ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18 : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆ ಇದೆ. ಡಿಸೆಂಬರ್ ತಿಂಗಳಿನಲ್ಲಿ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಬೇಕಿತ್ತು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಕುರಿತು ಮಾತನಾಡಿದ್ದಾರೆ. "2020ರ ಜನವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಹೇಳಿದ್ದಾರೆ.

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

85th Kannada Sahitya Sammelan In January 2020

ಡಿಸೆಂಬರ್‌ನಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ನಡೆಸಲು ಚಿಂತನೆ ನಡೆದಿದೆ.

ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ

"ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಬ್ಯುಸಿ ಇರುತ್ತಾರೆ. ಆದ್ದರಿಂದ, ಸಾಹಿತ್ಯ ಸಮ್ಮೇಳನದ ಕಾರ್ಯದಲ್ಲಿ ತೊಡಗಿಕೊಳ್ಳಲು ಕಷ್ಟವಾಗುತ್ತದೆ. ಚುನಾವಣೆ ಮುಗಿದ ಬಳಿಕ ತಯಾರಿ ಆರಂಭಿಸಿ ಜನವರಿಯಲ್ಲಿ ಸಮ್ಮೇಳನ ನಡೆಸಲಾಗುತ್ತದೆ" ಎಂದು ಗೋವಿಂದ ಕಾರಜೋಳ ಹೇಳಿದರು.

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆದಿತ್ತು. 85ನೇ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿಯಲ್ಲಿ ನಡೆಸಲಿ ತೀರ್ಮಾನಿಸಲಾಗಿತ್ತು. ಈಗ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆ ಇದೆ.

ಕರ್ನಾಟಕದ 15 ವಿಧಾಸಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.

English summary
Karnataka government may organize 85th Akhil Bharat Kannada Sahitya Sammelan at Kalaburagi in January 2020 instead of this December due to by elections of 15 assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X