ಕಾಣೆಯಾದ ಕಲಬುರಗಿಯ ಬಾಲಕನನ್ನು ಹುಡುಕಿಕೊಡಿ
ಕಲಬುರಗಿ, ಫೆಬ್ರವರಿ,18: ಸಂಜೆ ಮನೆಪಾಠಕ್ಕೆಂದು ತೆರಳಿದವನು ಮನೆ ತಲುಪಿಲ್ಲ. ಸ್ನೇಹಿತರು, ಸಂಬಂಧಿಕರು ಯಾರನ್ನೇ ವಿಚಾರಿಸಿದರೂ ಅವನ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ. ಎಲ್ಲಿ ಹೋದ, ಯಾರು ಅಪಹರಿಸಿದರು ಎಂಬುದೇ ತಿಳಿಯುತ್ತಿಲ್ಲ. ದಯವಿಟ್ಟು ಕಾಣೆಯಾದ ನನ್ನ ಮಗನನ್ನು ಹುಡುಕಿಸಿಕೊಡಿ ಎಂದು ತಂದೆ ತಾಯಿ ಗೋಗರೆಯುತ್ತಿದ್ದಾರೆ.
ಫೆಬ್ರವರಿ 16 ರಿಂದ ಕಾಣೆಯಾದ ಬಾಲಕನೇ ಸುಜಯ್ ಮುದಗಲ್ (ಹಣಮಂತು). ಈತ ಪ್ರಾಣೇಶ್ ಮುದುಗಲ್ ಹಾಗೂ ಗಿರಿಜಾ ದಂಪತಿಯ ಮಗನಾಗಿದ್ದು, ಗುಲ್ಬರ್ಗಾ ಜಿಲ್ಲೆಯ ಕಲಬುರಗಿಯ ರಾಘವೇಂದ್ರ ಕಾಲೋನಿ ಬಳಿ ಇರುವ ಸೇಂಟ್ ಮೇರಿಸ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದನು.[ಹೆತ್ತವರ ಪ್ರೀತಿ ಕಳೆದುಕೊಂಡು ನಲುಗುತ್ತಿರುವ ಮಕ್ಕಳು]

ಸುಜಯ್ ಫೆಬ್ರವರಿ 16ರಂದು ಸಂಜೆ 6.30ರ ಸುಮಾರಿಗೆ ಮನೆ ಬಳಿ ಇರುವ ಟ್ಯೂಶನ್ ಗಾಗಿ ತೆರಳಿದ್ದಾನೆ. ಎಷ್ಟೇ ಹೊತ್ತಾದರೂ ಮನೆಗೆ ಬಾರದಿರುವುದನ್ನು ಕಂಡು ಕಂಗಾಲಾಗಿ ಟ್ಯೂಶನ್ ಸೇರಿದಂತೆ ಎಲ್ಲೆಡೆ ವಿಚಾರಿಸಲಾಗಿದೆ. ಆದರೂ ಆತನ ಸುಳಿವು ದೊರೆತಿಲ್ಲ.
ಸುಜಯ್ ಕಾಣೆಯಾಗಿರುವ ಕುರಿತು ಆತನ ಅಣ್ಣ ರೇವಂತ ರಾಘವೇಂದ್ರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ. ಈತನ ಮಾಹಿತಿ ದೊರೆತಲ್ಲಿ ರಾಘವೇಂದ್ರ ನಗರ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ ಗೆ (8472-263608, 263604) ತಿಳಿಸುವಂತೆ ಹೇಳಿದ್ದಾರೆ.[ಇಬ್ಬರು ಮಕ್ಕಳ ಬಾಳಿಗೆ ಬೆಳಕಾದ ವಿಜಯಪುರದ 'ಜ್ಯೋತಿ']
ಸುಜಯ್ ನೋಡಲು ಹೇಗಿದ್ದಾನೆ?
14 ವರ್ಷದವನಾದ ಸುಜಯ್ ಕೆಂಪು ಗೋಧಿ ಬಣ್ಣ, ಗೋಲುಮುಖದವನಾಗಿದ್ದು, ಚಾಕಲೇಟ್ ಬಣ್ಣದ ಅಂಗಿ ಮತ್ತು ಕಂದು ಬಣ್ಣದ ಜೀನ್ಸ್ ಧರಿಸಿದ್ದಾನೆ. ಫೆಬವ್ರವರಿಯಿಂದ ಕಾಣೆಯಾಗಿರುವ ಈತ ಎರಡು ದಿನವಾದರೂ ಪತ್ತೆಯಾಗಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.
ಮನೆ ವಿಳಾಸ:
ಪ್ಲಾಟ್ ನಂ. 23
ಸಿತಾರಾ, ನ್ಯೂ ರಾಘವೇಂದ್ರ ಕಾಲೋನಿ[ಪೋಷಕರೇ, ಮಕ್ಕಳನ್ನು ಫೆವಿಕಾಲ್, ಪೇಯಿಂಟ್ ನಿಂದ ದೂರವಿರಿಸಿ]
ಬ್ರಹ್ಮಪುರ, ಕಲಬುರಗಿ, ಗುಲ್ಬರ್ಗಾ
ಫೋ.ನಂ : 9945015932
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications