ಪಡಿತರ ಪಡೆಯಲು ಆಧಾರ್ ಕಡ್ಡಾಯವಲ್ಲ : ಯು.ಟಿ.ಖಾದರ್
ಬೆಂಗಳೂರು, ಅಕ್ಟೋಬರ್ 30 : 'ಪಡಿತರ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ. ಹೊಸ ರೇಷನ್ ಕಾರ್ಡ್ ಮಾಡಿಸಲು ಮಾತ್ರ ಆಧಾರ್ ಕಡ್ಡಾಯ' ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದರು.
ವಿಕಾಸಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, 'ಪಡಿತರ ವಿತರಣೆಗೆ ಆಧಾರ್ ಲಿಂಕ್ ಬೇಕಾಗಿಲ್ಲ. ಆಧಾರ್ ಕಾರ್ಡ್ ಇಲ್ಲವೆಂದ ಕಾರಣಕ್ಕೆ ಪಡಿತರ ನೀಡಬಾರದು ಎಂಬ ನಿಯಮವಿಲ್ಲ. ಡೇಟಾ ಪ್ರಕಾರ ಎಲ್ಲರಿಗೂ ಪಡಿತರ ನೀಡಬೇಕು' ಎಂದರು.

'ರಾಜ್ಯದಲ್ಲಿ 20,342 ರೇಷನ್ ಅಂಗಡಿಗಳಿವೆ. 1 ಕೋಟಿ 8 ಲಕ್ಷ ಕಾರ್ಡ್ ದಾರರಿಗೆ ಬಾರ್ ಕೋಡ್ ವಿತರಣೆಯಾಗಿದೆ. ಮುಂದಿನ 2-3 ತಿಂಗಳಿನಲ್ಲಿ ಎಲ್ಲರಿಗೂ ಬಾರ್ ಕೋಡ್ ವಿತರಿಸುತ್ತೇವೆ. ಬಾರ್ ಕೋಡ್ ಬೇಕಾದರೆ ದೂರವಾಣಿ ಸಂಖ್ಯೆ ಕಡ್ಡಾಯವಾಗಿ ಇರಬೇಕು' ಎಂದು ತಿಳಿಸಿದರು.
ಸಾಂವಿಧಾನಿಕ ಪೀಠ ರಚನೆ : ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸಾಂವಿಧಾನಿಕ ಪೀಠ ರಚನೆಗೆ ಸುಪ್ರೀಂಕೋರ್ಟ್ ಮುಂದಾಗಿದೆ. ಆಧಾರ್ ವಿರೋಧಿಸಿರುವ ಅರ್ಜಿಗಳ ವಿಚಾರಣೆಯು ನವೆಂಬರ್ ಕೊನೆಯ ವಾರದಲ್ಲಿ ಸಾಂವಿಧಾನಿಕ ಪೀಠದಲ್ಲಿ ಆರಂಭವಾಗಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications