ಭೂ ಒತ್ತುವರಿ ತೆರವಿಗೆ ಕ್ರಮ, ಸರ್ಕಾರಕ್ಕೆ ಆಪ್ ಪತ್ರ
ಬೆಂಗಳೂರು, ಅ.16 : ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಕರ್ನಾಟಕ ಸ್ವಾಗತಿಸಿದೆ. ಒತ್ತುವರಿಯಾದ ಸರ್ಕಾರಿ ಭೂಮಿಯಲ್ಲಿ ಕೆಲವು ಕಡೆ ಬಡವರು ವಾಸಿಸುತ್ತಿದ್ದು, ಆ ಸ್ಥಳವನ್ನು ತೆರವುಗೊಳಿಸಿದರೆ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಪಕ್ಷ ಮನವಿ ಮಾಡಿದೆ.
ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭೂ ಕಬಳಿಕೆ ವಿರೋಧಿ ಸಮಿತಿ ಸದಸ್ಯರು ನಡೆಸುತ್ತಿದ್ದ 38 ದಿನಗಳ ಹೋರಾಟ ಬುಧವಾರ ಸಂಜೆ ಅಂತ್ಯಗೊಂಡಿದೆ. ಹೋರಾಟಕ್ಕೆ ಬೆಂಬಲ ನೀಡಿದ್ದ ಆಮ್ ಆದ್ಮಿ ಪಕ್ಷ ಸರ್ಕಾರಕ್ಕೆ ಪತ್ರ ಬರೆದಿದ್ದು, ಭೂ ಒತ್ತುವರಿಗೆ ತೆಗೆದುಕೊಂಡ ಕ್ರಮವನ್ನು ಶ್ಲಾಘಿಸಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೇತೃತ್ವದಲ್ಲಿ ಹೋರಾಟ ನಡೆಸಿದ ನಂತರ ಬೆಂಗಳೂರು ನಗರದಲ್ಲಿ ಭೂ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಹೆಚ್ಚುವರಿಯಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಿಸಲು ಆದೇಶ ಹೊರಡಿಸಿದ ಕ್ರಮವನ್ನು ಪಕ್ಷ ಸ್ವಾಗತಿಸಿದೆ. [ಭೂಗಳ್ಳರ ವಿರುದ್ಧದ ಹೋರಾಟ ಅಂತ್ಯ]
ಭೂ ಕಬಳಿಕೆ ಮಾಡಿಕೊಂಡವರು ಪ್ರಭಾವಿಗಳು ಶ್ರೀಮಂತರು ಆಗಿದ್ದು, ಅವರು ಸರ್ಕಾರದ ಮೇಲೆ ಪ್ರಭಾವ ಬೀರಿ, ನಿರ್ಧಾರವನ್ನು ಅನುಷ್ಠಾನ ಮಾಡದಂತೆ ಒತ್ತಡ ಹೇರಬಹುದು. ಸರ್ಕಾರ ಇದಕ್ಕೆ ತಲೆಬಾಗಬಾರದು ಎಂದು ಪಕ್ಷ ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ. [ಭೂಗಳ್ಳರ ವಿರುದ್ಧ ಆಪ್ ಆಮರಣಾಂತ ಉಪವಾಸ]
ಭೂ ಕಬಳಿಕೆ ತೆರವು ಕುರಿತು ಸರ್ಕಾರ ಸಮಿತಿ ರಚನೆ ಮಾಡಿದರೆ, ಆಮ್ ಆದ್ಮಿ ಪಕ್ಷವೂ ಸಮಿತಿಯ ಜೊತೆ ಕೆಲಸ ಮಾಡಲು ಸದಾ ಸಿದ್ಧವಿದೆ ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ವಿಚಾರದಲ್ಲಿ ಎಚ್.ಎಸ್.ದೊರೆಸ್ವಾಮಿ ಅವರು ಸಮಿತಿ ರಚನೆ ಮಾಡಿದರೂ ಅದರಲ್ಲಿ ಪಾಲ್ಗೊಳ್ಳುವುದಾಗಿ ಆಪ್ ಹೇಳಿದೆ. [ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸಿಎಂ ಆದೇಶ]
ಸರ್ಕಾರಿ ಭೂಮಿ ಒತ್ತುವರಿಯಾದ ಕೆಲವು ಪ್ರದೇಶದಲ್ಲಿ ಬಡವರು ಮತ್ತು ಆರ್ಥಿಕವಾಗಿ ಹಿಂದುಳಿದ ಜನರು ವಾಸವಾಗಿದ್ದು, ಅವರನ್ನು ತೆರವುಗೊಳಿಸಿ ಭೂಮಿಯನ್ನು ವಶಪಡಿಸಿಕೊಳ್ಳುವ ಸರ್ಕಾರ, ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಆಪ್ ಮನವಿ ಮಾಡಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications