ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್

By Gururaj
|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಗೆ ಹೈ ಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್ | Oneindia Kannada

ಬೆಂಗಳೂರು, ಜುಲೈ 31 : ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆದಾಯ ತೆರಿಗೆ ಇಲಾಖೆ ಸಚಿವರ ವಿರುದ್ಧ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

ಸಚಿನ್ ನಾರಾಯಣನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ ತಾಂತ್ರಿಕ ಕಾರಣಗಳಿಂದಾಗಿ ಆದಾಯ ತೆರಿಗೆ ಇಲಾಖೆ ದಾಖಲು ಮಾಡಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಬೌರಿಂಗ್ ಲಾಕರ್ ಪ್ರಕರಣ: ಸಿಸಿಟಿವಿ ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳುಬೌರಿಂಗ್ ಲಾಕರ್ ಪ್ರಕರಣ: ಸಿಸಿಟಿವಿ ಪರಿಶೀಲಿಸುತ್ತಿರುವ ಐಟಿ ಅಧಿಕಾರಿಗಳು

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲರು, ಆದಾಯ ತೆರಿಗೆ ಇಲಾಖೆ ದೂರು ದಾಖಲು ಮಾಡಿಕೊಳ್ಳುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ನಿಯಮದಂತೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು, ಇಲ್ಲವಾದಲ್ಲಿ ಅದು ಕಾನೂನು ಬಾಹಿರವಾಗುತ್ತದೆ ಎಂದು ವಾದ ಮಂಡಿಸಿದರು.

dk shiva kumar

ಈ ಪ್ರಕರಣದಲ್ಲಿ ಉನ್ನತ ಶಿಕ್ಷಣ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಚಿನ್ ನಾರಾಯಣ್ 2ನೇ ಆರೋಪಿ.

ಆದಾಯ ತೆರಿಗೆ (ಐಟಿ) ರಿಟರ್ನ್ಸ್ ಕೊನೆ ದಿನಾಂಕ ವಿಸ್ತರಣೆ ಏಕೆ?ಆದಾಯ ತೆರಿಗೆ (ಐಟಿ) ರಿಟರ್ನ್ಸ್ ಕೊನೆ ದಿನಾಂಕ ವಿಸ್ತರಣೆ ಏಕೆ?

ಶರ್ಮಾ ಟ್ರಾವೆಲ್ಸ್‌ನ ಸುನೀಲ್ ಕುಮಾರ್ ಶರ್ಮಾ, ದೆಹಲಿ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ, ರಾಜೇಂದ್ರ ಇತರ ಆರೋಪಿಗಳಾಗಿದ್ದಾರೆ.

English summary
In a major relief to Water Resources & Medical Education Minister D.K.Shiva Kumar Karnataka High Court stayed the income tax department probe against D.K.Shiva Kumar in the case of money found in minister house in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X