ಸಚಿವ ಎಚ್ಸಿ ಮಹದೇವಪ್ಪ 'ಶೂ' ಪ್ರಕರಣ: ಕ್ಷಮೆಯಾಚನೆಗೆ ಎಎಪಿ ಆಗ್ರಹ
ಬೆಂಗಳೂರು, ನವೆಂಬರ್ 08: ರಾಜ್ಯ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಮ್ಮ ಗನ್ ಮ್ಯಾನ್ ನಿಂದ ಶೂ ಹಾಕಿಸಿಕೊಳ್ಳುತ್ತಿರುವ ಪ್ರಕರಣವನ್ನು ಆಮ್ ಆದ್ಮಿ ಪಕ್ಷವು (ಎಎಪಿ) ತೀವ್ರವಾಗಿ ಖಂಡಿಸಿದೆ. ಈ ನಿಮಿತ್ತ ಸಚಿವರು ರಾಜ್ಯ ಜನತೆ ಮುಂದೆ ಕೂಡಲೇ ಕ್ಷಮೆ ಕೇಳಬೇಕು ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ಪ್ರತಿಪಾದಿಸಿಕೊಂಡು ಬಂದ ಸಾಮಾಜಿಕ ನ್ಯಾಯ, ಸಮಾನತೆಯ ತತ್ವಗಳಿಗೆ ಸಂಪೂರ್ಣ ಎಳ್ಳು ನೀರು ಬಿಟ್ಟು ಅಧಿಕಾರದ ಮದದಿಂದ ಈ ರೀತಿಯ ವರ್ತನೆಗಳನ್ನು ಮಾಡುವುದನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಅವರು ಕಿಡಿ ಕಾರಿದರು.

ಮಂತ್ರಿಗಳಾದ ನೀವು ಈ ರೀತಿಯ ವರ್ತನೆ ತೋರಿದ್ದೀರಿ. ಹೀಗಾದರೆ ಶೋಷಣೆ ಒಳಗಾಗಿರುವ ಸಮುದಾಯಗಳು ಎಷ್ಟರಮಟ್ಟಿಗೆ ನಿಮ್ಮಿಂದ ನ್ಯಾಯವನ್ನು ಪಡೆದುಕೊಳ್ಳುತ್ತವೆ ಎಂಬ ಪ್ರಶ್ನೆ ಎದ್ದಿದೆ. ನಿಮ್ಮಂತಹ ಬಲಿತ, ದೂರ್ತ ರಾಜಕಾರಣಿಗಳು ಈಗಾಗಲೇ ರಾಜಕಾರಣದಿಂದ ಹೆಸರಿಲ್ಲದೆ ಅಳಿಸಿ ಹೋಗಿದ್ದಾರೆ.
ಮುಂಬರುವ ದಿವಸಗಳಲ್ಲಿ ಇದೇ ಸಾಲಿನಲ್ಲಿ ತಾವು ಸಹ ಅಳಿಸಿ ಹೋಗುವ ಮೊದಲು ನಿಮ್ಮ ಈ ಕೃತ್ಯಕ್ಕೆ ಬಳಸಿಕೊಂಡ ಆ ಪೊಲೀಸ್ ಗನ್ ಮ್ಯಾನ್ ಮುಂದೆ ಹಾಗೂ ರಾಜ್ಯದ ಜನತೆಯ ಮುಂದೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಈ ಮೂಲಕ ಆದ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದರು.
ಘಟನೆಯ ವಿವರಣೆ
ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವ ಎಚ್ಸಿ ಮಹಾದೇವಪ್ಪ ಅವರು ಬುಧವಾರ ಧಾರವಾಡದ ಡಿಸಿ ಕಾಂಪೌಂಡ್ ಬಳಿ ಇರುವ ಗೌರಿ ಶಂಕರ್ ಹಾಸ್ಟೆಲ್ ಭೇಟಿ ನೀಡಿದ್ದರು. ಅಡುಗೆ ಮನೆಗೆ ತೆರಳುವಾಗ ಶೂ ಬಿಚ್ಚಿ ಒಳನಡೆದಿದ್ದರು. ಹಾಸ್ಟೇಲ್ ಕೋಣೆ, ಅಡುಗೆ ಮನೆ ಪರಿಶೀಲನೆ ಮಾಡಿ ಮತ್ತೆ ಹೊರ ಬಂದಾಗ ಸಚಿವರ ಬೆಂಗಾವಲು ಸಿಬ್ಬಂದಿ ಅವರ ಶೂ ಹಾಕಿದ್ದರು. ಸಿಬ್ಬಂದಿಯಿಂದ ಶೂ ಹಾಕಿಸಿಕೊಂಡ ಎಚ್ಸಿ ಮಹಾದೇವಪ್ಪ ಅವರ ಈ ನಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಎಎಪಿಯು ಸಚಿವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್











Click it and Unblock the Notifications