂದಾಗಿ ಬೆಂಗಳೂರಿನ ಸಮಪರ್ಕವಿಲ್ಲದೇ ನೇರವಾಗಿ ಚೆನ್ನೈ ತಲುಪಬಹುದು.
ಸ್ಯಾಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಯೋಜನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳನ್ನು ಬೆಸೆಯುವ ಹೆದ್ದಾರಿ ಯೋಜನೆಯಾಗಿದೆ. ಬೆಂಗಳೂರಿನ ಸುತ್ತಲಿನ ಎಸ್ಟಿಆರ್ಆರ್ ಒಟ್ಟು 288 ಕಿಮೀ ಉದ್ದವಿದ್ದು, NH 648, NE 7 , NH 648 (101 ಕಿಮೀ) ಮತ್ತು NH 948A ಅನ್ನು ಒಳಗೊಂಡಿದೆ. ಇದರಲ್ಲಿನ ಮೂರು ಪ್ಯಾಕೇಜ್ಗಳ ಪೈಕಿ, ದೊಡ್ಡಬಳ್ಳಾಪುರದಿಂದ ಹೊಸಕೋಟೆ ನಡುವಿನ 80 ಕಿಮೀ ಅಳತೆಯ ಎರಡು ಪ್ಯಾಕೇಜ್ಗಳ ಕಾಮಗಾರಿಯೂ ಸೇರಿತ್ತು.

ಇದು ಪೂರ್ಣಗೊಂಡಿದ್ದು, ದಾಬಸ್ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648 ಚೆನ್ನೈ ಎಕ್ಸ್ಪ್ರೆಸ್ವೇಗೆ ನೇರ ಸಂಪರ್ಕ ಪಡೆಯುತ್ತಿದೆ. ಈಗಾಗಿ ರಾಜಧಾನಿ ಬೆಂಗಳೂರಿನ ಸಂಪರ್ಕವಿಲ್ಲದೆ ರಾಜ್ಯದ ಇತರೆ ಜಿಲ್ಲೆಗಳು ನೇರವಾಗಿ ಚೆನ್ನೈ ಹೆದ್ದಾರಿಗೆ ತಲುಪಬಹುದು. ಹೊರವಲಯದ ರಸ್ತೆಯಾಗಿರುವ ಕಾರಣ ಟ್ರಾಫಿಕ್ ಸಮಸ್ಯೆಯಿರುವುದಿಲ್ಲ. ಜೊತೆಗೆ ಟ್ರಾಫಿಕ್ ಜಂಕ್ಷನ್ ಕೂಡ ಇಲ್ಲಿ ನಿರ್ಮಾಣವಾಗುತ್ತಿದೆ.
ಕಳೆದ ವರ್ಷ ಈ ಸ್ಯಾಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ, ದೊಡ್ಡಬಳ್ಳಾಪುರದಿಂದ ಹೊಸಕೋಟೆ ನಡುವೆ 80 ಕಿಮೀ ಅಳತೆಯ ಎರಡು ಪ್ಯಾಕೇಜ್ಗಳ ಕಾಮಗಾರಿ ಪ್ರಗತಿಯಲ್ಲಿದೆ ಮತ್ತು 2023 ರ ವೇಳೆಗೆ ಪೂರ್ಣಗೊಳ್ಳಬೇಕು ಎಂದು ಹೇಳಿದ್ದರು.
ಬೆಂಗಳೂರಿನ ಸಂಚಾರ ದಟ್ಟಣೆಯಿಂದಾಗಿ ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ಬೆಂಗಳೂರು ರಿಂಗ್ ರಸ್ತೆ (ಬೆಂಗಳೂರು ನಗರಕ್ಕೆ ಸ್ಯಾಟಲೈಟ್ ರಿಂಗ್ ರಸ್ತೆ) ಅಭಿವೃದ್ಧಿಯನ್ನು ಸರ್ಕಾರ ಹಂತ ಹಂತವಾಗಿ ಕೈಗೆತ್ತಿಕೊಂಡಿದೆ ಎಂದು ನಿತಿನ್ ಗಡ್ಕರಿ ವಿವರಿಸಿದ್ದರು.

ಇನ್ನು, ರಾಷ್ಟ್ರೀಯ ಹೆದ್ದಾರಿ-648 ವ್ಯಾಪ್ತಿಯ ಮತ್ತೊಂದು ವಿಶೇಷವೆಂದರೆ ಇಲ್ಲಿ ವಿನೂತನ ಟೋಲ್ ವ್ಯವಸ್ಥೆ ಜಾರಿಯಾಗುತ್ತಿದೆ. ಸಿಬ್ಬಂದಿ ರಹಿತ ಸಂಪೂರ್ಣ ಫಾಸ್ಟ್ಯಾಗ್ ಡಿಜಿಟಲ್ ವ್ಯವಸ್ಥೆಯುಳ್ಳ ಟೋಲ್ ಪ್ಲಾಜಾಗಳನ್ನು ನಿರ್ಮಿಸಲಾಗಿದೆ. ದಾಬಸ್ಪೇಟೆ ದೊಡ್ಡಬಳ್ಳಾಪುರ ನಡುವಿನ ಹುಲಿಕುಂಟೆ ಬಳಿ ಒಂದು ಟೋಲ್, ದೇವನಹಳ್ಳಿ ಮತ್ತು ಹೊಸಕೋಟೆ ನಡುವೆ ನಲ್ಲೂರಿನ ಸಮೀಪ ಮತ್ತೊಂದು ಟೋಲ್ ಪ್ಲಾಜಾ ನಿರ್ಮಾಣ ಮಾಡಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications