ರಾಯಚೂರಿನಲ್ಲಿ ಕನ್ನಡ ಹಬ್ಬ ಸಹೃದಯರಿಗೇನೇನಿದೆ?
ರಾಯಚೂರು ಡಿಸೆಂಬರ್ 2: ರಾಯಚೂನಲ್ಲಿ ಮೂರನೇ ಬಾರಿಗೆ ಕನ್ನಡ ನುಡಿಹಬ್ಬ ಆಚರಣೆಗೆ ಎಲ್ಲ ರೀತಿಯಲ್ಲೂ ಸಜ್ಜುಗೊಂಡಿದ್ದು, ಶುಕ್ರವಾರ ಬೆಳಗ್ಗೆಯಿಂದ ಎಲ್ಲ ಕಾರ್ಯಗಳು ಪ್ರಾರಂಭವಾಗಲಿದೆ.
ಡಿ.2 ಪ್ರಾರಂಭವಾಗಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಕೃಷಿ ವಿಶ್ವವಿದ್ಯಾಲಯದ ಆವರಣ ನವವಧುವಿನಂತೆ ಸಿಂಗಾರಗೊಂಡಿದೆ.[ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ಕನ್ನಡ ಹಬ್ಬ ಆರಂಭ]

ಸಮ್ಮೇಳನದ ಸರ್ವಾಧ್ಯಕ್ಷ ಡಾ. ಬರಗೂರು ರಾಮಚಂದ್ರಪ್ಪ ಅವರನ್ನು ಕರ್ನಾಟಕ ಸಂಘದಿಂದ ಸಾರೋಟಿನಲ್ಲಿ ಅದ್ದೂರಿ ಮೆರವಣಿಗೆಯಲ್ಲಿ ಕರೆತರಲು 30 ಕಲಾತಂಡಗಳಿಂದ 300 ಕಲಾವಿದರು, ಕಳಸ ಹೊತ್ತ 82 ಮಹಿಳೆಯರು, ಭುವನೇಶ್ವರಿಯು ತೇರು, 3,500 ಅಡಿ ಉದ್ದ ಕನ್ನಡ ಬಾವುಟಗಳನ್ನು ಹಿಡಿದು ಐದು ಸಾವಿರಕ್ಕೂ ಹೆಚ್ಚು ಜನರು ಸಜ್ಜಾಗಿದ್ದಾರೆ.
ಸಮ್ಮೇಳನಕ್ಕಾಗಿ 20 ಸಾವಿರ ಚದರಡಿಯ ಪಂಡಿತ ತಾರಾನಾಥರ ಹೆಸರಿನ ಮಹಾಮಂಟಪ, 30 ಸಾವಿರದಷ್ಟು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಪ್ರಧಾನ ವೇದಿಕೆಯು 89X40 ಅಡಿ ಉದ್ದಗಲ ಮತ್ತು ಐದು ಅಡಿ ಎತ್ತರವಿದ್ದು, 100 ಜನರು ಕುಳಿತುಕೊಳ್ಳಬಹುದು. ಈ ವೇದಿಕೆಗೆ ರಾಯಚೂರು ತಾಲ್ಲೂಕಿನ ಹೆಂಬೆರಾಳಿನ ಮೇರು ಸಾಹಿತಿ ಶಾಂತರಸರ ಹೆಸರಿಡಲಾಗಿದೆ.
ಪ್ರಧಾನ ವೇದಿಕೆಯ ಪಕ್ಕದಲ್ಲಿ ಸುಮಾರು 200 ಪುಸ್ತಕ ಮಳಿಗೆ, 80 ಕಲಾಕೃತಿಗಳ ಪ್ರದರ್ಶನ ಮಳಿಗೆ ಮತ್ತು ವಾಣಿಜ್ಯ ಮಳಿಗೆ ಸೇರಿದಂತೆ 520 ಮಳಿಗೆಗಳು ಸಿದ್ಧವಾಗಿವೆ.

ನೂರು ಕೌಂಟರ್ಗಳನ್ನು ಒಳಗೊಂಡ ಭೋಜನಶಾಲೆಯಿದ್ದು ಈ ಭಾಗದ ವಿಶೇಷ ಖಾದ್ಯ ಖಡಕ್ ರೊಟ್ಟಿ, ಎಣ್ಣೆಗಾಯಿ ಪಲ್ಯ, ಶೇಂಗಾ, ಗುರೆಳ್ಳು ಚಟ್ನಿ, ಮಾದ್ಲಿ ಸಿಹಿ ಖಾದ್ಯವನ್ನು ಒಳಗೊಂಡ ಸವಿ ರುಚಿಯ ಭೋಜನವನ್ನು ಬಡಿಸಲು 300 ಬಾಣಸಿಗರು ಇದ್ದಾರೆ. ಪ್ರತಿದಿನ ಅಂದಾಜು ಒಂದು ಲಕ್ಷ ಜನರಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ. ನೆರವಿಗೆ ಮೂರು ಸಾವಿರ ಜನರ ಸ್ವಯಂ ಸೇವಕರ ಪಡೆಯೂ ಇದೆ.
ಪ್ರಧಾನ, ಸಮಾನಾಂತರ ವೇದಿಕೆ ಮತ್ತು ರಂಗಮಂದಿರಗಳಲ್ಲಿ ಒಟ್ಟಾರೆ 175 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, 1,100 ಕಲಾವಿದರು ಭಾಗಿಯಾಗಲಿದ್ದಾರೆ.
ಸಮ್ಮೇಳನಕ್ಕೆ ಬರುವ 4,500 ನೋಂದಾಯಿತ ಪ್ರತಿನಿಧಿಗಳು, ಗಣ್ಯರಿಗೆ ಸೇರಿದಂತೆ 8 ಸಾವಿರ ಜನರಿಗೆ ಕೃಷಿ ವಿ.ವಿ. ಅತಿಥಿ ಗೃಹ ಹಾಗೂ ಹಾಸ್ಟೆಲ್ ಗಳು, ನಗರದ 30ಕ್ಕೂ ಹೆಚ್ಚು ಹೋಟೆಲ್ಗಳು, ಶಾಲಾ- ಕಾಲೇಜು, ಹಾಸ್ಟೆಲ್ ಗಳು ಸೇರಿದಂತೆ 60ಕ್ಕೂ ಹೆಚ್ಚು ಕಡೆ ವಸತಿ ವ್ಯವಸ್ಥೆ ಮಾಡಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications