‘ಪುಂಡ ಪೋಕರಿ’ ಎಂದು ಬೈಯ್ದಾತನ ವಿರುದ್ಧದ ಎಫ್ಐಆರ್ ರದ್ದು ಇಲ್ಲ..!
ಬೆಂಗಳೂರು ಮೇ 27. ಪತಿಯನ್ನು 'ಪುಂಡ ಪೋಕರಿ' ಎಂದು ಕರೆದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸಿದ್ದ ವ್ಯಕ್ತಿಯ ವಿರುದ್ಧದ ಎಫ್ಐಆರ್ ರದ್ದುಪಡಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಶ್ರೀನಿವಾಸರಾಜು ಎಂಬುವರು ತಮ್ಮ ವಿರುದ್ಧ ಯಲಹಂಕ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.
ಒಬ್ಬರಿಗಿಂತ ಮತ್ತೊಬ್ಬ ಗ್ರಹಿಕೆ ಭಿನ್ನ:
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಿದೆ. ಅಲ್ಲದೆ, 'ಪುಂಡ ಪೋಕರಿ' ಎಂದು ಕರೆದರೆ ಅದು ಆತ್ಮಹತ್ಯೆ ಪ್ರಚೋದನೆಯಾಗುವುದಿಲ್ಲ ಎಂಬ ಅರ್ಜಿದಾರರ ವಾದ ಸರಾಸಗಟಾಗಿ ತಳ್ಳಿಹಾಕಿದೆ.

"ಶಬ್ದಗಳ ಗ್ರಹಿಕೆ ಒಬ್ಬ ವ್ಯಕ್ತಿಗಿಂತ ವ್ಯಕ್ತಿಯ ನಡುವೆ ವಿಭಿನ್ನವಾಗಿರುತ್ತದೆ. ಕೆಲವರು ಬೈಗುಳಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ, ಕೆಲವು ಸೂಕ್ಷ್ಮ ಮನಸ್ಸಿನವರು ಅದನ್ನೇ ತುಂಬಾ ಗಂಭೀರವಾಗಿ ತೆಗೆದುಕೊಳ್ಳಬಹುದು. ಆದ್ದರಿಂದ, ಈ ಹಂತದಲ್ಲಿ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ '' ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ದೂರುದಾರರನ್ನು ಪುಂಡ ಪೋಕರಿ ಎಂದು ಶ್ರೀನಿವಾಸ ರಾಜು ಕರೆದಿರುವ ವಿಚಾರವನ್ನು ಅವರ ಪರ ವಕೀಲರೆ ಒಪ್ಪಿಕೊಂಡು, ಅದು ಪ್ರಚೋದನೆಯಾಗುವುದಿಲ್ಲವೆಂದು ವಾದಿಸುತ್ತಿದ್ದಾರೆ. ಆದರೆ, ಬೈಗುಳ ಶಬ್ದವನ್ನು ಯಾರು, ಹೇಗೆ ಸ್ವೀಕರಿಸುತ್ತಾರೆಂಬುದರ ಮೇಲೆ ಆಧರಿಸುತ್ತದೆ ಎಂದು ಹೇಳಿದೆ.
ಅಲ್ಲದೆ, ಈ ಹಂತದಲ್ಲಿ ಆರೋಪಿ ಬಳಸಿರುವ ಶಬ್ದವು ದೂರುದಾರರ ಮಾನಹಾನಿ ಮಾಡಿದೆ ಎಂಬುದಾಗಿ ತೀರ್ಮಾನಿಸಲು ಸಾಧ್ಯವಾಗುವುದಿಲ್ಲ. ಅಧೀನ ಕೋರ್ಟ್ ನಲ್ಲಿಯೇ ವಿಚಾರಣೆಯಲ್ಲಿಯೇ ಇದು ನಿರ್ಧಾರವಾಗಬೇಕಿದೆ. ಆದ್ದರಿಂದ ಪುಂಡ ಪೋಕರಿ ಎಂಬ ಶಬ್ದವು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 500 (ಮಾನ ಹಾನಿ) ಅನ್ವಯಿಸುವುದಿಲ್ಲ ಎಂಬ ಅರ್ಜಿದಾರರ ವಾದ ಒಪ್ಪಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ವಿವರ:
ನ್ಯಾಯಾಂಗ ಬಡಾವಣೆ ನಿವಾಸಿ ಎಚ್.ಎಂ. ವೆಂಕಟೇಶ್, ಕೊಡಿಗೆಹಳ್ಳಿ ಸರ್ವೇ ನಂ 101/2ರಲ್ಲಿ ಸರ್ಕಾರಿ ಜಮೀನನ್ನು ವಿ.ಶ್ರೀನಿವಾಸರಾಜು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ 2012ರಲ್ಲಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಶ್ರಿನಿವಾಸರಾಜು ಅವರು, ವೆಂಕಟೇಶ್ ಪತ್ನಿ ಸುಮನಾಗೆ ಪದೇ ಪದೇ ದೂರವಾಣಿ ಕರೆ ಮಾಡಿ ಹೆದರಿಸುತ್ತಿದ್ದರು. ಹಾಗಾಗಿ ಖಿನ್ನತೆಗೆ ಒಳಗಾಗಿ ಗಂಭೀರ ಸ್ಥಿತಿಗೆ ತಲುಪಿದ್ದ ಸುಮನಾ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ನಂತರ ಶ್ರೀನಿವಾಸ ರಾಜು ಅವರು, ವೆಂಕಟೇಶ್ ಅವರನ್ನು 'ಪುಂಡ ಪೋಕರಿ' ಎಂದು ಜರಿದಿದ್ದರು. ಮನನೊಂದ ಸುಮನಾ 2012ರ ಆ.16ರಂದು ನೇಣು ಹಾಕಿಕೊಂಡಿದ್ದರು. ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಶ್ರೀನಿವಾಸರಾಜು ಕಾರಣವಾಗಿದ್ದಾರೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಯಲಹಂಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅವರು ಆರೋಪ ಸಂಬಂಧ ಎಫ್ಐಆರ್ ದಾಖಲಿಸಿದ್ದು, ಅದನ್ನು ರದ್ದು ಕೋರಿ ಶ್ರೀನಿವಾಸ ರಾಜು ಹೈಕೋರ್ಟ್ ಮೆಟ್ಟಿಲೇರಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications