ರಾಜ್ಯದಲ್ಲಿ ಬರೋಬ್ಬರಿ 1,316 ಖಾಸಗಿ ಶಾಲೆಗಳು ಅನಧಿಕೃತ: ಶಿಕ್ಷಣ ಇಲಾಖೆಯ ಸಮೀಕ್ಷೆ
ಕನ್ನಡ ಮಾಧ್ಯಮ ಬೋಧನೆಗೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮವನ್ನು ಕಲಿಸುವ ಒಟ್ಟು 294 ಶಾಲೆಗಳನ್ನು ಗುರುತಿಸಲಾಗಿದೆ.
ಬೆಂಗಳೂರು, ಫೆಬ್ರವರಿ. 16: ರಾಜ್ಯದಲ್ಲಿ ಅನಧಿಕೃತ ಖಾಸಗಿ ಶಾಲೆಗಳನ್ನು ಗುರುತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಟ್ಟು 1,316 ಖಾಸಗಿ ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಯಾಗಿದೆ.
ಶಿಕ್ಷಣ ಕಾಯ್ದೆ ನಿಯಮ ಉಲ್ಲಂಘನೆಗಳಲ್ಲಿ ನೋಂದಣಿ ಇಲ್ಲದೆ ಶಾಲೆಗಳನ್ನು ನಡೆಸುವುದು, ಅನಧಿಕೃತ ಪಠ್ಯಕ್ರಮವನ್ನು ಬೋಧಿಸುವುದು, ಅನುಮೋದನೆಯಿಲ್ಲದೆ ಹೆಚ್ಚುವರಿ ವಿಭಾಗಗಳನ್ನು ಸೇರಿಸಿರುವುದು ಸೇರಿದೆ.
ಬೆಂಗಳೂರಿನ ಖಾಸಗಿ ಶಾಲೆಯೊಂದು ಸಿಬಿಎಸ್ಇ ಬೋರ್ಡ್ಗೆ ಸಂಬಂಧಿಸಿವೆ ಎಂದು ಸುಳ್ಳು ಹೇಳಿ ಪೋಷಕರ ಬಳಿ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡಿ, ನಂತರ ಅದು ರಾಜ್ಯ ಮಂಡಳಿಯ ಪಠ್ಯಗಳನ್ನು ಬೋಧಿಸುತ್ತಿರುವುದು ಬೆಳಕಿಗೆ ಬಂದಿತ್ತು. ಇದು ಭಾರೀ ವಿವಾದಕ್ಕೂ ಕಾರಣವಾಗಿ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವಿವಾದದ ಹಿನ್ನೆಲೆಯಲ್ಲಿ ಬ್ಲಾಕ್ ಮಟ್ಟದ ಶಿಕ್ಷಣ ಅಧಿಕಾರಿಗಳು ರಾಜ್ಯಾದ್ಯಂತ ಸಮೀಕ್ಷೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ನೋಂದಣಿ ಇಲ್ಲದೆ ಒಟ್ಟು 63 ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಅಕ್ರಮವಾಗಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡಿರುವುದು ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ವರದಿಯಲ್ಲಿ ಬಹಿರಂಗವಾಗಿದೆ. ಒಟ್ಟು 74 ಶಾಲೆಗಳು ಅನುಮೋದನೆಯಿಲ್ಲದೆ ವಿದ್ಯಾರ್ಥಿಗಳನ್ನು ಪ್ರೌಢಶಾಲೆಗೆ ಸೇರಿಸಿಕೊಂಡಿವೆ. ಇನ್ನು ಒಟ್ಟು 95 ಶಾಲೆಗಳು ವಿದ್ಯಾರ್ಥಿಗಳಿಗೆ ಕಾನೂನುಬಾಹಿರವಾಗಿ ಸಿಬಿಎಸ್ಇ ಅಥವಾ ಐಸಿಎಸ್ಇ ಪಠ್ಯಕ್ರಮವನ್ನು ಕಲಿಸುತ್ತಿದ್ದು, ಈ ಶಾಲೆಗಳಿಗೆ ರಾಜ್ಯ ಮಂಡಳಿಯ ಪಠ್ಯಕ್ರಮವನ್ನು ಬೋಧಿಸಲು ಮಾತ್ರ ಅನುಮೋದನೆ ನೀಡಲಾಗಿದೆ.
ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮವನ್ನು ಕಲಿಸುವ ಮೂಲಕ ಬೋಧನಾ ಮಾಧ್ಯಮದ ನಿಯಮವನ್ನು ಉಲ್ಲಂಘಿಸಿರುವ ಒಟ್ಟು 294 ಶಾಲೆಗಳನ್ನು ಗುರುತಿಸಲಾಗಿದೆ. ಸುಮಾರು 620 ಶಾಲೆಗಳು ಅನುಮೋದನೆ ಇಲ್ಲದೆ ಹೆಚ್ಚು ವಿಭಾಗಗಳನ್ನು ಅಕ್ರಮವಾಗಿ ಸೇರಿಸಿಕೊಂಡಿವೆ.
ಅನೇಕ ಖಾಸಗಿ ಶಾಲೆಗಳು ಒಂದು ವಿಭಾಗಕ್ಕೆ ಅನುಮತಿ ಕೋರಿದ್ದು, ಬಳಿಕ ರಾಜ್ಯ ಸರ್ಕಾರದ ಅನುಮೋದನೆಯಿಲ್ಲದೆ ಎರಡು ಅಥವಾ ಹೆಚ್ಚಿನ ವಿಭಾಗಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ವರದಿ ತಿಳಿಸಿದೆ. ಒಂದೇ ಕಟ್ಟಡದಲ್ಲಿ ಹಲವು ಕೆಲಸ ಮಾಡುತ್ತಿರುವ ಒಟ್ಟು 21 ಶಾಲೆಗಳನ್ನು ಗುರುತಿಸಲಾಗಿದೆ. ಶಿಕ್ಷಣಾಧಿಕಾರಿಗಳ ಅನುಮತಿಯಿಲ್ಲದೆ ಸ್ಥಳಾಂತರಗೊಂಡ ಸುಮಾರು 141 ಖಾಸಗಿ ಶಾಲೆಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ.

485 ಅನಧಿಕೃತ ಶಾಲೆಗಳು ಬೆಂಗಳೂರು ಉತ್ತರ ಭಾಗದಲ್ಲಿ ಹೆಚ್ಚಿದ್ದು, ಬೆಂಗಳೂರು ದಕ್ಷಿಣದಲ್ಲಿ 386, ತುಮಕೂರಿನಲ್ಲಿ 109 ಮತ್ತು ಬೆಂಗಳೂರು ಗ್ರಾಮಾಂತರ 66 ಶಾಲೆಗಳಿವೆ ಎಂದು ವರದಿ ಬಹಿರಂಗಪಡಿಸಿದೆ.
ಹೆಚ್ಚುವರಿಯಾಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊಸ ಶಾಲೆಗಳಿಗೆ ನೋಂದಣಿ, ಮಾನ್ಯತೆ ನವೀಕರಣ ಮತ್ತು ಕೇಂದ್ರೀಯ ಪಠ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಮಂಜೂರು ಮಾಡಲು ವಿವಿಧ ಮ್ಯಾನೇಜ್ಮೆಂಟ್ಗಳಿಂದ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವಲ್ಲಿ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಈ ಸುಧಾರಣೆಗಳು ಸಂಪೂರ್ಣ ಆಡಳಿತಾತ್ಮಕ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಶಾಲೆಗಳಲ್ಲಿ ಪಾರದರ್ಶಕತೆಯನ್ನು ಉಳಿಸಿಕೊಳ್ಳಲು ದಾರಿ ಮಾಡಿಕೊಡುವ ಗುರಿಯನ್ನು ಹೊಂದಿವೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications