ಕೈಯಲ್ಲಿ ರಾಷ್ಟ್ರಧ್ವಜ ಹಿಡಿದೇ ಸಿಎಂ ಶೂ ಬಿಚ್ಚಿದ ಕಾರ್ಯಕರ್ತ! ವಿಡಿಯೋ ವೈರಲ್
ಇಂದು ಗಾಂಧಿ ಜಯಂತಿ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಈ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕೈಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಿಡಿದುಕೊಂಡೇ ಸಿಎಂ ಸಿದ್ದರಾಮಯ್ಯ ಧರಸಿದ್ದ ಶೂಗಳನ್ನು ಬಿಚ್ಚಿರುವ ಘಟನೆ ನಡೆದಿದೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುನ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕಂಡು ಬರುವಂತೆ, ಕಾರ್ಯಕರ್ತನೊಬ್ಬ ಸಿಎಂ ಸಿದ್ದರಾಮಯ್ಯ ಧರಿಸಿದ್ದ ಶೂ ಬಿಚ್ಚಿದ್ದಾನೆ. ಈ ವೇಳೆ ಆತನ ಕೈಯಲ್ಲಿದ್ದ ತ್ರಿವರ್ಣ ಧ್ವಜವು ಶೂ ಹಾಗೂ ನೆಲಕ್ಕೆ ತಾಗಿದೆ.

ಈ ವಿಡಿಯೋವನ್ನು ಸುದ್ದಿಸಂಸ್ಥೆ ಎಎನ್ಐ ಕೂಡ ಹಂಚಿಕೊಂಡಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಸಿಎಂ ಸಮ್ಮುಖದಲ್ಲೇ ಈ ಘಟನೆ ನಡೆದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ವಿಡಿಯೋದಲ್ಲಿ ಕಾರ್ಯಕರ್ತನೊಬ್ಬ ಸಿಎಂ ಕಾಲಿನಲ್ಲಿದ್ದ ಶೂ ಬಿಚ್ಚಿದ್ದಾನೆ.
ಈ ವೇಳೆ ಭಾರತದ ಧ್ವಜ ಆತನ ಕೈಯಲ್ಲೇ ಇದೆ. ಸ್ಥಳದಲ್ಲೇ ಇದ್ದ ಮಾಧ್ಯಮದವರು ಅದನ್ನು ಸೆರೆಹಿಡಿಯಲು ಮುಂದಾದಾಗ ಕೂಡಲೇ ಆತನ ಕೈಯಲ್ಲಿದ್ದ ಧ್ವಜವನ್ನು ನಾಯಕರು ಕಸಿದುಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ನಾಯಕರು ಕೂಡ ಈ ವಿಡಿಯೋ ಹಂಚಿಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬೀಳುತ್ತಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ.
#WATCH | Bengaluru: A Congress worker, with the Tiranga in his hands, removed shoes from the feet of Karnataka CM Siddaramaiah earlier today as he arrived to pay tribute to Mahatma Gandhi on his birth anniversary. A man present at the spot, removed the flag from the worker's… pic.twitter.com/rjT1AJTXsp
— ANI (@ANI) October 2, 2024
ಗಾಂಧಿ ನಡಿಗೆಯಲ್ಲಿ ಸಮಾಜವಾದಿ ಹಿನ್ನೆಲೆಯ ಮುಖ್ಯ ಮಂತ್ರಿಗಳಿಗೆ 'ವಿಶೇಷ ಆತಿಥ್ಯ'. ರಾಷ್ಟ್ರ ಧ್ವಜವು ಮುಖ್ಯಮಂತ್ರಿಗಳ ಕಾಲಿಗೆ ಸ್ಪರ್ಶಿಸುತ್ತಿದ್ದು, ಇದು Flag Code of India ಹಾಗೂ National Honor Act ನ ಸ್ಪಷ್ಟ ಉಲ್ಲಂಘನೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. ತಮ್ಮ ಬಟ್ಟೆಯನ್ನು ತಾವೇ ಹೊಲೆದುಕೊಳ್ಳುತ್ತಿದ್ದ ಮಹಾತ್ಮಾ ಗಾಂಧಿ ಅವರ ಜಯಂತಿಯಂದು ಈ ರೀತಿಯಾದ ಗುಲಾಮಗಿರಿಯ ಪ್ರದರ್ಶನ. ಶಾಸ್ತ್ರ ಹೇಳೋಕೆ, ಬದನೆ ತಿನ್ನೋಕೆ ಎಂದು ಲೇವಡಿ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರು ಡಿಗ್ನಿಟಿ ಆಫ್ ಲೇಬರ್ ಪರಿಕಲ್ಪನೆಯನ್ನು ಬಲವಾಗಿ ನಂಬಿದ್ದರು ಮತ್ತು ಪ್ರತಿಪಾದಿಸಿದರು. ಅವರ 155ನೇ ಜನ್ಮದಿನದಂದು ಪಕ್ಷದ ಕಾರ್ಯಕರ್ತನಿಂದ ಸಿಎಂ ಸಿದ್ದರಾಮಯ್ಯ ಅವರ ಪಾದರಕ್ಷೆ ತೆಗೆಸಿದ್ದಾರೆ. ಕೆಟ್ಟ ಭಾಗವೆಂದರೆ ಪ್ಲಾಸ್ಟಿಕ್ ಧ್ವಜವು ಮುಖ್ಯಮಂತ್ರಿಯ ಪಾದಗಳನ್ನು ಮುಟ್ಟುತ್ತದೆ. ಇದು ಭಾರತದ ಧ್ವಜ ಸಂಹಿತೆ ಮತ್ತು ರಾಷ್ಟ್ರೀಯ ಗೌರವ ಕಾಯಿದೆಯ ಸ್ಪಷ್ಟ ಉಲ್ಲಂಘನೆ. ಇದೆಲ್ಲವೂ ಅಧಿಕೃತ ಕಾರ್ಯಕ್ರಮದ ಸಮಯದಲ್ಲೇ ನಡೆಯುತ್ತದೆ ಎಂದು ಕೆಂಡಕಾರಿದ್ದಾರೆ.
ಯುವಕರಲ್ಲಿ ಗಾಂಧೀಜಿಯವರ ತತ್ತ್ವಶಾಸ್ತ್ರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿಯಿಂದ ಗುಲಾಮಗಿರಿ ಮತ್ತು ಅಗೌರವದ ಸ್ಪಷ್ಟ ಪ್ರದರ್ಶನವಾಗಿದೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋಗೆ ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು











Click it and Unblock the Notifications