ಬಿಳಿ ಗೂಬೆ ಸಾಕಿದ್ರೆ ನಿಮ್ಮ ಬದುಕು ಬಂಗಾರವಾಗುತ್ತಂತೆ!
ಮಂಡ್ಯ, ಡಿಸೆಂಬರ್,28: ನಾವೆಲ್ಲರೂ ಸಾಮಾನ್ಯವಾಗಿ ಕಂದು ಬಣ್ಣದ ಗೂಬೆಯನ್ನು ಕಂಡಿದ್ದೇವೆ. ಇದನ್ನು ಅಪಶಕುನದ ಸಂಕೇತ ಎನ್ನುವ ಭಾವನೆ ನಮ್ಮೆಲ್ಲರಲ್ಲೂ ಮೈದಳೆದಿದೆ. ಆದರೆ ಈ ಎಲ್ಲಾ ಗುಣಗಳಿಂದ ವಿಭಿನ್ನವಾದ ಗೂಬೆಯೊಂದು ಮಂಡ್ಯ ಜನರ ಕಣ್ಣಿಗೆ ಬಿದ್ದಿದೆ.
ಮಂಡ್ಯದ ಆಸ್ಪತ್ರೆ ರಸ್ತೆಯಲ್ಲಿರುವ ಮಿಮ್ಸ್ ಕಾಂಪೌಂಡ್ ಮೇಲೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಬಿಳಿ ಬಣ್ಣದ ಗೂಬೆ ನೋಡುಗರ ಗಮನಸೆಳೆಯುತ್ತಿದೆ. ಇದನ್ನು 'ಬಾರನ್ ಔಲ್' ಎಂದು ಕರೆಯಲಾಗುತ್ತದೆ.[ಅಪಾಯದಲ್ಲಿದ್ದ ಉಲೂಕ ಕಾಪಾಡಿದ ಒನ್ಇಂಡಿಯಾ ಪತ್ರಕರ್ತ]

ಗೂಬೆ ಅಪಶಕುನದ ಸಂಕೇತ, ಇದನ್ನು ನೋಡಿ ಹೋದರೆ ಯಾವ ಕೆಲಸ ಕಾರ್ಯಗಳು ಸಿದ್ಧಿಸುವುದಿಲ್ಲ ಎಂಬ ಮಾತಿದೆ. ಇದರಲ್ಲಿ ಆದರೆ ಬಿಳಿ ಬಣ್ಣದ ಗೂಬೆಗಳು ಮನೆಯಲ್ಲಿದ್ದರೆ ಅದೃಷ್ಟ ಒಲಿಯುತ್ತದೆ ಎಂದು ಜನರು ಸಾಕಲು ಮುಂದಾಗುತ್ತಿದ್ದಾರೆ.
ಬಿಳಿ ಬಣ್ಣದ ಗೂಬೆ ಕಂದು ಬಣ್ಣದ ಗೂಬೆಗಿಂತ ಚಿಕ್ಕ ಗಾತ್ರದಾಗಿದ್ದು, ಇಲಿ, ಏಡಿ, ಸಣ್ಣ ಪುಟ್ಟ ಕೀಟಗಳನ್ನು ಹಿಡಿದು ತಿನ್ನುತ್ತಾ ಬದುಕುತ್ತವೆ. ಸಾಮಾನ್ಯವಾಗಿ ರೈತರು ಇವುಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಕಾರಣ ಇವು ಒಂದು ರೀತಿಯಲ್ಲಿ ರೈತರಿಗೆ ಪರೋಪಕಾರಿ ಎಂದರೆ ತಪ್ಪಾಗುವುದಿಲ್ಲ.[ಚಿರತೆ ಸಂತತಿಯಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ]

ಅದೃಷ್ಟ ಎಂಬ ಮಾತು ಕೇಳಿದ್ದೇ ತಡ ಬಿಳಿ ಗೂಬೆಗಳನ್ನು ಹಿಡಿದು ಮಾರುವ ಜಾಲವೇ ಈ ಹಿಂದೆ ಕೊಡಗಿನಲ್ಲಿ ಕಾಣಿಸಿಕೊಂಡಿತ್ತು. ಕೇರಳದಿಂದ ಬಂದ ತಂಡವೊಂದು ಎರಡು ತಲೆ ಹಾವು ಮತ್ತು ಗೂಬೆಗೆ ಬೇಡಿಕೆಯಿಟ್ಟು ಜನರನ್ನು ಅಡ್ಡದಾರಿಗೆ ಎಳೆಯುವ ಯತ್ನವನ್ನು ಮಾಡಿದ್ದರು. ಈ ಪ್ರಕರಣದಲ್ಲಿ ಕೆಲವರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು.[ಕಾಡು ಪ್ರಾಣಿಗಳು ಸಾವನ್ನಪ್ಪಲು ಕಾರಣವೇನು?]
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications