ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ವಿವಿಧ ಜೈಲುಗಳ 83 ಕೈದಿಗಳಿಗೆ ಕೋವಿಡ್ ಸೋಂಕು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28: ಕರ್ನಾಟಕದ ವಿವಿಧ ಜೈಲುಗಳಲ್ಲಿನ 83 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಆಸ್ಪತ್ರೆ ಮತ್ತು ಕೋವಿಡ್ ಆರೈಕೆ ಕೇಂದ್ರದಲ್ಲಿ ಕೈದಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಸಲ್ಲಿಸಿದ್ದ ಪಿಎಲ್‌ಎಲ್ ವಿಚಾರಣೆ ವೇಳೆ ಸರ್ಕಾರ ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದೆ. ಜೈಲುಗಳಲ್ಲಿ ಕೋವಿಡ್ ಹರಡದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೋವಿಡ್ ಪರೀಕ್ಷೆ ದರ ಇಳಿಕೆ; ಸರ್ಕಾರಿ ಲ್ಯಾಬ್‌ನಲ್ಲಿ ಈಗ 1,200 ರೂ.ಕೋವಿಡ್ ಪರೀಕ್ಷೆ ದರ ಇಳಿಕೆ; ಸರ್ಕಾರಿ ಲ್ಯಾಬ್‌ನಲ್ಲಿ ಈಗ 1,200 ರೂ.

ರಾಜ್ಯದ 47 ವಿವಿಧ ಕಾರಾಗೃಹಗಳ 83 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಆಸ್ಪತ್ರೆ ಮತ್ತು ಕೋವಿಡ್ ಕೇರ್‌ ಸೆಂಟರ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ತಗುಲಿದ 668 ಕೈದಿಗಳಲ್ಲಿ 585 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಸರ್ಕಾರ ಹೇಳಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್! ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಟಾಪ್!

ಕಾರಾಗೃಹಗಳಲ್ಲಿ ವಿಶೇಷ ಐಸೊಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಹ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೈಲಿಗೆ ವಿಚಾರಣಾಧೀನ ಕೈದಿಗಳನ್ನು ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಕರ್ನಾಟಕ; 1 ಲಕ್ಷದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳುಕರ್ನಾಟಕ; 1 ಲಕ್ಷದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು

ಕೋವಿಡ್ ಪರೀಕ್ಷೆ ಕಡ್ಡಾಯ

ಕೋವಿಡ್ ಪರೀಕ್ಷೆ ಕಡ್ಡಾಯ

ವಿಚರಣಾಧೀನ ಕೈದಿಗಳನ್ನು ಜೈಲಿಗೆ ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ವರದಿ ಪಾಸಿಟಿವ್ ಬಂದರೆ ಅವರಿಗೆ ಆಸ್ಪತ್ರೆ, ಜೈಲಿನ ಕೋವಿಡ್ ಕೇರ್ ಸೆಂಟರ್‌ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ವಿಶೇಷ ವಾರ್ಡ್‌ ಸ್ಥಾಪನೆ

ವಿಶೇಷ ವಾರ್ಡ್‌ ಸ್ಥಾಪನೆ

ಕಾರಾಗೃಹಗಳಲ್ಲಿ ವಿಶೇಷ ಐಸೊಲೇಷನ್ ವಾರ್ಡ್ ಸಿದ್ಧಪಡಿಸಲಾಗಿದೆ. ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಹ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೈಲಿಗೆ ವಿಚಾರಣಾಧೀನ ಕೈದಿಗಳನ್ನು ಕರೆತರುವ ಮುನ್ನ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಕೈದಿಗಳ ಸಂಖ್ಯೆ ಕಡಿಮೆ

ಕೈದಿಗಳ ಸಂಖ್ಯೆ ಕಡಿಮೆ

ಕೇಂದ್ರ ಸರ್ಕಾರದ ಸೂಚನೆಯಂತೆ ಜೈಲುಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲಾಗಿದೆ. ಮಾರ್ಚ್ 23ರಂದು ಜೈಲುಗಳ ಸಾಮರ್ಥ್ಯಕ್ಕೆ ಹೋಲಿಕೆ ಮಾಡಿದರೆ ಶೇ 110 ಇದ್ದ ಕೈದಿಗಳ ಸಂಖ್ಯೆಯನ್ನು 97.7ಕ್ಕೆ ಇಳಿಸಲಾಗಿದೆ ಎಂದು ಸರ್ಕಾರ ವಿವರಣೆ ನೀಡಿದೆ.

ಯಾವ ಜೈಲಿನಲ್ಲಿ ಎಷ್ಟು?

ಯಾವ ಜೈಲಿನಲ್ಲಿ ಎಷ್ಟು?

ಪರಪ್ಪನ ಅಗ್ರಹಾರ ಜೈಲಿನಲ್ಲಿ 5203 ಕೈದಿಗಳಿದ್ದು 320 ಕೋವಿಡ್ ಪ್ರಕರಣ ದಾಖಲಾಗಿತ್ತು. ಜೈಲಿನಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 17. ಮೈಸೂರು 64, ಕಲಬುರಗಿ 43, ಬೆಳಗಾವಿ 37, ಬಳ್ಳಾರಿ 29 ಮತ್ತು ವಿಜಯಪುರದಲ್ಲಿ 19 ಕೈದಿಗಳಿಗೆ ಸೋಂಕು ತಗುಲಿತ್ತು.

Recommended Video

UNLOCK 5.0 ಎನಿರತ್ತೆ ? ಎನಿರಲ್ಲಾ?? | Oneindia Kannada

English summary
In a report to Karnataka high court government said that 83 prison inmates have tested positive for COVID-19 in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X