9,000 ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿಲ್ಲ: KEAಸ್ಪಷ್ಟನೆ
ಬೆಂಗಳೂರು, ಡಿಸೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ರಾಜ್ಯದಲ್ಲಿ 8 ಸಾವಿರ ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯವಿದೆ. ಇದರಲ್ಲಿ ಈಗಾಗಲೇ 6 ಸಾವಿರ ಸೀಟುಗಳ ಹಂಚಿಕೆ ಆಗಿದ್ದು, ಯಾರಿಗೂ ಅನ್ಯಾಯವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಸೀಟಿ ಹಂಚಿಕೆಯ ಅಭ್ಯರ್ಥಿಗಳೆಲ್ಲ ಪ್ರವೇಶ ಸಹ ಪಡೆದುಕೊಂಡಿದ್ದಾರೆ. ಈ ಮಧ್ಯೆ ಕೇಳಿ ಬಂದ 9 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬುದೆಲ್ಲ ಆಧಾರ ರಹಿತವಾದದ್ದು ಎಂದು ತಿಳಿಸಿದ್ದಾರೆ.
ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕೇವಲ 106 ಅಭ್ಯರ್ಥಿಗಳು ಮಾತ್ರ ವೈದ್ಯಕೀಯ ಸೀಟನ್ನು ರದ್ದುಗೊಳಿಸಲಾಯಿತು. ಇವರಲ್ಲಿ 18 ಮಂದಿಯು ತಾವು ಮೊದಲ ಸುತ್ತಿನಲ್ಲಿ ಪಡೆದುಕೊಂಡಿದ್ದ ಎಂಜಿನಿಯರಿಂಗ್ ಸೀಟುಗಳನ್ನು ಮರಳಿ ಬಯಸಿದ್ದಾರೆ.

ಪಾರದರ್ಶಕವಾಗಿ ಸೀಟು ಹಂಚಿಕೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ, ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಅದರಲ್ಲಿರುವ 'ಆಯ್ಕೆ-2'ನ್ನು ಆರಿಸಿಕೊಂಡು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಭಾಗಗಳು ಎರಡರಲ್ಲೂ ಪಾಲ್ಗೊಳ್ಳಬಹುದು. ಆದರೆ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಯಾವುದೇ ಒಂದು ವಿಭಾಗದ ಸೀಟನ್ನು ಆಖೈರುಗೊಳಿಸಬೇಕಾಗುತ್ತದೆ. ಇಂತಹ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟಿನ ಆದೇಶದ ಪ್ರಕಾರ ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದರು.
ಇದುವರೆಗೆ ವಿದ್ಯಾರ್ಥಿಗಳು ನೀಡಿರುವ ಆಯ್ಕೆ ಪಟ್ಟಿಯ ಅನುಸಾರವೇ ವೈದ್ಯಕೀಯ ಸೀಟುಗಳ ಹಂಚಿಕೆ ಪಾರದರ್ಶಕವಾಗಿ ನಡೆದಿದೆ. ಆದರೆ ಕೆಲವರು ಶುಲ್ಕ ದುಬಾರಿ ಎಂಬ ಕಾರಣಕ್ಕೆ ಈ ಸೀಟುಗಳನ್ನು ಹಿಂದಿರುಗಿಸಿದ್ದಾರೆ. ಇಷ್ಟರ ನಡುವೆಯೂ ಮೆರಿಟ್ ಮತ್ತು ಮೀಸಲಾತಿ ಅನ್ವಯ ಆಗಿರುವ ಸೀಟು ಹಂಚಿಕೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪಾತ್ರವೇನೂ ಇಲ್ಲ.
ಇನ್ನೂ ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಸಿಕ್ಕಿದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಎಂಜಿನಿಯರಿಂಗ್ ಸೀಟು ತಾನಾಗಿಯೇ ರದ್ದಾಗುತ್ತದೆ ಎಂದರು.

ಎಂಸಿಸಿ ವೇಳಾಪಟ್ಟಿಗೆ ತಕ್ಕಂತೆ ವೈದ್ಯಕೀಯ ಸೀಟುಗಳ ಹಂಚಿಕೆ ಮತ್ತು ಎಐಸಿಟಿಇ ವೇಳಾಪಟ್ಟಿಗೆ ತಕ್ಕಂತೆ ಎಂಜಿನಿಯರಿಂಗ್ ಸೀಟುಗಳ ಹಂಚಿಕೆ ಪ್ರಕ್ರಿಯೆ ನಡೆಯುತ್ತದೆ. ಇದನ್ನು ಬದಲಿಸುವ ಅಧಿಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇಲ್ಲ. ಆದರೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ಈ ಬಾರಿ ನವೆಂಬರ್ 30ರವರೆಗೂ ಕಾಲಾವಕಾಶ ಪಡೆದುಕೊಳ್ಳಲಾಗಿತ್ತು ಎಂದು ರಮ್ಯ ಸ್ಪಷ್ಟಪಡಿಸಿದ್ದಾರೆ.
-
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications