ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ; ತಕ್ಷಣವೇ ರಾಜ್ಯದಲ್ಲಿನ ಹುಕ್ಕಾ ಬಾರ್ಗಳನ್ನು ಮುಚ್ಚಿಸಿ: ಎಎಪಿ ಆಗ್ರಹ
ಬೆಂಗಳೂರು, ಅಕ್ಟೋಬರ್ 19: ನಗರದಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದು, ತಕ್ಷಣವೇ ಹುಕ್ಕಾ ಬಾರ್ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ವಕೀಲರಾದ ಲೋಹಿತ್ ಒತ್ತಾಯಿಸಿದರು.
ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇರುವ ಹುಕ್ಕಾಬಾರ್ಗಳನ್ನು ನಿಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ ಒಂದು ತಿಂಗಳ ನಂತರ, ನಗರದ ಹುಕ್ಕಾಬಾರ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ, ಸಚಿವರು ಬರಿ ಹೇಳಿಕೆ ನೀಡುತ್ತಿದ್ದಾರೆ, ಆದರೆ ಇವು ಆದೇಶಗಳಾಗಿ ಬದಲಾಗುತ್ತಿಲ್ಲ ಎಂದರು.

ಗಾಂಜಾ ವಿಚಾರದಲ್ಲಿ ರಾಜ್ಯದಲ್ಲಿ ಪ್ರತಿ ದಿನ 100 ರಿಂದ 150 ಪ್ರಕರಣ ದಾಖಲಾಗುತ್ತಿವೆ. ಈ ಗಾಂಜಾ ಸೇವನೆಗೆ ಹುಕ್ಕಾ ಬಾರ್ ಸುರಕ್ಷಿತ ತಾಣಗಳಾಗಿವೆ. ಗಾಂಜಾ ಮಿಶ್ರಣ ಮಾಡಿ ಹುಕ್ಕಾ ಸೇವನೆ ಮಾಡಲಾಗುತ್ತಿದೆ. ಮಧ್ಯರಾತ್ರಿ 2-3 ಗಂಟೆವರೆಗೂ ಇವು ತೆರೆದಿರುತ್ತವೆ, ಇದಕ್ಕೆ ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಇಂದು ರಸ್ತೆಬದಿಗಳಲ್ಲಿ ಹುಕ್ಕಾ ಸೇದುವ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ಇದೆ. ಆದರೆ, ಇದು ಕಾನೂನಾಗಿ ಬದಲಾಗಬೇಕು ಎಂದು ಆಗ್ರಹಿಸಿದರು.
ಶೀಘ್ರದಲ್ಲೇ ಹುಕ್ಕಾ ಬಾರ್ಗಳನ್ನು ಮುಚ್ಚದಿದ್ದರೆ ಆಮ್ ಆದ್ಮಿ ಪಕ್ಷದಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು. ನಾವೇ ಹುಕ್ಕಾ ಬಾರ್ಗಳನ್ನು ಮುಚ್ಚಿಸಬೇಕಾಗುತ್ತದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳು ಹಾಳಾಗುತ್ತಿದ್ದಾರೆ
ಎಎಪಿ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಮಾತನಾಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯುವ ಸಬಲೀಕರಣ ಸಚಿವ ನಾಗೇಂದ್ರ ಸಭೆ ನಡೆಸಿ, ಹುಕ್ಕಾಬಾರ್ ಅನಧಿಕೃತ ಅದನ್ನು ನಿಲ್ಲಿಸುತ್ತೇವೆ, ತಂಬಾಕು ಮಾರಾಟ ನಿಯಂತ್ರಣ ಮಾಡುವುದಾಗಿ ಹೇಳಿದ್ದರೂ ಇನ್ನೂ ಆದೇಶ ಹೊರಡಿಸಿಲ್ಲ. ಬೆಂಗಳೂರಿನ ಅಶೋಕನಗರ ವ್ಯಾಪ್ತಿಯ ಎಂಜಿ ರಸ್ತೆ, ರೆಸಿಡೆನ್ಸಿ ರಸ್ತೆಯಲ್ಲಿ 24 ಹುಕ್ಕಾ ಬಾರ್ಗಳಿವೆ. ಪ್ರತಿಯೊಂದು ಹುಕ್ಕಾ ಬಾರ್ನ ಬಾಡಿಗೆ ಒಂದರಿಂದ ಒಂದೂವರೆ ಲಕ್ಷ ರೂ. ಇದ್ದರೆ, 75 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಹಫ್ತಾ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಬಹುತೇಕ ಹುಕ್ಕಾ ಬಾರ್ಗಳು ಪ್ರತಿಷ್ಠಿತ ವ್ಯಕ್ತಿಗಳು, ಶಾಸಕರು ಅವರ ಬೇನಾಮಿಗಳು ನಡೆಸುತ್ತಿರುವುದರಿಂದ ಪೊಲೀಸರು ಕೂಡ ಇವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ. ಎಂಜಿ ರಸ್ತೆಯಲ್ಲಿರುವ ಪ್ರತಿಷ್ಠಿತ ನಾಲ್ಕು ಹುಕ್ಕಾ ಬಾರ್ಗಳು ಆ ಏರಿಯಾದ ಶಾಸಕರಿಗೆ ಸೇರಿವೆ. ಅಲ್ಲಿಗೆ ನಗರದ ಪ್ರತಿಷ್ಠಿತ ವ್ಯಕ್ತಿಗಳ ಮಕ್ಕಳು ಕೂಡ ಬಂದು ಹೋಗುತ್ತಾರೆ ಎಂದು ಹೇಳಿದರು.
ಆ ಭಾಗದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ, ಕಾಲೇಜುಗಳಿವೆ ಈ ಹುಕ್ಕಾ ಬಾರ್ಗಳು ಯುವ ಜನರನ್ನು ಹಾಳು ಮಾಡುತ್ತಿವೆ. ಮೊದಲು ಸ್ನೂಕರ್ ಗೇಮ್ಗಳಿದ್ದ ಜಾಗಗಳನ್ನು ಹುಕ್ಕಾ ಬಾರ್ಗಳನ್ನಾಗಿ ಬದಲಾಯಿಸಲಾಗಿದೆ. ಹಳೆ ಸರ್ಕಾರ ಪಡೆಯುತ್ತಿದ್ದ ಕಮಿಷನ್ ಅನ್ನು ನಿಮ್ಮ ಸರ್ಕಾರಕ್ಕೆ ಶಿಫ್ಟ್ ಮಾಡಿಕೊಳ್ಳಲು ಹುಕ್ಕಾಬಾರ್ ನಿಲ್ಲಿಸುವ ಹೇಳಿಕೆ ನೀಡಿದ್ದಾ ಅಥವಾ ನಿಮಗೆ ನಿಜವಾಗಿಯೂ ಯುವ ಜನರ ಆರೋಗ್ಯದ ಮೇಲೆ ಕಾಳಜಿ ಇದೆಯಾ? ಎಂದು ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ಅವರನ್ನು ಪ್ರಶ್ನಿಸಿದರು. ಇನ್ನೊಂದು ತಿಂಗಳಿನಲ್ಲಿ ಹುಕ್ಕಾ ಬಾರ್ಗಳನ್ನು ನಿಲ್ಲಿಸದಿದ್ದರೆ, ಅಲ್ಲಿ ನಡೆಯುವ ಚಟುವಟಿಕೆಗಳನ್ನು ವಿಡಿಯೋ ಮಾಡಿ ಬ್ರಾಂಡ್ ಬೆಂಗಳೂರಿಗೆ ಟ್ಯಾಗ್ ಮಾಡಿ ಜನರ ಮುಂದೆ ತೋರಿಸುತ್ತೇವೆ ಎಂದು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications