ಹಿರಿಯ ನಾಯಕ, ಸಚಿವರೊಬ್ಬರಿಗೆ ಸಂಸದೀಯ ಸ್ಥಾನದ ಉಸ್ತುವಾರಿ: ರಣದೀಪ್ ಸುರ್ಜೇವಾಲಾ
ಬೆಂಗಳೂರು, ಆಗಸ್ಟ್. 03: ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಸಂಘಟನೆಯ ಹಿರಿಯ ನಾಯಕ ಮತ್ತು ಸಚಿವರೊಬ್ಬರು ಕರ್ನಾಟಕದ ಸಂಸದೀಯ ಸ್ಥಾನದ ಉಸ್ತುವಾರಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
"ಪಕ್ಷ ಸಂಘಟನೆಯ ಹಿರಿಯ ನಾಯಕ ಹಾಗೂ ಸಚಿವರೊಬ್ಬರು ಸಂಸದೀಯ ಸ್ಥಾನದ ಉಸ್ತುವಾರಿ ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಆರು-ಏಳು ತಿಂಗಳ ಕಾಲ ಲೋಕಸಭೆ ಚುನಾವಣೆವರೆಗೆ ಪಕ್ಷದ ಸಂಘಟನೆಯ ಸಿದ್ಧತೆಯ ಹೊಣೆಯನ್ನು ಅವರೇ ವಹಿಸಿಕೊಳ್ಳಲಿದ್ದಾರೆ" ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಕರ್ನಾಟಕ ಪಕ್ಷದ ನಾಯಕರ ಕಾರ್ಯತಂತ್ರದ ಸಭೆಯನ್ನು ದೆಹಲಿಯಲ್ಲಿ ನಡೆಸಿದೆ. ಸಭೆಯ ಕುರಿತು ಮಾತನಾಡಿದ ರಣದೀಪ್ ಸುರ್ಜೇವಾಲಾ, 'ಕರ್ನಾಟಕ ಕಾಂಗ್ರೆಸ್ನ 36ಕ್ಕೂ ಹೆಚ್ಚು ಹಿರಿಯ ನಾಯಕರ ಸಭೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರೊಂದಿಗೆ ನಡೆದಿದೆ' ಎಂದು ತಿಳಿಸಿದ್ದಾರೆ.
"ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದಕ್ಕಾಗಿ ಇಬ್ಬರೂ ನಾಯಕರು ಎಲ್ಲರನ್ನು ಅಭಿನಂದಿಸಿದರು. ಇದೆ ಜೊತೆಗೆ ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ವಿವರವಾದ ಚರ್ಚೆಗಳನ್ನು ಸಹ ನಡೆಸಲಾಯಿತು. ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ" ಎಂದು ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದ ರಣದೀಪ್ ಸುರ್ಜೇವಾಲಾ, ಇದು ಈ ದೇಶದ ಪ್ರತಿಯೊಬ್ಬ ಬಡವರಿಗೆ ಮತ್ತು ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರಿಗೆ ಮಾಡಿದ ಅವಮಾನ ಎಂದಿದ್ದಾರೆ. "ಬಿಜೆಪಿಯ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನೀಡಿರುವ ಅವಹೇಳನಕಾರಿ ಮತ್ತು ಸಂಪೂರ್ಣ ಹೊಲಸು ಹೇಳಿಕೆ ಸಭ್ಯತೆಯ ಎಲ್ಲ ಮಿತಿಗಳನ್ನು ಮೀರಿದೆ" ಎಂದು ಕಾಂಗ್ರೆಸ್ ಸಂಸದ ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

"ಇದು ದೇಶದ ಸಾರ್ವಜನಿಕ ಜೀವನಕ್ಕೆ ಮೀಸಲಾಗಿರುವ ಪ್ರತಿಯೊಬ್ಬ ಹಿರಿಯ ಮತ್ತು ಅನುಭವಿ ವ್ಯಕ್ತಿಗಳಿಗೆ ಮಾತ್ರವಲ್ಲ, ಈ ದೇಶದ ಬಡವರಿಗೆ, ಈ ದೇಶದ ಪ್ರತಿಯೊಬ್ಬ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ, ಈ ದೇಶದ ಕೃಷಿ ಕಾರ್ಮಿಕರು, ರೈತರಿಗೆ ಮತ್ತು ರೈತರಿಗೆ ಮಾಡಿದ ಅವಮಾನವಾಗಿದೆ" ಎಂದು ಆರೋಪಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಆರಗ ಜ್ಞಾನೇಂದ್ರ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. "ನಾವು ಅದನ್ನು ಜನತಾ ನ್ಯಾಯಾಲಯಕ್ಕೆ ಕೊಂಡೊಯ್ಯುವುದು ಮಾತ್ರವಲ್ಲದೆ, ಜೆಪಿ ನಡ್ಡಾ, ನರೇಂದ್ರ ಮೋದಿ ಮತ್ತು ಆರಗ ಜ್ಞಾನೇಂದ್ರ ಅವರಂತಹ ಅವರ ಆಪ್ತರು ತಮ್ಮ ದುಷ್ಕೃತ್ಯಗಳಿಗೆ ಮತ್ತು ಈ ದೇಶದ ಬಡವರನ್ನು ಅವಮಾನಿಸಿದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ನಾವು ಎಲ್ಲಾ ಕಾನೂನು ಮತ್ತು ರಾಜಕೀಯ ಮಾರ್ಗಗಳನ್ನು ಬಳಸುತ್ತೇವೆ" ಎಂದು ರಣದೀಪ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications