KSRTC BMTC Strike ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲ
ಬೆಂಗಳೂರು, ಮಾರ್ಚ್ 28: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಆಮ್ ಆದ್ಮಿ ಪಾರ್ಟಿಯು ಸಂಪೂರ್ಣ ಬೆಂಬಲ ನೀಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್ ದಾಸರಿ, "ನ್ಯಾಯಕ್ಕೆ ಆಗ್ರಹಿಸಿ ಅಹಿಂಸಾತ್ಮಕವಾಗಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ 2021ರಲ್ಲಿ ಮುಷ್ಕರದಲ್ಲಿ ಭಾಗವಹಿಸಿದ ಕಾರಣಕ್ಕೆ ಸಾರಿಗೆ ನೌಕರರನ್ನು ಸರ್ಕಾರ ವಜಾ ಮಾಡಿರುವುದು ಖಂಡನೀಯ"ವೆಂದರು.
"ಸರ್ಕಾರದ ಅಮಾನವೀಯ ನಡೆಯಿಂದಾಗಿ ಅನೇಕ ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬರುವ ಆತಂಕದಲ್ಲಿವೆ. ಆ ಎಲ್ಲ ನೌಕರರನ್ನು ಶೀಘ್ರವೇ ಮರುನೇಮಕ ಮಾಡಿಕೊಳ್ಳಬೇಕು. ಇದರ ಜೊತೆಗೆ, ವೇತನ ಪರಿಷ್ಕರಣೆ ಸೇರಿದಂತೆ ಸರ್ಕಾರವು ಸಾರಿಗೆ ನೌಕರರಿಗೆ ನೀಡಿದ್ದ ಅನೇಕ ಭರವಸೆಗಳನ್ನು ಶೀಘ್ರವೇ ಈಡೇರಿಸಬೇಕು," ಎಂದು ಆಗ್ರಹಿಸಿದರು.

"ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಸಾರಿಗೆ ನೌಕರರು ನಡೆಸುತ್ತಿರುವ ಸಾರಿಗೆ ನೌಕರರ ಆಮರಣಾಂತ ಉಪವಾಸಕ್ಕೆ ಸ್ಥಳೀಯ ಆಮ್ ಆದ್ಮಿ ಪಾರ್ಟಿ ನಾಯಕರು ಹಾಗೂ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾರಿಗೆ ನೌಕರರು ನಡೆಸಲಿರುವ ಬೃಹತ್ ಪ್ರತಿಭಟನೆಗೆ ಕೂಡ ಆಮ್ ಆದ್ಮಿ ಪಾರ್ಟಿಯ ಸಂಪೂರ್ಣ ಬೆಂಬಲವಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರವು ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು," ಎಂದು ಮೋಹನ್ ದಾಸರಿ ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಯುವಘಟಕದ ಅಧ್ಯಕ್ಷ ಮುಕುಂದ ಗೌಡ ಮಾತನಾಡಿ, "ಕಳೆದ ವರ್ಷ ಸಾರಿಗೆ ನೌಕರರು ಮುಷ್ಕರ ನಡೆಸಿದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಸರ್ಕಾರ ಮಾತು ತಪ್ಪಿದೆ. ಸಾರಿಗೆ ಸಚಿವ ಬಿ. ಶ್ರೀರಾಮುಲುರವರ ತವರು ಜಿಲ್ಲೆ ಬಳ್ಳಾರಿಯಲ್ಲೇ ಸಾರಿಗೆ ನೌಕರರು ಆಮರಣಾಂತ ಉಪವಾಸ ನಡೆಸುತ್ತಿದ್ದರೂ ಸಚಿವರು ಅತ್ತ ಗಮನ ಹರಿಸದಿರುವುದು ನಾಚಿಕಗೇಡಿನ ಸಂಗತಿ. ತಮ್ಮ ಹಕ್ಕುಗಳನ್ನು ಕೇಳಲು ನೌಕರರು ಉಪವಾಸ ಮಾಡುವುದು ಸರ್ಕಾರಕ್ಕೆ ಶೋಭೆಯಲ್ಲ. ಸಚಿವರ ಭಂಡತನದಿಂದಾಗಿ ಸಾರಿಗೆ ನೌಕರರು ತೊಂದರೆ ಅನುಭವಿಸುವಂತಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications