ಕರ್ನಾಟಕ; 9 ಜಿಲ್ಲೆಗೆ ಬೇಕು ಆಕ್ಸಿಜನ್ ಮರುಪೂರಣ ಘಟಕ
ಬೆಂಗಳೂರು, ಆಗಸ್ಟ್ 19; ಕೋವಿಡ್ 2ನೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆಕ್ಸಿಜನ್ಗೆ ಭಾರೀ ಬೇಡಿಕೆ ಉಂಟಾಗಿತ್ತು. ಆಕ್ಸಿಜನ್ ಕೊರತೆಯ ಕಾರಣ ಚಾಮರಾಜನಗರದಲ್ಲಿ 20ಕ್ಕೂ ಅಧಿಕ ರೋಗಿಗಳು ಪ್ರಾಣ ಕಳೆದುಕೊಂಡಿದ್ದರು.
ಈ ಘಟನೆ ಬಳಿಕ ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಮರುಪೂರಣ ಘಟಕ ನಿರ್ಮಾಣದತ್ತ ಗಮನಹರಿಸಲಾಗಿತ್ತು. ಆದರೆ ರಾಜ್ಯದ 9 ಜಿಲ್ಲೆಗಳಲ್ಲಿ ಇನ್ನೂ ಮರುಪೂರಣ ಘಟಕ ನಿರ್ಮಾಣವಾಗಬೇಕಿದೆ.
ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್, ಯಾದಗಿರಿ, ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಕ್ಸಿಜನ್ ಮರುಪೂರಣ ಘಟಕಗಳು ಇನ್ನೂ ನಿರ್ಮಾಣಗೊಂಡಿಲ್ಲ.

ಕೆಲವು ಖಾಸಗಿ ಸಂಸ್ಥೆಗಳು ಜಿಲ್ಲೆಗಳಲ್ಲಿ ಮರುಪೂರಣ ಘಟಕ ನಿರ್ಮಾಣ ಮಾಡಲು ಆಸಕ್ತಿ ತೋರಿಸಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದಾಗ ಅಕ್ಕಪಕ್ಕದ ಜಿಲ್ಲೆಗಳ ಮೇಲೆ ಅವಲಂಬಿತರಾಗುವುದು ಅನಿವಾರ್ಯವಾಗಿದೆ.
ಚಾಮರಾಜನಗರದಲ್ಲಿ 350 ಆಕ್ಸಿಜನ್ ಹಾಸಿಗೆಗಳ ವ್ಯವಸ್ಥೆ ಇದೆ. ಇವುಗಳಲ್ಲಿ ಪ್ರಸ್ತುತ 30 ಭರ್ತಿಯಾಗಿವೆ. ಆಗಸ್ಟ್ 16ರಂದು ಜಿಲ್ಲೆಯಲ್ಲಿ 1.43 ಮೆಟ್ರಿಕ್ ಟನ್ ಆಕ್ಸಿಜನ್ 5 ಸರ್ಕಾರಿ ಮತ್ತು 2 ಖಾಸಗಿ ಆಸ್ಪತ್ರೆಗಳಿಂದ ಒಟ್ಟು ಬಳಕೆಯಾಗಿದೆ. ಆದರೆ ಜಿಲ್ಲೆಗೆ ಇನ್ನೂ ಆಕ್ಸಿಜನ್ ಮೈಸೂರಿಂದ ಬರಬೇಕಿದೆ.
ಉದ್ಯಮಿಗಳು ಮರುಪೂರಣ ಘಟಕ ನಿರ್ಮಾಣ ಮಾಡಲು ಮುಂದೆ ಬಂದರೆ ಒಳ್ಳೆಯದು. ಆದರೆ ಜಿಲ್ಲೆಯಲ್ಲಿ ಅಂತಹ ಯಾವುದೇ ಉದ್ಯಮಗಳಿಲ್ಲ. ಘಟಕ ನಿರ್ಮಾಣ ಮಾಡಲು ಮುಂದೆ ಬಂದರೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಈಗ ಯಾವುದೇ ಮರುಪೂರಣ ಘಟಕಗಳು ಇಲ್ಲ. ಆದರೆ ಮೂರು ಘಟಕ ನಿರ್ಮಾಣವಾಗುತ್ತಿದ್ದು, ಅವುಗಳು ಇನ್ನಷ್ಟೇ ಕಾರ್ಯವನ್ನು ಆರಂಭಿಸಬೇಕಿದೆ.
ಯಾದಗಿರಿ ಜಿಲ್ಲೆಯಲ್ಲಿಯೂ ಈಗ ಯಾವುದೇ ಮರುಪೂರಣ ಘಟಕಗಳಿಲ್ಲ. ಆದರೆ 500 ಎಲ್ಪಿಎಂ ಸಾಮರ್ಥ್ಯದ ಒಂದು ಮತ್ತು 1000 ಎಲ್ಪಿಎಂ ಸಾಮರ್ಥ್ಯದ ಮತ್ತೊಂದು ಘಟಕ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಂತಹ ದುರಂತಗಳು ಮತ್ತೆ ನಡೆಯಬಾರದು ಎಂದರೆ ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಮರುಪೂರಣ ಘಟಕಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ 64 ಘಟಕಗಳಿವೆ. ಆದರೆ ಎಲ್ಲಾ ಜಿಲ್ಲೆಗಳಲ್ಲೂ ಲಭ್ಯವಿಲ್ಲ.
ಮರುಪೂರಣ ಘಟಕಗಳು ಇಲ್ಲದ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾದಾಗ ಬೇರೆ ಜಿಲ್ಲೆಗಳಿಂದ ಆಕ್ಸಿಜನ್ ಬರುವ ತನಕ ಕಾಯಬೇಕು. ತುರ್ತು ಸಮಯದಲ್ಲಿ ಆಕ್ಸಿಜನ್ ಬರುವುವುದು ತಡವಾದರೆ ರೋಗಿಗಳಿಗೆ ಸಂಕಷ್ಟ ಎದುರಾಗಲಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications