ಅಪರೂಪದ ಪ್ರಕರಣ: 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಕೂಸಿನ 'ಮೂತ್ರಪಿಂಡ' ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು, ಜೂನ್ 19: ಮುಂದುವರಿದ ತಂತ್ರಜ್ಞಾನದ ಸದುಪಯೋಗದ ಛಾಯೆ ಎಲ್ಲ ಕ್ಷೇತ್ರಗಳಲ್ಲಿಯೂ ಕಾಣಲು ಸಿಗುತ್ತದೆ. ಇದಕ್ಕೆ ವೈದ್ಯಕೀಯ ರಂಗವೇನು ಹೊಸತೇನಲ್ಲ. ಜಗತ್ತಿನಲ್ಲೇ ಅತೀ ಅಪರೂಪದ ಪ್ರಕರಣವೊಂದರಲ್ಲಿ ''ರೋಬೋಟಿಕ್ ಎನ್-ಬ್ಲಾಕ್'' ನವೀನ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ (ಕಸಿ) ಮಾಡಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆ ಯಶಸ್ಸು ಸಾಧಿಸಿದೆ.
ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ "ರೋಬೋಟಿಕ್ ಎನ್-ಬ್ಲಾಕ್" ವಿಧಾನದ ಮೂಲಕ ಕಸಿ ಮಾಡಲಾಗಿದೆ. ಈ ಕಾರಣದಿಂದ ಇದು ಅಪರೂಪದಲ್ಲೇ ಅತೀ ಅಪರೂಪದ ಪ್ರಕರಣ ಎಂದು ವೈದ್ಯರು ಬಣ್ಣಿಸಿದ್ದಾರೆ.

ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.
ಮೃತ ಮಗುವಿನ ಕಿಡ್ನಿ ದಾನ
ನಾಲ್ಕು ಗಂಟೆಗಳ ಯಶಸ್ವಿ ಶಸ್ತ್ರ ಚಿಕಿತ್ಸೆಯ ನಂತರ ಮಾತನಾಡಿರುವ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ ವೈಫಲ್ಯಕ್ಕೆ ಒಳಗಾಗಿದ್ದರು. ಹಿಮೋಡಯಾಲಿಸಿಸ್ ಮಾಡಿಕೊಳ್ಳುತ್ತಿದ್ದರು. ಇವರಿಗೆ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗಿತ್ತು. ಈ ಮಧ್ಯೆ, 13 ತಿಂಗಳ ಮಗುವೊಂದು ಉಸಿರುಗಟ್ಟಿ ಸಾವಪ್ಪಿದ್ದರಿಂದ ಅವರ ಪೋಷಕರ ಒಪ್ಪಿಗೆ ಮೇರೆಗೆ ಆ ಸಣ್ಣ ಮಗುವಿನ ಕಿಡ್ನಿಯನ್ನು ದಾನವಾಗಿ ಪಡೆಯಲಾಯಿತು.
ಈ ಮಗು ಕೇವಲ 7.3 ಕೆಜಿ ಹೊಂದಿತ್ತು. 30 ವರ್ಷದ ಈ ವ್ಯಕ್ತಿಯೂ 50 ಕೆಜಿ ತೂಕವುಳ್ಳವರಾಗಿದ್ದರು. ಇವರಿಗೆ ಮಗುವಿನ ಕಿಡ್ನಿ ಕಸಿ ಮಾಡುವುದು ಸವಾಲಿನ ಕೆಲಸವಾಗಿತ್ತು. ಈ ಸವಾಲನ್ನು ನಮ್ಮ ತಂಡ ಸ್ವೀಕರಿಸಿತು. ಅಗತ್ಯ ಸಿದ್ಧತೆಗಳೊಂದಿಗೆ ರೋಬೋಟಿಕ್ ಎನ್-ಬ್ಲಾಕ್ ಮೂಲಕ ಕಿಡ್ನಿಯನ್ನು ಕಸಿ ಮಾಡಲಾಯಿತು.

4 ಗಂಟೆ ಶಸ್ತ್ರಚಿಕಿತ್ಸೆ, ತೀವ್ರ ನಿಗಾ ಘಟಕದಲ್ಲಿ ಆರೈಕೆ
ರೋಬೋಟಿಕ್ ಎನ್-ಬ್ಲಾಕ್, ಈ ನವೀನ ತಂತ್ರವು ಕಸಿ ಮಾಡಿದ ಮೂತ್ರಪಿಂಡಗಳನ್ನು ಸ್ವೀಕರಿಸುವವರ ದೇಹದ ತೂಕಕ್ಕೆ ಅನುಗುಣವಾಗಿ ಗಾತ್ರವನ್ನು ಹೆಚ್ಚಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಶಸ್ತ್ರಚಿಕಿತ್ಸೆಯು ಸುಮಾರು ನಾಲ್ಕು ಗಂಟೆಗಳ ವರೆಗೆ ಸುದೀರ್ಘವಾಗಿ ಸಾಗಿತು.
ಈ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ, ರೋಗಿಯನ್ನು ತೀವ್ರ ನಿಗಾಘಟಕದಲ್ಲಿ ಇರಿಸಿ, ಆರೈಕೆ ಮಾಡಲಾಯಿತು. 12 ದಿನಗಳ ಬಳಿಕ ಅವರನ್ನು ಬಿಡುಗಡೆ ಗೊಳಿಸಲಾಯಿತು ಎಂದು ವಿವರಣೆ ನೀಡಿದರು.
ಫೋರ್ಟಿಸ್ ಆಸ್ಪತ್ರೆಯ ಬಿಸಿನೆಸ್ ಹೆಡ್ ಅಕ್ಷಯ್ ಒಲೇಟಿ ಮಾತನಾಡಿ, ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಅಳವಡಿಕೆಯಿಂದ ಯಾವುದೇ ಕಷ್ಟಕರ ಶಸ್ತ್ರಚಿಕಿತ್ಸೆಯಾದರೂ ಸುಲಭವಾಗಿ ನಿಭಾಯಿಸಲು ಸಾಧ್ಯವಾಗುತ್ತಿದೆ. ಅದರಲ್ಲೂ ಸಣ್ಣ ಮಗುವಿನ ಕಿಡ್ನಿಯನ್ನು ದೊಡ್ಡವರಿಗೆ ಅಳವಡಿಸುವುದು ಒಂದು ಸವಾಲೆ ಸರಿ. ಈ ವಿನೂತನ ಪ್ರಯತ್ನವನ್ನು ನಮ್ಮ ವೈದ್ಯರ ತಂಡ ಇರುವ ನೂತನ ಟೆಕ್ನಾಲಜಿ ಬಳಸಿಕೊಂಡು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈ ಮೂಲಕ ಇದು ವಿಶ್ವದಲ್ಲಿಯೇ ಮೊದಲ ಪ್ರಕರಣ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ಅವರು ವಿವರಿಸಿದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications