ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಇಬ್ಬರ ವಿರುದ್ಧ ಪ್ರಕರಣ ದಾಖಲು
ಹಾಸನ, ಡಿಸೆಂಬರ್ 19: ಹಾಸನ ಲೋಕಸಭಾ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಾಯಿ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ಕುಟುಂಬದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ತಮ್ಮನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ತನ್ನ ಜಮೀನು ಮಾರಾಟ ಮಾಡುವಂತೆ ತಾಯಿ-ಮಗನಿಬ್ಬರು ಒತ್ತಾಯಿಸಿದ್ದಾರೆ ಮತ್ತು ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿದ್ದಾರೆ ಎಂದು ಕಾರ್ತಿಕ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಶ್ರೇಣಿಯ ಅಧಿಕಾರಿಯೊಬ್ಬರು ತನಿಖೆ ನಡೆಸಿದ್ದು, ದೂರುದಾರರು ಮಾಡಿರುವ ಆರೋಪದ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ.

ಕಾರ್ತಿಕ್ ಹಲವು ವರ್ಷಗಳಿಂದ ಪ್ರಜ್ವಲ್ ರೇವಣ್ಣ ಅವರ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪ್ರಜ್ವಲ್ ಮತ್ತು ಭವಾನಿ ರೇವಣ್ಣ ಅವರಿಂದ ಚಿತ್ರಹಿಂಸೆ ಮತ್ತು ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಅವರು ಪೊಲೀಸರನ್ನು ಸಂಪರ್ಕಿಸಿದ್ದರು.
ಈ ವರ್ಷದ ಫೆಬ್ರವರಿಯಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿರುವ ತನ್ನ 13 ಎಕರೆ ಜಾಗವನ್ನು ಮಾರಾಟ ಮಾಡುವಂತೆ ಇಬ್ಬರು ಒತ್ತಾಯಿಸಿದರು ಎಂದು ದೂರುದಾರರು ಹೇಳಿದ್ದಾರೆ. ಕಾರ್ತಿಕ್ ತಮ್ಮನನ್ನು ಪ್ರಜ್ವಲ್ ಮತ್ತು ಭವಾನಿ ಐಬಿಯಲ್ಲಿ ವಶದಲ್ಲಿಟ್ಟುಕೊಂಡು ಜಮೀನು ದಾಖಲೆಗಳಿಗೆ ಸಹಿ ತೆಗೆದುಕೊಂಡರು.
20 ಚೆಕ್ ಲೀಫ್ಗಳ ಸಹಿ ತೆಗೆದುಕೊಂಡು ತಮ್ಮ ಹಣವನ್ನು ಹಿಂಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ವರ್ಷದ ಮಾರ್ಚ್ನಲ್ಲಿ ತನ್ನ ದೂರಿನೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಕಾರ್ತಿಕ್ ಆರೋಪಕ್ಕೆ ಪುರಾವೆಗಳಿಲ್ಲ: ಎಸ್ಪಿ
ಕಾರ್ತಿಕ್ ಈ ವರ್ಷದ ಏಪ್ರಿಲ್ನಲ್ಲಿ ದಕ್ಷಿಣ ವಲಯ ಐಜಿಪಿಗೆ ದೂರು ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸುವಂತೆ ಹಾಸನ ಎಸ್ಪಿಗೆ ಐಜಿಪಿ ಆದೇಶಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಚನ್ನಪಟ್ಟಣ ಡಿವೈಎಸ್ಪಿಗೆ ಎಸ್ಪಿ ಆದೇಶಿಸಿದ್ದಾರೆ.
ಪೊಲೀಸರು ಪ್ರಕರಣದಲ್ಲಿ 16 ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಕಾರ್ತಿಕ್ ಮಾಡಿದ ಹೇಳಿಕೆಗಳಿಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಪೊಲೀಸರು ತಮ್ಮ ವರದಿಯಲ್ಲಿ ಕಾರ್ತಿಕ್ಗೆ ಸಾಕ್ಷ್ಯವನ್ನು ಸಲ್ಲಿಸಲು ಅವಕಾಶ ನೀಡಿದ್ದರು ಮತ್ತು ಅದನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ಅಗತ್ಯವಿಲ್ಲ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications