ಕರ್ನಾಟಕ; 9 ಜಿಲ್ಲೆಗೆ ಬೇಕು ಆಕ್ಸಿಜನ್ ಮರುಪೂರಣ ಘಟಕ
ಬೆಂಗಳೂರು, ಆಗಸ್ಟ್ 19; ಕೋವಿಡ್ 2ನೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆಕ್ಸಿಜನ್ಗೆ ಭಾರೀ ಬೇಡಿಕೆ ಉಂಟಾಗಿತ್ತು. ಆಕ್ಸಿಜನ್ ಕೊರತೆಯ ಕಾರಣ ಚಾಮರಾಜನಗರದಲ್ಲಿ 20ಕ್ಕೂ ಅಧಿಕ ರೋಗಿಗಳು ಪ್ರಾಣ ಕಳೆದುಕೊಂಡಿದ್ದರು.
ಈ ಘಟನೆ ಬಳಿಕ ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಮರುಪೂರಣ ಘಟಕ ನಿರ್ಮಾಣದತ್ತ ಗಮನಹರಿಸಲಾಗಿತ್ತು. ಆದರೆ ರಾಜ್ಯದ 9 ಜಿಲ್ಲೆಗಳಲ್ಲಿ ಇನ್ನೂ ಮರುಪೂರಣ ಘಟಕ ನಿರ್ಮಾಣವಾಗಬೇಕಿದೆ.
ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್, ಯಾದಗಿರಿ, ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಕ್ಸಿಜನ್ ಮರುಪೂರಣ ಘಟಕಗಳು ಇನ್ನೂ ನಿರ್ಮಾಣಗೊಂಡಿಲ್ಲ.

ಕೆಲವು ಖಾಸಗಿ ಸಂಸ್ಥೆಗಳು ಜಿಲ್ಲೆಗಳಲ್ಲಿ ಮರುಪೂರಣ ಘಟಕ ನಿರ್ಮಾಣ ಮಾಡಲು ಆಸಕ್ತಿ ತೋರಿಸಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದಾಗ ಅಕ್ಕಪಕ್ಕದ ಜಿಲ್ಲೆಗಳ ಮೇಲೆ ಅವಲಂಬಿತರಾಗುವುದು ಅನಿವಾರ್ಯವಾಗಿದೆ.
ಚಾಮರಾಜನಗರದಲ್ಲಿ 350 ಆಕ್ಸಿಜನ್ ಹಾಸಿಗೆಗಳ ವ್ಯವಸ್ಥೆ ಇದೆ. ಇವುಗಳಲ್ಲಿ ಪ್ರಸ್ತುತ 30 ಭರ್ತಿಯಾಗಿವೆ. ಆಗಸ್ಟ್ 16ರಂದು ಜಿಲ್ಲೆಯಲ್ಲಿ 1.43 ಮೆಟ್ರಿಕ್ ಟನ್ ಆಕ್ಸಿಜನ್ 5 ಸರ್ಕಾರಿ ಮತ್ತು 2 ಖಾಸಗಿ ಆಸ್ಪತ್ರೆಗಳಿಂದ ಒಟ್ಟು ಬಳಕೆಯಾಗಿದೆ. ಆದರೆ ಜಿಲ್ಲೆಗೆ ಇನ್ನೂ ಆಕ್ಸಿಜನ್ ಮೈಸೂರಿಂದ ಬರಬೇಕಿದೆ.
ಉದ್ಯಮಿಗಳು ಮರುಪೂರಣ ಘಟಕ ನಿರ್ಮಾಣ ಮಾಡಲು ಮುಂದೆ ಬಂದರೆ ಒಳ್ಳೆಯದು. ಆದರೆ ಜಿಲ್ಲೆಯಲ್ಲಿ ಅಂತಹ ಯಾವುದೇ ಉದ್ಯಮಗಳಿಲ್ಲ. ಘಟಕ ನಿರ್ಮಾಣ ಮಾಡಲು ಮುಂದೆ ಬಂದರೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಈಗ ಯಾವುದೇ ಮರುಪೂರಣ ಘಟಕಗಳು ಇಲ್ಲ. ಆದರೆ ಮೂರು ಘಟಕ ನಿರ್ಮಾಣವಾಗುತ್ತಿದ್ದು, ಅವುಗಳು ಇನ್ನಷ್ಟೇ ಕಾರ್ಯವನ್ನು ಆರಂಭಿಸಬೇಕಿದೆ.
ಯಾದಗಿರಿ ಜಿಲ್ಲೆಯಲ್ಲಿಯೂ ಈಗ ಯಾವುದೇ ಮರುಪೂರಣ ಘಟಕಗಳಿಲ್ಲ. ಆದರೆ 500 ಎಲ್ಪಿಎಂ ಸಾಮರ್ಥ್ಯದ ಒಂದು ಮತ್ತು 1000 ಎಲ್ಪಿಎಂ ಸಾಮರ್ಥ್ಯದ ಮತ್ತೊಂದು ಘಟಕ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಂತಹ ದುರಂತಗಳು ಮತ್ತೆ ನಡೆಯಬಾರದು ಎಂದರೆ ಪ್ರತಿ ಜಿಲ್ಲೆಯಲ್ಲಿ ಆಕ್ಸಿಜನ್ ಮರುಪೂರಣ ಘಟಕಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ 64 ಘಟಕಗಳಿವೆ. ಆದರೆ ಎಲ್ಲಾ ಜಿಲ್ಲೆಗಳಲ್ಲೂ ಲಭ್ಯವಿಲ್ಲ.
ಮರುಪೂರಣ ಘಟಕಗಳು ಇಲ್ಲದ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾದಾಗ ಬೇರೆ ಜಿಲ್ಲೆಗಳಿಂದ ಆಕ್ಸಿಜನ್ ಬರುವ ತನಕ ಕಾಯಬೇಕು. ತುರ್ತು ಸಮಯದಲ್ಲಿ ಆಕ್ಸಿಜನ್ ಬರುವುವುದು ತಡವಾದರೆ ರೋಗಿಗಳಿಗೆ ಸಂಕಷ್ಟ ಎದುರಾಗಲಿದೆ.
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ











Click it and Unblock the Notifications