KSRTC BMTC Strike ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲ
ಬೆಂಗಳೂರು, ಮಾರ್ಚ್ 28: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಆಮ್ ಆದ್ಮಿ ಪಾರ್ಟಿಯು ಸಂಪೂರ್ಣ ಬೆಂಬಲ ನೀಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್ ದಾಸರಿ, "ನ್ಯಾಯಕ್ಕೆ ಆಗ್ರಹಿಸಿ ಅಹಿಂಸಾತ್ಮಕವಾಗಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ 2021ರಲ್ಲಿ ಮುಷ್ಕರದಲ್ಲಿ ಭಾಗವಹಿಸಿದ ಕಾರಣಕ್ಕೆ ಸಾರಿಗೆ ನೌಕರರನ್ನು ಸರ್ಕಾರ ವಜಾ ಮಾಡಿರುವುದು ಖಂಡನೀಯ"ವೆಂದರು.
"ಸರ್ಕಾರದ ಅಮಾನವೀಯ ನಡೆಯಿಂದಾಗಿ ಅನೇಕ ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬರುವ ಆತಂಕದಲ್ಲಿವೆ. ಆ ಎಲ್ಲ ನೌಕರರನ್ನು ಶೀಘ್ರವೇ ಮರುನೇಮಕ ಮಾಡಿಕೊಳ್ಳಬೇಕು. ಇದರ ಜೊತೆಗೆ, ವೇತನ ಪರಿಷ್ಕರಣೆ ಸೇರಿದಂತೆ ಸರ್ಕಾರವು ಸಾರಿಗೆ ನೌಕರರಿಗೆ ನೀಡಿದ್ದ ಅನೇಕ ಭರವಸೆಗಳನ್ನು ಶೀಘ್ರವೇ ಈಡೇರಿಸಬೇಕು," ಎಂದು ಆಗ್ರಹಿಸಿದರು.

"ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಸಾರಿಗೆ ನೌಕರರು ನಡೆಸುತ್ತಿರುವ ಸಾರಿಗೆ ನೌಕರರ ಆಮರಣಾಂತ ಉಪವಾಸಕ್ಕೆ ಸ್ಥಳೀಯ ಆಮ್ ಆದ್ಮಿ ಪಾರ್ಟಿ ನಾಯಕರು ಹಾಗೂ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾರಿಗೆ ನೌಕರರು ನಡೆಸಲಿರುವ ಬೃಹತ್ ಪ್ರತಿಭಟನೆಗೆ ಕೂಡ ಆಮ್ ಆದ್ಮಿ ಪಾರ್ಟಿಯ ಸಂಪೂರ್ಣ ಬೆಂಬಲವಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರವು ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು," ಎಂದು ಮೋಹನ್ ದಾಸರಿ ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಯುವಘಟಕದ ಅಧ್ಯಕ್ಷ ಮುಕುಂದ ಗೌಡ ಮಾತನಾಡಿ, "ಕಳೆದ ವರ್ಷ ಸಾರಿಗೆ ನೌಕರರು ಮುಷ್ಕರ ನಡೆಸಿದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಸರ್ಕಾರ ಮಾತು ತಪ್ಪಿದೆ. ಸಾರಿಗೆ ಸಚಿವ ಬಿ. ಶ್ರೀರಾಮುಲುರವರ ತವರು ಜಿಲ್ಲೆ ಬಳ್ಳಾರಿಯಲ್ಲೇ ಸಾರಿಗೆ ನೌಕರರು ಆಮರಣಾಂತ ಉಪವಾಸ ನಡೆಸುತ್ತಿದ್ದರೂ ಸಚಿವರು ಅತ್ತ ಗಮನ ಹರಿಸದಿರುವುದು ನಾಚಿಕಗೇಡಿನ ಸಂಗತಿ. ತಮ್ಮ ಹಕ್ಕುಗಳನ್ನು ಕೇಳಲು ನೌಕರರು ಉಪವಾಸ ಮಾಡುವುದು ಸರ್ಕಾರಕ್ಕೆ ಶೋಭೆಯಲ್ಲ. ಸಚಿವರ ಭಂಡತನದಿಂದಾಗಿ ಸಾರಿಗೆ ನೌಕರರು ತೊಂದರೆ ಅನುಭವಿಸುವಂತಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications