ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ನಿಧನ: ಕರ್ನಾಟಕದಲ್ಲಿ ಶಾಲೆ-ಕಾಲೇಜುಗಳಿಗೆ ರಜಾ

|
Google Oneindia Kannada News

ಬೆಂಗಳೂರು, ಆಗಸ್ಟ್ 16: ಮಾಜಿ ಪ್ರಧಾನಿ- ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ-ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ.

ಇನ್ನು ವಾಜಪೇಯಿ ಅವರ ನಿಧನಕ್ಕೆ ದೇಶದಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅಂದರೆ ಆಗಸ್ಟ್ ಇಪ್ಪತ್ತೆರಡನೇ ತಾರೀಕಿನವರೆಗೆ ಕೇಂದ್ರ ಸರಕಾರದಿಂದ ಭಾರತದಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ.

ಏಮ್ಸ್ ನಿಂದ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಏನಿದೆ?ಏಮ್ಸ್ ನಿಂದ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಏನಿದೆ?

ದೆಹಲಿಯಲ್ಲಿ ಶಾಲೆಗಳಿಗೆ ಶುಕ್ರವಾರ ರಜಾ ಘೋಷಣೆ ಮಾಡಲಾಗಿದೆ. ವಿಜಯ್ ಘಾಟ್ ನಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಮಾಧಿ ಪಕ್ಕದಲ್ಲೇ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಮಾಡಲಾಗುತ್ತದೆ. ಇದಕ್ಕಾಗಿ ಒಂದೂವರೆ ಎಕರೆ ಜಾಗ ಮೀಸಲಾಗಿಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

AB Vajapayee demise: Holiday for school and colleges in Karnataka

ವಾಜಪೇಯಿ ಅವರ ಅಂತಿಮ ದರ್ಶನ ಪಡೆಯಲು ಶುಕ್ರವಾರ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೆರಳಲಿದ್ದಾರೆ. ದೆಹಲಿಯ ಏಮ್ಸ್ ನಲ್ಲಿ ಗುರುವಾರ ಸಂಜೆ ಐದು ಗಂಟೆಗೆ ವಾಜಪೇಯಿ ಅವರು ನಿಧನರಾದರು. ಅವರ ನಿಧನಕ್ಕೆ ದೇಶದಾದ್ಯಂತ ಇರುವ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರ

ಈ ಸಾವಿನಿಂದ ತುಂಬಲಾರದ ನಿರ್ವಾತವೊಂದು ಸೃಷ್ಟಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋಡಿ ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.

English summary
There is holiday declared for school and colleges in Karnataka on Friday. After the demise of former PM Atal Bihari Vajapayee on Thursday, holiday declared for school and colleges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X