ಲೈಂಗಿಕ ಅಲ್ಪಸಂಖ್ಯಾತರಿಗೊಂದು ವಿಶೇಷ ಮ್ಯಾಗಜೀನ್
ಬೆಂಗಳೂರು, ನ. 6 : ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ಸಲಿಂಗಕಾಮಿಗಳು, ಉಭಯ ಲಿಂಗಿಗಳು ಮತ್ತು ಲಿಂಗ ಪರಿವರ್ತನೆ ಯಾದವರು ಎದುರಿಸುತ್ತಿರುವ ಸಮಸ್ಯೆ ಆಧಾರವಾಗಿಟ್ಟುಕೊಂಡು ತ್ರೈಮಾಸಿಕ ಮ್ಯಾಗಜೀನ್ ಹೊರತರಲಿದೆ. 'ಅನನ್ಯ' ಹೆಸರಿನಲ್ಲಿ ಹೊರಬರುತ್ತಿರುವ ಮ್ಯಾಗಜೀನ್ ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿದೆ.
ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಸುದ್ದಿಗಳು ಮತ್ತು ಅವರ ದೃಷ್ಟಿಕೋನವನ್ನು ಮ್ಯಾಗಜೀನ್ ಬಿಂಬಿಸಲಿದೆ. ಇದರಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಸ್ವತಃ ಬರೆದ ಕತೆ, ಕವನಗಳು ಪ್ರಕಟಣೆಯಾಗಲಿವೆ.[ಚಿತ್ರದುರ್ಗದಲ್ಲಿದೆ ಲೈಂಗಿಕ ಅಲ್ಪಸಂಖ್ಯಾತರ ಡಾಬಾ]

ಲೈಂಗಿಕ ಅಲ್ಪಸಂಖ್ಯಾತರ ಹೋರಾಟ, ಎದುರಿಸಿದ ಮತ್ತು ಎದುರಿಸುತ್ತಿರುವ ಸಮಸ್ಯೆಗಳು, ಕಾನೂನು ನೆರವು, ಸರ್ಕಾರಿ ಸೌಲಭ್ಯಗಳು ಮತ್ತು ತಿಳಿವಳಿಕೆ ಈ ರೀತಿ ಹತ್ತು ಹಲವು ವಿಚಾರಗಳು ಬಿಂಬಿತವಾಗಲಿವೆ.
ಸ್ಥಳಾವಕಾಶ ಕೊರತೆಯೇ?
ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ವಿಶೇಷ ಪತ್ರಿಕೆ ತೆಗೆಯಲು ಯೋಚಿಸಲು ಅನೇಕ ಕಾರಣಗಳಿವೆ. ಚಾಲ್ತಿಯಲ್ಲಿರುವ ಪತ್ರಿಕೆ ಮತ್ತು ಮ್ಯಾಗಜೀನ್ ಗಳಲ್ಲಿ ಸಮುದಾಯಕ್ಕೆ ಸಂಭಂಧಿಸಿದ ಅಭಿಪ್ರಾಯ ವ್ಯಕ್ತಪಡಿಸಲು ಯಾವ ಸೂಕ್ತ ವೇದಿಕೆ ಇರಲಿಲ್ಲ. ಇವರು ಎದುರಿಸುತ್ತಿರುವ ಸಮಸ್ಯೆಯನ್ನು ಸಮಾಜಕ್ಕೆ ತಿಳಿಸುವಂಥ ವೇದಿಕೆಯೊಂದರ ಅಗತ್ಯವಿತ್ತು. ಹಾಗಾಗಿ ಮ್ಯಾಗಜೀನ್ ರೂಪುಗೊಂಡಿತು ಎಂದು ಸಂಪಾದಕ ಉಮೇಶ್ ತಿಳಿಸಿದ್ದಾರೆ.
ಮುದ್ರಣ ಮತ್ತು ಆನ್ ಲೈನ್ ಮಾದ್ಯಮಗಳಲ್ಲಿ ಅನೇಕ ವರ್ಷಗಳ ಅನುಭವವಿರುವ ಉಮೇಶ ಸಂಪಾದಕರಾಗಿ ಕಾರ್ಯನಿರ್ವಹಿಸಲಿದ್ದು 'ಜೀವಾ' ಸಂಸ್ಥೆ ಮ್ಯಾಗಜಿನ್ ಹೊಣೆ ಹೊತ್ತುಕೊಂಡಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications