ತಮಿಳು 'ಮಣಿ' ಕನ್ನಡಿಗರ ಕಣ್ಮಣಿಯಾದ ಕಥೆ
ಸುಮಾರು ಮೂವತ್ತೆರಡು ವರ್ಷಗಳ ಹಿಂದೆ ಕನ್ನಡದಲ್ಲಿ "ಸಂಜೆವಾಣಿ" ಎಂಬ ನಾಮಾಂಕಿತದಲ್ಲಿ ಸಂಜೆ ದೈನಿಕವನ್ನು ಶುರು ಮಾಡಿ, ಕನ್ನಡ ಮಾಧ್ಯಮ ಕ್ಷೇತ್ರಕ್ಕಿಳಿದು ಹೊಸ ಆಯಾಮ ನೀಡಿದವರು.
ಮಣಿ ಅವರ ಭಾಷೆ ತಮಿಳು. ತಮಿಳು ಭಾಷೆ ಬರಹಗಾರ ಪತ್ರಕರ್ತರಾಗಿದ್ದರೂ ಕನ್ನಡ ಮಾಧ್ಯಮದಲ್ಲಿ ಅವರು ಮನೆಮಾತು, ಪ್ರಗತಿಪರ ಚಿಂತಕ ಹಾಗೂ ತಲೆಮಾರಿಗೆ ಹೊಸ ದೃಷ್ಟಿ ಒದಗಿಸಿದ ಪಿ.ಲಂಕೇಶ್ ಸಾಂಗತ್ಯದ ಮೂಲಕ ಕನ್ನಡ ಭಾಷಾ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು-ದೆಸೆ ಒದಗಿಸಿದ್ದು ಮಣಿಯವರ ಹೆಗ್ಗಳಿಕೆ. ಬಿ.ಎಸ್ ಮಣಿ ಅವರ ಸ್ಮರಣಾರ್ಥ ಒಂದು ಪರಿಚಯಾತ್ಮಕ ಲೇಖನ ಇಲ್ಲಿದೆ.
ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ನಾಗಲಾಪುರಂ ಗ್ರಾಮದಲ್ಲಿ 1936ರಲ್ಲಿ ಜನಿಸಿದ ಬಿ.ಎಸ್.ಮಣಿ ಇವರ ತಂದೆ ತಂಗವೇಲು ನಾಡಾರ್ ಹಾಗೂ ತಾಯಿ ಶೇಷಮ್ಮಳ್ ಕಿರಿಯ ವಯಸ್ಸಿನಲ್ಲೇ ಮಾತೃವಿಯೋಗವ ಅನುಭವಿಸಿದ್ದ ಮಣಿಯವರಿಗೆ ಓದಿನಲ್ಲಿ ಅಪಾರ ಆಸಕ್ತಿ ಇತ್ತು.
8ನೇ ತರಗತಿಯವರೆಗೆ ಅಲ್ಫೋನ್ಸ್ ಶಾಲೆಯಲ್ಲಿ ಕಲಿತ ಮಣಿಯವರು 10ನೇ ತರಗತಿಯನ್ನು ಚೆನ್ನೈನಲ್ಲಿ ಮುಗಿಸಿದ್ದರು.ಮುಂದೆ ಚೆನ್ನೈನ ಸರಕಾರಿ ಕಾಲೇಜಿನಲ್ಲಿ ಸಾಹಿತ್ಯ ವಿಷಯದಲ್ಲಿ ಎಂ.ಎ. ಮಾಡಿದ್ದಲ್ಲದೆ ರಾಜ್ಯಕ್ಕೇ ಪ್ರಥಮ ಸ್ಥಾನ ಬಂದು ಚಿನ್ನದ ಪದಕ ವಿಜೇತರಾದರು.

ಕನ್ನಡ ಪತ್ರಿಕೆ ಆರಂಭಿಸುವಂತೆ ಕಾಮರಾಜ್ ಸಲಹೆ: 'ದಿನತಂತಿ', 'ಮಾಲೈ ಮುನಸು'ಪತ್ರಿಕೆಗಳಲ್ಲಿ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ ಮಣಿ 1964ರಲ್ಲಿ 'ದಿನಸುಡರ್'ಎನ್ನುವ ಪತ್ರಿಕೆ ಪ್ರಾರಂಭಿಸಿದರು.
ಬೆಂಗಳೂರಿನ ವಿಕ್ಟೋರಿಯಾ ಬಡಾವಣೆಯಲ್ಲಿ ಆ ನೂತನ ತಮಿಳು ಪತ್ರಿಕೆ ಕಛೇರಿ ಉದ್ಘಾಟನೆಗಾಗಿ ಬಂದ ಕಾಮರಾಜ್ ನಾದಾರ್ ಕನ್ನಡದಲ್ಲಿ ಪತ್ರಿಕೆ ಪ್ರಾರಂಭಿಸಲು ಸೂಚಿಸಿದ್ದರು. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಮಣಿಯವರು 1982ರ ಡಿಸೆಂಬರ್ 10ರಂದು 'ಸಂಜೆವಾಣಿ' ಕನ್ನಡ ಸಂಜೆ ಪತ್ರಿಕೆಯನ್ನು ಪ್ರಾರಂಭಿಸಿದರು.
ಕನ್ನಡ ಪತ್ರಿಕೋದ್ಯಮದಲ್ಲಿ ಯಶಸ್ಸು ಕಂಡ ಸಂಜೆ ದಿನಪತ್ರಿಕೆಗಳು ಕೇವಲ ಬೆರಳೆಕೆಯಷ್ಟು ಮಾತ್ರ ಸಂಜೆವಾಣಿಗಿಂತಲೂ ಮುನ್ನ ಮತ್ತು ನಂತರದಲ್ಲಿ ಜನ್ಮತಾಳಿದ್ದ ಹಲವು ಸಂಜೆ ದೈನಿಕಗಳು ಮಾರುಕಟ್ಟೆಯಲ್ಲಿ ಗೆಲುವು ಸಾಧಿಸಲಾಗಲಿಲ್ಲ ಎಂಬುದು ಕಟು ಸತ್ಯ.
ಅಂತಹದರಲ್ಲಿಯೂ 33 ವರ್ಷಗಳ ಹಿಂದೆಯೇ, ಓದುಗರಿಗೆ ಅಂದಿನ ಸುದ್ದಿಯನ್ನು ಅಂದೇ ತಲುಪಿಸುವ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾದದ್ದು ಸಂಜೆವಾಣಿಯ ಸಾಹಸಕ್ಕೊಂದು ನಿದರ್ಶನ. ಇದಕ್ಕೆ ಪ್ರಮುಖ ಹಾಗೂ ಮೂಲ ಕಾರಣ ಸಂಜೆವಾಣಿಯ ಸಂಸ್ಥಾಪಕ ಬಿ. ಎಸ್. ಮಣಿ ಅವರ ದೂರದೃಷ್ಠಿ ಮತ್ತು ಶ್ರಮ ಎಂದರೆ ಅತಿಶಯೋಕ್ತಿಯಲ್ಲ.

ತಮಿಳು ಸಾಹಿತಿಯೂ ಆಗಿದ್ದ ಮಣಿ ಅವರು ಕಥೆ, ಕಾದಂಬರಿ, ಸಂಶೋಧನೆಗಳೂ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಹೀಗೆ ಮಣಿ ಅವರು ಸಾಹಿತಿಯಾಗಿ, ಪತ್ರಕರ್ತರಾಗಿ ಜನಮನ್ನಣೆ ಗಳಿಸಿದ್ದರುತಮ್ಮ ತೀಕ್ಷ್ಣ ಚಿಂತನೆಗಳು, ಸುದ್ದಿ ಯನ್ನು ಗುರುತಿಸುವ ರೀತಿಯಿಂದಲೂ ಎಲ್ಲರನ್ನೂ ಬೆರಗುಗೊಳಿಸಿದ್ದರು.
ಕನ್ನಡ ಹಾಗೂ ತಮಿಳು ಭಾಷಾ ಬಾಂಧವ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದ ಮಣಿ ತಮ್ಮ ಸಂಸ್ಥೆಯಿಂದ ಹೊರತರುತ್ತಿದ್ದ 'ಚೇತನ'ಎನ್ನುವ ಹೆಸರಿನ ಮಾಸಿಕದಲ್ಲಿ ಕನ್ನದದ ಖ್ಯಾತನಾಮರ ಕಾದಂಬೈಸಿ ರಿ, ಕಥೆಗಳನ್ನು ಪ್ರಕಟಿಸಿ ಸುಲಭ ಬೆಲೆಯಲ್ಲಿ ಜನರಿಗೆ ತಲುಪಿಸುವ ಮೂಲಕ ಜನರಲ್ಲಿ ಸಾಹಿತ್ಯಾಭಿರುಚಿ ಹುಟ್ತಲು ಕಾರಣರಾಗಿದ್ದರು. ಮಣಿಯವರು ತಮ್ಮ ಸರಳ, ಸಜ್ಜನಿಕೆ ಸ್ವಭಾವದಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ಹೀಗೆ ಸಾಹಿತಿಯಾಗಿ, ಪತ್ರಕರ್ತರಾಗಿ ಜನಮನ್ನಣೆ ಗಳಿಸಿದ್ದ ಮಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ನಾನಾ ಪುರಸ್ಕಾರಗಳು ಸಂದಿವೆ. ಮಣಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಧ್ಯಮ ಲೋಕ ಹಾಗೂ ಸಂಜೆ ವಾಣಿ ಬಳಗ ಸಂತಾಪ ವ್ಯಕ್ತಪಡಿಸಿದೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications