ಸಚಿವರ ಕಾಲಡಿಯಲ್ಲಿ ರಾಶಿ ರಾಶಿ ದುಡ್ಡು; ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ಎಎಪಿ ಆಗ್ರಹ
ಬೆಂಗಳೂರು, ಅಕ್ಟೋಬರ್ 18: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಶಿವಾನಂದ ಪಾಟೀಲ್ ಕಾಲಡಿಯಲ್ಲಿ ರಾಶಿ ರಾಶಿ ನೋಟುಗಳು ಇರುವ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಚಿವರ ವರ್ತನೆಗೆ ಕರ್ನಾಟಕ ಎಎಪಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಬುಧವಾರ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಇಂದಿಲ್ಲಿ ಮಾತನಾಡಿ, ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ . ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಇಂದು ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿರುವ ಈ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ಶಿವಾನಂದ ಪಾಟೀಲರ ರಾಜೀನಾಮೆಯನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ನೂರಾರು ಕೋಟಿ ಐಟಿ ದಾಳಿಗಳಾಗಿ ಅಕ್ರಮ ಕೋಟ್ಯಾಂತರ ರೂಪಾಯಿಗಳು ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಪರಮ ಭ್ರಷ್ಟಾಚಾರದ ರೂಪದಲ್ಲಿ ಹಣದ ಅರಿವು ಬರುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯನೀಯ. ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಇದು ಜನ ವಿರೋಧಿ ಸರ್ಕಾರವೆಂಬ ಅಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕೆಂದು ಜಗದೀಶ್ ಒತ್ತಾಯಿಸಿದರು.
ಇನ್ನೂ ಈ ಕುರಿತು ರಾಜ್ಯ ಬಿಜೆಪಿ ಕಿಡಿಕಾರಿದ್ದು, ಕಲೆಕ್ಷನ್ ದಂಧೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸಚಿವರು ನಿತ್ಯವೂ ಮಿಂದೇಳುತ್ತಿದ್ದಾರೆ. ನಾಡಿನ ಜನರಿಂದ ಲೂಟಿ ಮಾಡಿದ ಹಣದಲ್ಲಿ ಮಂತ್ರಿಗಳು ಹೇಗೆ ಮಜಾ ಉಡಾಯಿಸುತ್ತಿದ್ದಾರೆ ಎಂಬುದನ್ನು ಸಕ್ಕರೆ ಸಚಿವ ಶಿವಾನಂದ ಪಾಟೀಲರು ನೈಜ ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications