ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಜನವರಿ 05: ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಒಂದು ವಾರದಿಂದ ರಾಜ್ಯದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ತುಮಕೂರು ಸಿದ್ಧಗಂಗಾ ಮಠದಿಂದ ಬೃಹತ್ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಆಗಮಿಸಲಾಗಿದೆ. ಎಎಪಿ ನಾಯಕರು, ಕಾರ್ಯಕರ್ತರು ಇದೀಗ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮತ್ತು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದೆ.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11 ಸಾವಿರಕ್ಕಿಂತ ಹೆಚ್ಚಿನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಸಾವಿರಾರು ಉಪನ್ಯಾಸಕರ ವಯೋಮಿತಿ ಮೀರುತ್ತಿದೆ. ಕೆಲಸ ಕಾಯಂ ಆಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ.
ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಹಾಳು
ಅತಿಥಿ ಉಪನ್ಯಾಸಕರ ವೇತನ ಕಡಿಮೆ ಇದ್ದು, ಅದೂ ಕೂಡ ಸಮಯಕ್ಕೆ ಸರಿಯಾಗಿ ಪಾವತಿಯಾಗುತ್ತಿಲ್ಲ. ಅತಿಥಿ ಉಪನ್ಯಾಸಕ ಎನ್ನುವ ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಕೂಡ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂ ಗೊಳಿಸುವುದಾಗಿ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಭರವಸೆ ನೀಡಿತ್ತು. ಈಗ ಕೊಟ್ಟ ಮಾತಿನಂತೆ ದೆಹಲಿ ಮತ್ತು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ಮಾದರಿಯಲ್ಲಿ ವಿಶೇಷ ನಿಯಮಾವಳಿ ರೂಪಿಸಿ ಸೇವೆ ಕಾಯಂ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.

ನಿರಂತರ ಪ್ರತಿಭಟನೆ ನಡೆಸಿರುವ ಎಎಪಿಯು, 12 ತಿಂಗಳ ವೇತನ, ಸೇವಾಭದ್ರತೆ, ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ, ಖಾಸಗಿ ನೌಕರರ ರೀತಿ ಗ್ಯಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದೆ.
ಸೇವಾ ಭದ್ರತೆ ಒದಗಿಸುವಂತೆ ಎಎಪಿ ಆಗ್ರಹ
ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿದ ಉದಾಹರಣೆ ಇಲ್ಲ ಎಂದಿರುವ ಉನ್ನತ ಶಿಕ್ಷಣ ಸಚಿವ ಡಾ. ಎ.ಸಿ. ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಎಎಪಿ ನಾಯಕ ಪೃಥ್ವಿ ರೆಡ್ಡಿ ಅವರು ದೆಹಲಿ, ಪಂಜಾಬ್ ಸರ್ಕಾರಗಳು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ದಾಖಲೆಗಳಿವೆ. ಇದನ್ನು ಮುಂದಿಟ್ಟುಕೊಂಡು ಅವರಿಗೆ ಸೇವಾ ಭದ್ರತೆ ಒದಗಿಸುವಂತೆ ಸವಾಲು ಒಡ್ಡಿದರು.
2023ರ ಜುಲೈನಲ್ಲಿ ಪಂಜಾಬ್ನಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಲಾಗಿದೆ. ಮಾತ್ರವಲ್ಲದೆ 9,500 ರೂ. ಇದ್ದ ಸಂಬಳವನ್ನು 20,500 ರೂ.ಗೆ ಹೆಚ್ಚಿಸಲಾಗಿದೆ. ಆದರೆ, ಕರ್ನಾಟಕದಲ್ಲಿ 10,500 ರೂ. ಇದ್ದ ಸಂಬಳವನ್ನು 12,000 ರೂ.ಗೆ ಹೆಚ್ಚಿಸಿ ಕೈತೊಳೆದುಕೊಂಡಿದ್ದಾರೆ ಎಂದು ತಿಳಿಸಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications