ರೈತರ ಬೆಳೆಗೆ ಮೊದಲೇ ಬೆಲೆ ನಿಗದಿ ಕಾನೂನು ಜಾರಿ ಆಗಬೇಕು: ಬೊಮ್ಮಾಯಿ
ಚಿತ್ರದುರ್ಗ, ಸೆಪ್ಟಂಬರ್ 24: ರೈತರ ಬೆಳೆಗೆ ಬೆಲೆಯು ಮೊದಲೇ ನಿಗದಿಯಾಗುವ ಕಾನೂನು ಜಾರಿಯಾಗಬೇಕು. ರೈತನನ್ನು ಗಟ್ಟಿ ಮಾಡಿದರೆ ಕೃಷಿ ಗಟ್ಟಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯ ಸಿರಿಗೆರೆಯಲ್ಲಿ ಭಾನುವಾರ ಜರುಗಿದ ಲಿಂಗಕೈ ಶಿವಕುಮಾರ ಸ್ವಾಮೀಜಿಯವರ 31ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಮುಂದಿನ ಚುನಾವಣೆ ಮೇಲೆ ಕಣ್ಣಿದ್ದರೆ, ಪ್ರಸ್ತುತ ನಮ್ಮ ಪೂಜ್ಯರಿಗೆ ಮುಂದಿನ ಜನಾಂಗದ ಮೇಲೆ ಕಣ್ಣಿರುತ್ತದೆ ಎಂದು ಹೇಳಿದರು.

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ರೈತರ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಯಶಸ್ವಿಯಾಗಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಲಿಂ.ಶ್ರೀಗಳ ಪುಣ್ಯಸ್ಮರಣೆ ಸಾಧಕರ ಪುಣ್ಯಸ್ಮರಣೆಯಾಗಿದೆ ಎಂದರು.
ನಾವು ಪ್ರಸ್ತಾಪಿಸಿದ ಬಜೆಟ್ನಲ್ಲಿ ರೈತರಿಗೆ 5ಲಕ್ಷರೂಗಳ ಶೂನ್ಯ ಬಡ್ಡಿದರದಲ್ಲಿ ಹಣ ನೀಡುವ ಯೋಜನೆ ಜಾರಿ ತಂದಿದ್ದೇವು. ಆ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವೂ ಮುಂದುವರೆಯಿಸಿಕೊಂಡು ಹೋಗುತ್ತಿದೆ. ಕಾವೇರಿ ನೀರಿನ ಅಂತಾರಾಜ್ಯ ನದಿ ವಿವಾದದ ಕಾನೂನುಗಳು ವಿವಾದಗಳನ್ನು ಹುಟ್ಟುಹಾಕುವ ಕಾನೂನಾಗಿದೆ. ಇಂತಹ ವ್ಯವಸ್ಥೆಗಳು ಸರ್ಕಾರದಲ್ಲಿವೆ. ಈ ನಿಯಮಗಳು ಬದಲಾಗಬೇಕು ಎಂದು ತಿಳಿಸಿದರು.
ತರಳಬಾಳು ಶ್ರೀಗಳ ಆಶೀರ್ವಚನ
ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು, ರೈತರು ಮತ್ತು ಉದ್ದಿಮೆದಾರ ಮಧ್ಯೆ ಹೊಸ ಕಾನೂನು ಜಾರಿಗೆ ತರಬೇಕಾಗಿದೆ. ಉದ್ದೇಶಕ್ಕೆ ವಶಪಡಿಸಿಕೊಂಡ ಜಮೀನು ಬಳಕೆಯಾಗುತ್ತಿರುವುದರ ಬಗ್ಗೆ ಪರಿಶೀಲನೆ ಮಾಡಬೇಕು.
ಯುವಕರಿಗೆ ನೀಡುವ ಯುವನಿಧಿ ಯೋಜನೆ ಮುಂದುವರಿಸುವ ಜೊತೆಗೆ ಯುವಕರನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಹಿರಿಯ ಶ್ರೀಗಳವರದು ಮಾತೃ ಹೃದಯ ಹಾಗೂ ಅದ್ಭುತ ಚೇತನ. ಈ ಶ್ರದ್ಧಾಂಜಲಿ ಸಮಾರಂಭ ರೈತರ ಸಮ್ಮೇಳನವಾಗಬೇಕು.

ಜಲಭಾಗ್ಯ 6ನೇ ಗ್ಯಾರಂಟಿ ಯೋಜನೆ ನೀಡಿ
ಸರ್ಕಾರ ಐದು ಗ್ಯಾರಂಟಿಗಳ ಜೊತೆ 6ನೇಯ ಗ್ಯಾರಂಟಿಯಾಗಿ ಜಲಭಾಗ್ಯ ನೀಡಿದರೆ ರೈತರು ಕಾಯಕದ ಜೊತೆಗೆ ಆರ್ಥಿಕವಾಗಿ ಸಬಲರಾಗುತ್ತಾರೆ. ರೈತರ ಭೂಮಿಯ ಮಾಲಿಕರು ರೈತರೇ ಆಗಬೇಕು. ರೈತರು ಮತ್ತು ಉದ್ಯಮಿಗಳ ನಡುವೆ ಒಪ್ಪಂದ ಆಗಬೇಕು. ಒಮ್ಮೆ ಇಡಿಗಂಟು ನೀಡುವುದರ ಬದಲಿಗೆ ನಿರಂತರ ಪರಿಹಾರ ಕೊಡುವಂತಾಗಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ಸುಧಾಕರ್, ಮಾಜಿ ಸಚಿವ ಹೆಚ್ ಆಂಜನೇಯ, ಶಾಸಕರಾದ ಡಿ.ಜಿ.ಶಾಂತನಗೌಡ, ಎಂ ಚಂದ್ರಪ್ಪ, ಬಿ.ವೈ ವಿಜಯೇಂದ್ರ ಹಾಗೂ ಚಿತ್ರದುರ್ಗದ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ಪೀರ್, ಯುವ ಬಿಜೆಪಿ ಮುಖಂಡರಾದ ಅನಿತ್ ಕುಮಾರ್ ಸೇರಿದಂತೆ ಮತ್ತಿರರು ಪಾಲ್ಗೊಂಡಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications