ಮಗಳ ಮದುವೆಗೆ ಕೂಡಿಟ್ಟಿದ್ದ 50 ಲಕ್ಷ ಪ್ರವಾಹ ಸಂತ್ರಸ್ತರಿಗೆ ಕೊಟ್ಟ ವೈದ್ಯೆ?
ಬೆಂಗಳೂರು, ಆಗಸ್ಟ್ 12: ಮಗಳ ಮದುವೆಗೆಂದು ಕೂಡಿಟ್ಟಿದ್ದ 50 ಲಕ್ಷ ರೂಪಾಯಿ ಹಣವನ್ನು ಪ್ರವಾಹ ಸಂತ್ರಸ್ತರಿಗೆ ನೀಡಿದ್ದಾರೆ ಕರ್ನಾಟಕ ಮೂಲಕ ವೈದ್ಯೆಯೊಬ್ಬರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.
ಸುಮನಾ ರಾವ್ ಎಂಬುವರು ತಮ್ಮ ಮಗಳ ಮದುವೆಗೆಂದು ಕೂಡಿಟ್ಟಿದ್ದ 50 ಲಕ್ಷ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಈ ಬಗ್ಗೆ ಫೇಸ್ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈ ಪೋಸ್ಟ್ ಅನ್ನು ಆ ನಂತರ ಅಳಿಸಿ ಹಾಕಿದ್ದಾರೆ.
ಕರ್ನಾಟಕ ಮೂಲದ ಸುಮನಾ ರಾವ್ ಅವರು ಮುಂಬೈನಲ್ಲಿ ನೆಲೆಸಿದ್ದು, ಅಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ನೊಂದು ತಮ್ಮಲ್ಲಿದ್ದ ಉಳಿತಾಯದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ವೈದ್ಯೆ ಸುಮನಾ ರಾವ್ ಅವರನ್ನು ಈ ಬಗ್ಗೆ ಮಾಹಿತಿ ಕೇಳಲು 'ಒನ್ ಇಂಡಿಯಾ ಕನ್ನಡ'ವು ಸಂಪರ್ಕಿಸಲು ಯತ್ನಿಸಿತು, ಆದರೆ ಅವರೊಂದಿಗೆ ಸಂಪರ್ಕ ಸಾಧ್ಯವಾಗಿಲ್ಲ.
ಪ್ರಸ್ತುತ ಸುಮನಾ ರಾವ್ ಅವರು ಹಾಕಿದ್ದ ಫೇಸ್ಬುಕ್ ಪೋಸ್ಟ್ನ ಸ್ಕ್ರೀನ್ ಶಾಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಮನಾ ರಾವ್ ಅವರ ಮಾನವೀಯತೆಯ ಬಗ್ಗೆ ಹೊಗಳಿಕೆಗಳು ಕೇಳಿ ಬರುತ್ತಿವೆ.

ಆದರೆ ಸುಮನಾ ರಾವ್ ಅವರು ದೇಣಿಗೆ ನೀಡಿದ್ದೇನೆ ಎಂಬ ಪೋಸ್ಟ್ ಹಾಕಿ ಮತ್ತೆ ಡಿಲೀಟ್ ಮಾಡಿರುವುದು ಕೆಲವರ ಅನುಮಾನಕ್ಕೆ ಕಾರಣವಾಗಿದ್ದು, ಸುಮನಾ ರಾವ್ ಅವರು ಹಣ ನೀಡಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಪ್ರಶ್ನೆಗಳೂ ಎದ್ದಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications