ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 8191 ಜನರಿಗೆ ಕೊರೊನಾವೈರಸ್
ಬೆಂಗಳೂರು, ಸಪ್ಟೆಂಬರ್.18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 519537ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 8191 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 101 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 8023ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಕೊರೊನಾವೈರಸ್ ಒಟ್ಟು 519537 ಸೋಂಕಿತ ಪ್ರಕರಣಗಳ ಪೈಕಿ 413452 ಸೋಂಕಿತರು ಗುಣಮುಖರಾಗಿದ್ದಾರೆ. 98043 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 8611 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?:
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 26731 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 33746 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 60477 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 4240044 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.
ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:
ರಾಜ್ಯದಲ್ಲಿ ಒಟ್ಟು 8191 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 90, ಬಳ್ಳಾರಿ 298, ಬೆಳಗಾವಿ 151, ಬೆಂಗಳೂರು ಗ್ರಾಮಾಂತರ 179, ಬೆಂಗಳೂರು 3322, ಬೀದರ್ 77, ಚಾಮರಾಜನಗರ 69, ಚಿಕ್ಕಬಳ್ಳಾಪುರ 81, ಚಿಕ್ಕಮಗಳೂರು 129, ಚಿತ್ರದುರ್ಗ 0, ದಕ್ಷಿಣ ಕನ್ನಡ 380, ದಾವಣಗೆರೆ 130, ಧಾರವಾಡ 305, ಗದಗ 75, ಹಾಸನ 277, ಹಾವೇರಿ 44, ಕಲಬುರಗಿ 136, ಕೊಡಗು 32, ಕೋಲಾರ 105, ಕೊಪ್ಪಳ 337, ಮಂಡ್ಯ 165, ಮೈಸೂರು 481, ರಾಯಚೂರು 132, ರಾಮನಗರ 57, ಶಿವಮೊಗ್ಗ 295, ತುಮಕೂರು 244, ಉಡುಪಿ 295, ಉತ್ತರ ಕನ್ನಡ 108, ವಿಜಯಪುರ 81, ಯಾದಗಿರಿ 116 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications