ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರಕ್ಕೆ ಧಿಕ್ಕಾರ!
ಬೆಂಗಳೂರು, ಜೂನ್ 09: ಒಂದೆಡೆ ದೆಹಲಿಯಲ್ಲಿ ಜನಸಾಮಾನ್ಯರ ಸರ್ಕಾರ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಪಣತೊಟ್ಟಿ ನಿಂತಿದೆ, ಇನ್ನೊಂದೆಡೆ, ಶಿಕ್ಷಣ ಇಲಾಖೆಯನ್ನೇ ಹಣಕ್ಕಾಗಿ ಮಾರಿಕೊಂಡಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ 2958 ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಲ್ಲಿ ಮುಚ್ಚುವ ಹುನ್ನಾರ ನಡೆಸಿದೆ ಎಂದು ಆಮ್ ಆದ್ಮಿ ಪಾರ್ಟಿ-ಕರ್ನಾಟಕ ಆರೋಪಿಸಿದೆ
ಸಾರ್ವಜನಿಕ ಒತ್ತಡಕ್ಕೆ ಮಣಿದು ಒಂದೇ ದಿನದಲ್ಲಿ ಈ ಶಾಲೆಗಳನ್ನು ಮುಚ್ಚಲು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆದಿದೆ. ಈ ಇಡೀ ನಾಟಕ ನಡೆದಿದ್ದು ಶಾಲೆಗಳನ್ನು ಮುಚ್ಚಿ ಅಲ್ಲಿನ ಜಾಗ ಕಬಳಿಸುವ ಹುನ್ನಾರವೇ?
ಕನ್ನಡ ಶಾಲೆಗಳನ್ನು ಮುಚ್ಚಿ ರಾಜಕಾರಣಿಗಳ ಮಾಲೀಕತ್ವದ ಖಾಸಗಿ ಶಾಲೆಗಳ ಬ್ಯುಸಿನೆಸ್ ಹೆಚ್ಚಿಸುವುದಕ್ಕಾಗಿಯೇ? ಒಂದೆಡೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಕೆಲಸವನ್ನೂ ಮಾಡದೇ, ಇನ್ನೊಂದೆಡೆ ಖಾಸಗಿ ಶಾಲೆಗಳಿಂದ ಶಿಕ್ಷನವನ್ನು ವ್ಯಾಪಾರೀಕರಣವನ್ನೂ ತಡೆಯದಿದ್ದರೆ, ಬಡ ಮಕ್ಕಳ ಶಿಕ್ಷಣದ ಗತಿಯೇನು? ಇದಕ್ಕೆ ಮಾನ್ಯ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರೇ ಉತ್ತರ ನೀಡಬೇಕಿದೆ!
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಶಾಲಾ ಕೊಠಡಿಗಳು, ಸ್ವಚ್ಛತೆ, ಇವೆಲ್ಲವೂ ಸರಿಯಾಗಿ ಇಲ್ಲದಿದ್ದರೂ ತಮ್ಮ ಮಕ್ಕಳು ಓದು-ಬರಹ ಕಲಿಯಲಿ ಎಂಬ ಏಕೈಕ ಆಸೆಯಿಂದ ಪೋಷಕರು ಅವರನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುತ್ತಾರೆ.

ಮಕ್ಕಳ ಕೊರತೆ ಕಾರಣವೇ?: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನೂ ಕಲ್ಪಿಸಲಾಗದ ಶಿಕ್ಷಣ ಸಚಿವರು ಮಕ್ಕಳ ಕೊರತೆಯ ನೆಪವೊಡ್ಡಿ ಶಾಲೆಗಳನ್ನು ಮುಚ್ಚಲು ಹೊರಟಿದ್ದು ಇಡೀ ರಾಜ್ಯಕ್ಕೆ ದುರದೃಷ್ಟಕರ ಸಂಗತಿ. ಆದರೆ ಒಂದೊಮ್ಮೆ ತಮ್ಮ ಮಕ್ಕಳು ಓದುವ ಶಾಲೆ ಮುಚ್ಚಬಹುದು ಎಂಬ ಭಯ ಮೂಡಿದರೆ, ಪೋಷಕರು ಈ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಹೆದರುತ್ತಾರೆ.
ಪೋಷಕರನ್ನು ಹೆದರಿಸಿ, ಅವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸದಂತೆ ಮಾಡಿ ಮಕ್ಕಳ ಕೊರತೆಯನ್ನು ನೆಪವೊಡ್ಡಿ ಈ ಪ್ರಮಾಣದಲ್ಲಿ ಶಾಲೆಗಳನ್ನು ಮುಚ್ಚುವುದು ಶಿಕ್ಷಣ ಸಚಿವರ ಪಿತೂರಿಯಾಗಿದೆ. ಪೋಷಕರ ಅಸಹಾಯಕ ಸ್ಥಿತಿ ಕಿವುಡು ಹಾಗೂ ಕುರುಡು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಲೆಕ್ಕಕ್ಕೇ ಇಲ್ಲದಾಗಿದೆ.
ಖಾಸಗಿ ಶಾಲೆಗಳ ಅಕ್ರಮ ಡೊನೇಷನ್, ಆರ್ ಟಿಐ ಮೂಲಕ ಪ್ರವೇಶ ಪಡೆಯುವ ಬಡ ಮಕ್ಕಳಿಗೆ ಹೆಚ್ಚುವರಿ ಶುಲ್ಕ ಪಾವತಿಸದೇ ಸೀಟು ದೊರೆಯದ ಪರಿಸ್ಥಿತಿ, ಅನಿಯಮಿತ ಶಾಲಾ ಶುಲ್ಕ, ಇವೆಲ್ಲವನ್ನು ನಿಯಂತ್ರಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಖಾಸಗಿ ಶಾಲೆಗಳ ಆಡಿಟ್ ನಡೆಸಿ, ಅವುಗಳ ಅಕ್ರಮ ಡೊನೇಷನ್ ಪಡೆಯುವುದಕ್ಕೆ ನಿಷೇಧ ಹೇರುವಂತೆ ಆಮ್ ಆದ್ಮಿ ಪಾರ್ಟಿ-ಕರ್ನಾಟಕ ಸತತವಾಗಿ ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೇರುತ್ತಾ ಬಂದಿದೆ.
ಆಮ್ ಆದ್ಮಿ ಪಾರ್ಟಿಯ ಪ್ರಯತ್ನದಿಂದಾಗಿ, ಆರ್ ಟಿಐ ಅಡಿಯಲ್ಲಿ ಪ್ರವೇಶ ಪಡೆಯುಲು ಅದೇ ವಾರ್ಡ್ ನ ನಿವಾಸಿಯಾಗಿರಬೇಕೆಂಬ ನಿಯಮವನ್ನು ಸರ್ಕಾರ ತೊಡೆದುಹಾಕಿ ಮಿತಿಯನ್ನು 1 ಕಿಮೀ ವ್ಯಾಪ್ತಿಗೆ ಹೆಚ್ಚಿಸಿತು.
ಈ ದೇಶದ ಪ್ರತಿಯೊಂದು ಮಗುವಿಗೂ ಅತ್ಯುನ್ನತ್ತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಆದರೆ ತಮ್ಮದೇ ಕ್ಷೇತ್ರದ ಕಿನ್ನಲಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಬಿಸಿಯೂಟಕ್ಕೆ ಅಕ್ಕಿಯನ್ನೂ ಒದಗಿಸಲಾಗದ ಶಿಕ್ಷಣ ಸಚಿವರು, ಇನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೇಗೆ ಒದಗಿಸಬಲ್ಲರು? ಇಂತಹ ಬೇಜವಾಬ್ದಾರಿ ಹಾಗೂ ಅಸಮರ್ಥ ಶಿಕ್ಷಣ ಮಂತ್ರಿಗಳು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಮ್ ಆದ್ಮಿ ಪಾರ್ಟಿ-ಕರ್ನಾಟಕ ಆಗ್ರಹಿಸುತ್ತದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications