ಮಧ್ಯಾಹ್ನದ ಊಟಕ್ಕೆ ಮೊಟ್ಟೆ ನೀಡುವಂತೆ 80% ವಿದ್ಯಾರ್ಥಿಗಳ ಬೇಡಿಕೆ
ಸಾತ್ವಿಕ ಆಹಾರ ವಿವಾದ ಹಸಿಯಾಗಿರುವಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ 38.37 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನದ ಊಟದಲ್ಲಿ ಪ್ರೋಟೀನ್ ಮೂಲವಾಗಿ ಮೊಟ್ಟೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು, ಜನವರಿ 27: ಶಿಕ್ಷಣ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ 38.37 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನದ ಊಟದಲ್ಲಿ ಪ್ರೋಟೀನ್ ಮೂಲವಾಗಿ ಮೊಟ್ಟೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಸಾತ್ವಿಕ ಆಹಾರವನ್ನು ನೀಡಬೇಕು ಎಂಬ ಮಠಾಧೀಶರ ಹೇಳಿಕೆಗಳ ವಿವಾದದ ಮಧ್ಯೆ ವಿದ್ಯಾರ್ಥಿಗಳಿಗೆ ತಾವು ಏನನ್ನು ಬಯಸುತ್ತೀರಾ ಎಂದು ಕೇಳಿದ ಪ್ರಶ್ನೆಗಳಿಗೆ ಸುಮಾರು 80 ಪ್ರತಿಶತ ಮಕ್ಕಳು ತಮಗೆ ಮೊಟ್ಟೆ ನೀಡಿ ಎಂದು ಹೇಳಿದ್ದಾರೆ. ಉಳಿದ ಮಕ್ಕಳು ಚಿಕ್ಕಿ ಹಾಗೂ ಬಾಳೆಹಣ್ಣು ನೀಡುವಂತೆ ಕೋರಿದ್ದಾರೆ.
ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಭರ್ಜರಿ ಭೋಜನ: ವಿದ್ಯಾರ್ಥಿಗಳಿಗಾಗಿ ಮುದ್ದೆ, ಜಾಮೂನ್, ಹಣ್ಣು
ಕರ್ನಾಟಕ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ ಸುತ್ತೋಲೆಯ ನಂತರ, ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನದ ಊಟದಲ್ಲಿ ಪ್ರೋಟೀನ್ ಮೂಲವಾಗಿ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ಬೇಕೇ ಎಂದು ವಿದ್ಯಾರ್ಥಿಗಳಿಂದ ಅಭಿಪ್ರಾಯ ಕೇಳಲಾಗಿತ್ತು. ಸುಮಾರು 80 ಪ್ರತಿಶತ ವಿದ್ಯಾರ್ಥಿಗಳು ತಮ್ಮ ಊಟದಲ್ಲಿ ಮೊಟ್ಟೆಯ ಬೇಡಿಕೆ ಇಟ್ಟಿದ್ದಾರೆ. ವಿವಿಧ ವಲಯಗಳಲ್ಲಿನ ವಿದ್ಯಾರ್ಥಿಗಳಿಂದ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕದಲ್ಲಿ 1ರಿಂದ 8ನೇ ತರಗತಿಯಲ್ಲಿ ಸುಮಾರು 38.37 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರಲ್ಲಿ ಸುಮಾರು 80 ಪ್ರತಿಶತ ವಿದ್ಯಾರ್ಥಿಗಳು ಮೊಟ್ಟೆಗೆ ಬೇಡಿಕೆ ಇಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಸಮೀಕ್ಷೆಯ ಪ್ರಕಾರ ಇತರ 2.27 ಲಕ್ಷ ವಿದ್ಯಾರ್ಥಿಗಳು ಕಡಲೆಕಾಯಿ ಚಿಕ್ಕಿ ಮತ್ತು ಬಾಳೆಹಣ್ಣುಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕರ್ನಾಟಕದ ಮಕ್ಕಳಿಗೆ ಸದ್ಯಕ್ಕಿಲ್ಲ ರಾಗಿ ಮುದ್ದೆ, ಜೋಳದ ರೊಟ್ಟಿ ಭಾಗ್ಯ
ರಾಜ್ಯದಲ್ಲಿ ಸಾತ್ವಿಕ ಆಹಾರ ಪೂರೈಕೆ ವಿಚಾರದಲ್ಲಿ ವಿವಾದ ಎಬ್ಬಿದ್ದರಿಂದ ಮುಖ್ಯವಾಗಿ ಬೆಳಗಾವಿ ವಿಭಾಗದ ನಂತರ ಬೆಂಗಳೂರು ಮತ್ತು ಕಲ್ಬುರ್ಗಿ ಮತ್ತು ಮೈಸೂರು ಜಿಲ್ಲೆಗಳ ವಿದ್ಯಾರ್ಥಿಗಳು ತಮ್ಮ ಪೌಷ್ಠಿಕ ಆಹಾರದಲ್ಲಿ ತಮ್ಮ ಊಟಕ್ಕೆ ಮೊಟ್ಟೆ ಬೇಕೆಂದು ಆರಿಸಿಕೊಂಡಿದ್ದಾರೆ. ಹಿಂದೆ ಮಕ್ಕಳು ಕೇಳಿದಾಗ ಮೊಟ್ಟೆ ನೀಡಬೇಕು ಅದರ ಬದಲಿಗೆ ಬಾಳೆಹಣ್ಣು ಅಥವಾ ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ಆಯುಕ್ತ ಆರ್ ವಿಶಾಲ್ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದರು. ಮೊಟ್ಟೆಯ ದರ ವೆಚ್ಚ ಭರಿಸಲಾಗದೆ ಮಧ್ಯಾಹ್ನಾದ ಊಟದಲ್ಲಿ ಮೊಟ್ಟೆಯನ್ನು ನಿಲ್ಲಿಸಬಾರದು ಎಂದು ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗಳಿಗೆ ತಿಳಿಸಿತ್ತು.
ಮಧ್ಯಾಹ್ನದ ಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಿ ಆಂತರಿಕ ಕಚೇರಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ ಮತ್ತು ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ" ಎಂದು ವಿಶಾಲ್ ಹೇಳಿದ್ದರು.