ಹಾವೇರಿ: ಕಂಡಕ್ಟರ್ ಗೆ ರಜೆ ಬೇಕಿದ್ರೆ ಡಿಪೋ ಮ್ಯಾನೇಜರ್ ಗೆ ಲಂಚ ಕೊಡ್ಬೇಕಂತೆ
ಹಾವೇರಿ, ಜೂನ್ 28 : ಧಾರವಾಡ ಘಟಕದ ನಿರ್ವಾಹಕರೊಬ್ಬರು ರಜೆ ಕೇಳಿದ್ದಕ್ಕೆ ಬಸ್ ಡಿಪೋ ಮ್ಯಾನೇಜರೊಬ್ಬರು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದ. ಘಟನೆ ಇನ್ನು ಹಸಿ ಇರುವಾಗಲೇ ರಾಣೆಬೆನ್ನೂರು ಡಿಪೋದಲ್ಲಿ ಮತ್ತೊಂದು ಮೇಲಾಧಿಕಾರಿಗಳ ಕಿರುಕುಳ ನಡೆದಿರುವುದು ಬೆಳಕಿಗೆ ಬಂದಿದೆ.
ತನಗೆ ನ್ಯಾಯಯುತವಾಗಿ ಸಿಗಬೇಕಾದ ರಜೆ ಮಂಜೂರು ಮಾಡಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಣೆಬೆನ್ನೂರು ಡಿಪೋ ಮ್ಯಾನೇಜರ್ ಆರ್.ಎಸ್.ಸಂತೋಷ್ ಅವರು ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ನಿವಾರ್ಹಕ ವೆಂಕಣ್ಣ ಹೊಳಿಯಾಚಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮೇಲಾಧಿಕಾರಿಯ ಧೋರಣೆಯಿಂದ ಬೇಸತ್ತು ತನಗೆ ನ್ಯಾಯ ಕೊಡಿಸುವಂತೆ ಕೋರಿ ವೆಂಕಣ್ಣ ಎನ್ನುವರು ರಾಣೆಬೆನ್ನೂರಿನ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯದ ಮೊರೆ ಹೋಗಿದ್ದು, ಪ್ರಾಮಾಣಿಕವಾಗಿ ದುಡಿದರೂ ನಮ್ಮ ಹಕ್ಕಿನ ರಜೆಗಾಗಿ ಮೇಲಾಧಿಕಾರಿಗಳಿಗೆ ಲಂಚ ಕೊಡಬೇಕಾದ ಅನಿವಾರ್ಯತೆ ಸಂಸ್ಥೆಯಲ್ಲಿ ನಿರ್ಮಾಣವಾಗಿದೆ ಎಂದು ಅಸಮದಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ವೆಂಕಣ್ಣ ಮೇಲಾಧಿಕಾರಿಗಳ ವರ್ತನೆಯನ್ನು ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಹಾಗೂ ಡಿವೈಎಸ್ಪಿ ಅನಿಲಕುಮಾರ ಭೂಮರಡ್ಡಿ ಅವರ ಗಮನಕ್ಕೆ ತಂದಿದ್ದರು.
ಆಗ ಇಬ್ಬರೂ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದ ಕೋಳಿವಾಡ ಹಾಗೂ ಪೊಲೀಸ್ ಅಧಿಕಾರಿಯೊಬ್ಬರು ಘಟನೆಗೆ ತಾತ್ಕಾಲಿಕವಾಗಿ ತೇಪೆ ಹಚ್ಚಿದ್ದರು.
ಆದರೆ, ಡಿಪೋ ಮ್ಯಾನೇಜರ್ ಸಂತೋಷ್ ಅವರು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ದು, ರಜೆ ಪಡೆಯುವ ಸಂದರ್ಭದಲ್ಲಿ ಲಂಚದ ಹಣಕ್ಕಾಗಿ ಪದೇ ಪದೇ ಬೇಡಿಕೆ ಇಡುತ್ತಿದ್ದಾರೆ.
ಒಂದು ಬಾರಿ ಲಂಚ ಕೇಳುವುದಿಲ್ಲ. ಪ್ರತಿ ತಿಂಗಳು 2 ಸಾವಿರ ರೂಪಾಯಿ ಲಂಚ ಕೊಡಬೇಕು. ಅಂದರೆ. ಮಾತ್ರ ಸಾಕಷ್ಟು ರಜೆ ಮಂಜೂರು ಮಾಡಲಾಗುತ್ತದೆ ಎಂದು ಸಂತೋಷ್ ಅವರು ಹೇಳುತ್ತಿದ್ದಾರೆ. ಈ ಕಾರಣದಿಂದಲೇ ನಾನು ಕೋರ್ಟ್ ಮೆಟ್ಟಿಲೇರಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications